<p><strong>ನವದೆಹಲಿ</strong>: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜೀವ್ ಗಾಂಧಿ ಕಾರ್ಯವೈಖರಿಯನ್ನು ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕಿದರು.</p>.<p>‘ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಭಾರಿ ಬಹುಮತ ಇದ್ದಾಗ್ಯೂ, ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದರು. ಸಂಸತ್ ಹಾಗೂ ಪ್ರಜಾಪ್ರಭುತ್ವಕ್ಕೂ ಉತ್ತರದಾಯಿಯಾಗಿದ್ದರು’ ಎಂದು ಹೇಳಿದರು.</p>.<p>ರಾಜೀವ್ ಗಾಂಧಿ ಅವರ ಜಯಂತಿ ಅಂಗವಾಗಿ ರಾಜಸ್ಥಾನ ಮೂಲದ ವನಸ್ಥಲಿ ವಿದ್ಯಾಪೀಠಕ್ಕೆ ರಾಜೀವ್ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಮರ್ಪಕವಾದ ಚರ್ಚೆ ನಂತರ ಹಲವಾರು ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಈಗಿರುವ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಮಸೂದೆಗಳ ಮೇಲೆ ಚರ್ಚೆ ನಡೆಯುವುದು ಬೇಕಿಲ್ಲ. ಹಾಗೆಯೇ ಅಂಗೀಕರಿಸಲಾಗುತ್ತಿದೆ’ ಎಂದರು.</p>.<p>ಪಕ್ಷಾಂತರ ನಿಷೇಧ ಮಸೂದೆ ಬಗ್ಗೆ ವಿರೋಧ ಪಕ್ಷಗಳು ಹಲವು ಆಕ್ಷೇಪಗಳನ್ನು ಎತ್ತಿದ್ದವು. ಅವುಗಳನ್ನು ಒಪ್ಪಿಕೊಂಡಿದ್ದ ರಾಜೀವ್ ಗಾಂಧಿ, ಮಸೂದೆಯಿಂದ ಕೆಲ ಅಂಶಗಳನ್ನು ತೆಗೆದುಹಾಕಿದ್ದರು. ಇದು ಆಗಿನ ಪ್ರಜಾತಾಂತ್ರಿಕ ಸಂಪ್ರದಾಯವಾಗಿತ್ತು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜೀವ್ ಗಾಂಧಿ ಕಾರ್ಯವೈಖರಿಯನ್ನು ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕಿದರು.</p>.<p>‘ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಭಾರಿ ಬಹುಮತ ಇದ್ದಾಗ್ಯೂ, ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದರು. ಸಂಸತ್ ಹಾಗೂ ಪ್ರಜಾಪ್ರಭುತ್ವಕ್ಕೂ ಉತ್ತರದಾಯಿಯಾಗಿದ್ದರು’ ಎಂದು ಹೇಳಿದರು.</p>.<p>ರಾಜೀವ್ ಗಾಂಧಿ ಅವರ ಜಯಂತಿ ಅಂಗವಾಗಿ ರಾಜಸ್ಥಾನ ಮೂಲದ ವನಸ್ಥಲಿ ವಿದ್ಯಾಪೀಠಕ್ಕೆ ರಾಜೀವ್ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಮರ್ಪಕವಾದ ಚರ್ಚೆ ನಂತರ ಹಲವಾರು ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಈಗಿರುವ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಮಸೂದೆಗಳ ಮೇಲೆ ಚರ್ಚೆ ನಡೆಯುವುದು ಬೇಕಿಲ್ಲ. ಹಾಗೆಯೇ ಅಂಗೀಕರಿಸಲಾಗುತ್ತಿದೆ’ ಎಂದರು.</p>.<p>ಪಕ್ಷಾಂತರ ನಿಷೇಧ ಮಸೂದೆ ಬಗ್ಗೆ ವಿರೋಧ ಪಕ್ಷಗಳು ಹಲವು ಆಕ್ಷೇಪಗಳನ್ನು ಎತ್ತಿದ್ದವು. ಅವುಗಳನ್ನು ಒಪ್ಪಿಕೊಂಡಿದ್ದ ರಾಜೀವ್ ಗಾಂಧಿ, ಮಸೂದೆಯಿಂದ ಕೆಲ ಅಂಶಗಳನ್ನು ತೆಗೆದುಹಾಕಿದ್ದರು. ಇದು ಆಗಿನ ಪ್ರಜಾತಾಂತ್ರಿಕ ಸಂಪ್ರದಾಯವಾಗಿತ್ತು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>