<p><strong>ನವದೆಹಲಿ:</strong> ಕೇಂದ್ರ ಸರ್ಕಾರವು ಬಡವರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ. ಬಡವರ ಶಾಸನಬದ್ಧ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. </p>.<p>ನರೇಗಾ ಯೋಜನೆಯನ್ನು (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ವಿಬಿ-ಜಿ ರಾಮ್ ಜಿ ಯೋಜನೆಯನ್ನಾಗಿ ಜಾರಿಗೊಳಿಸಿರುವುದನ್ನು ವಿರೋಧಿಸಿ ದೆಹಲಿಯ ಕಾಂಗ್ರೆಸ್ ಘಟಕವು, ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ‘ನರೇಗಾ ರಕ್ಷಿಸಿ ಸಂಗ್ರಾಮ ಯಾತ್ರೆ’ ಪ್ರತಿಭಟನೆ ನಡೆಸಿತು. </p>.<p>ಈ ವೇಳೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ನರೇಗಾ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗದ ಹಕ್ಕನ್ನು ನೀಡಿದೆ. ವಿಬಿ-ಜಿ ರಾಮ್ ಜಿ ಯೋಜನೆಯು ನರೇಗಾದ ಮೂಲ ಚೈತನ್ಯವನ್ನು ದುರ್ಬಲಗೊಳಿಸುತ್ತದೆ’ ಎಂದರು. </p>.<p>‘ಸರ್ಕಾರದ ಕ್ರಮಗಳು ಬಡವರ ಮೇಲೆ ದಾಳಿಯನ್ನು ಸೂಚಿಸುತ್ತದೆ. ಬಡವರನ್ನು ಬೆಂಬಲಿಸುವ ವ್ಯವಸ್ಥೆಗಳನ್ನು ಕ್ರಮೇಣವಾಗಿ ತೆಗೆದು ಹಾಕಲಾಗುತ್ತಿದೆ’ ಎಂದು ಕಾಂಗ್ರೆಸ್ನ ದೆಹಲಿ ಘಟಕದ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದರು. </p>.<p>ವಿಬಿ-ಜಿ ರಾಮ್ ಜಿ ಯೋಜನೆಯನ್ನು ತೆಗೆದು ಹಾಕಿ, ನರೇಗಾವನ್ನು ಮರುಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ‘ನರೇಗಾ ರಕ್ಷಿಸಿ ಸಂಗ್ರಾಮ ಯಾತ್ರೆ’ ಪ್ರತಿಭಟನೆ ಹಮ್ಮಿಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರವು ಬಡವರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ. ಬಡವರ ಶಾಸನಬದ್ಧ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. </p>.<p>ನರೇಗಾ ಯೋಜನೆಯನ್ನು (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ವಿಬಿ-ಜಿ ರಾಮ್ ಜಿ ಯೋಜನೆಯನ್ನಾಗಿ ಜಾರಿಗೊಳಿಸಿರುವುದನ್ನು ವಿರೋಧಿಸಿ ದೆಹಲಿಯ ಕಾಂಗ್ರೆಸ್ ಘಟಕವು, ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ‘ನರೇಗಾ ರಕ್ಷಿಸಿ ಸಂಗ್ರಾಮ ಯಾತ್ರೆ’ ಪ್ರತಿಭಟನೆ ನಡೆಸಿತು. </p>.<p>ಈ ವೇಳೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ನರೇಗಾ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗದ ಹಕ್ಕನ್ನು ನೀಡಿದೆ. ವಿಬಿ-ಜಿ ರಾಮ್ ಜಿ ಯೋಜನೆಯು ನರೇಗಾದ ಮೂಲ ಚೈತನ್ಯವನ್ನು ದುರ್ಬಲಗೊಳಿಸುತ್ತದೆ’ ಎಂದರು. </p>.<p>‘ಸರ್ಕಾರದ ಕ್ರಮಗಳು ಬಡವರ ಮೇಲೆ ದಾಳಿಯನ್ನು ಸೂಚಿಸುತ್ತದೆ. ಬಡವರನ್ನು ಬೆಂಬಲಿಸುವ ವ್ಯವಸ್ಥೆಗಳನ್ನು ಕ್ರಮೇಣವಾಗಿ ತೆಗೆದು ಹಾಕಲಾಗುತ್ತಿದೆ’ ಎಂದು ಕಾಂಗ್ರೆಸ್ನ ದೆಹಲಿ ಘಟಕದ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದರು. </p>.<p>ವಿಬಿ-ಜಿ ರಾಮ್ ಜಿ ಯೋಜನೆಯನ್ನು ತೆಗೆದು ಹಾಕಿ, ನರೇಗಾವನ್ನು ಮರುಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ‘ನರೇಗಾ ರಕ್ಷಿಸಿ ಸಂಗ್ರಾಮ ಯಾತ್ರೆ’ ಪ್ರತಿಭಟನೆ ಹಮ್ಮಿಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>