<p><strong>ನವದೆಹಲಿ:</strong> ಎ.ಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಯುವ ಘಟಕ ಅಂಗಿ ತೆಗೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿತೂರಿ ಇದೆ ಎಂದು ಬಿಜೆಪಿ ಮಂಗಳವಾರ ಆರೋಪಿಸಿದೆ. </p><p>ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ರಾಹುಲ್ ಗಾಂಧಿ ಸೂಚನೆಯ ಮೇರೆಗೆ ಕಾಂಗ್ರೆಸ್ ಯುವ ಘಟಕ ಈ ಪ್ರತಿಭಟನೆ ನಡೆಸಿದೆ ಎಂದು ಅವರು ದೂರಿದ್ದಾರೆ.</p>.ಎ.ಐ ಶೃಂಗಸಭೆ: ನಿರ್ಣಯಕ್ಕೆ 88 ರಾಷ್ಟ್ರಗಳ ಸಹಮತ.ಎ.ಐ ಶೃಂಗಸಭೆ: ಬಿಲ್ ಗೇಟ್ಸ್ ಪಾಲ್ಗೊಳ್ಳುವಿಕೆ ಬಗ್ಗೆ ಗೊಂದಲ.<p>ಶೃಂಗಸಭೆಯಲ್ಲಿ ಅರಾಜಕತೆ ಸೃಷ್ಟಿಸಿ ದೇಶದ ಗೌರವ ಹಾಳು ಮಾಡುವ ಉದ್ದೇಶದಿಂದ ಈ ಪ್ರತಿಭಟನೆ ಮಾಡಲಾಗಿದೆ. ಇಂತಹ ಕೃತ್ಯವನ್ನು ಸಂಘಟಿಸಿದ ವ್ಯಕ್ತಿಗೆ ಶಿಕ್ಷೆಯಾಗಬೇಕು ಎಂದು ಗೌರವ್ ಭಾಟಿಯಾ ಹೇಳಿದರು. </p><p>ಈ ಘಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ದೆಹಲಿ ನ್ಯಾಯಾಲಯ ನಾಲ್ಕು ದಿನ ಅವರನ್ನು ಪೊಲೀಸ್ ಬಂಧನಕ್ಕೆ ಒಪ್ಪಿಸಿದೆ.</p><p>ರಾಹುಲ್ ಗಾಂಧಿ ತಾನು ಕಾನೂನಿಗಿಂತ ದೊಡ್ಡವನು ಎಂಬ ಭಾವನೆ ಹೊಂದಿರಬಹುದು. ಆದರೆ ದೇಶದ ಗೌರವ ಹಾಳು ಮಾಡಲು ಯತ್ನಿಸಿದ ವ್ಯಕ್ತಿ ಯಾರು ಆಗಿರಲಿ ಅವರಿಗೆ ಕಾನೂನಿನ ಶಿಕ್ಷೆಯಾಗಲಿದೆ ಎಂದರು. </p><p>ಪೊಲೀಸ್ ಬಂಧನದಲ್ಲಿರುವ ಉದಯ್ ಭಾನು ತನಿಖೆ ವೇಳೆ ಸತ್ಯವನ್ನು ಹೇಳುವರು. ಈ ಘಟನೆಗೆ ಕಾರಣರಾದವರ ಹೆಸರನ್ನು ಬಹಿರಂಗಪಡಿಸುವರು. ಆಗ ದೇಶದ ಜನತೆಗೆ ಸತ್ಯ ಗೊತ್ತಾಗುತ್ತದೆ ಎಂದು ಅವರು ಹೇಳಿದರು.</p><p> ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎ.ಐ ಶೃಂಗಸಭೆಯ ‘ಎಕ್ಸ್ಪೋ’ ನಡೆದಿದ್ದ ಹಾಲ್ನಲ್ಲಿ ಕಳೆದ ಶುಕ್ರವಾರ ಕೆಲಹೊತ್ತು ಪ್ರತಿಭಟನೆ ನಡೆಸಿತ್ತು.</p><p>ಕಾರ್ಯಕರ್ತರು ಟಿ–ಶರ್ಟ್ಗಳನ್ನು ಬಿಚ್ಚಿ, ಮೋದಿ ವಿರುದ್ಧ ಹಾಗೂ ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ನಂತರ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದರು.</p>
<p><strong>ನವದೆಹಲಿ:</strong> ಎ.ಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಯುವ ಘಟಕ ಅಂಗಿ ತೆಗೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿತೂರಿ ಇದೆ ಎಂದು ಬಿಜೆಪಿ ಮಂಗಳವಾರ ಆರೋಪಿಸಿದೆ. </p><p>ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ರಾಹುಲ್ ಗಾಂಧಿ ಸೂಚನೆಯ ಮೇರೆಗೆ ಕಾಂಗ್ರೆಸ್ ಯುವ ಘಟಕ ಈ ಪ್ರತಿಭಟನೆ ನಡೆಸಿದೆ ಎಂದು ಅವರು ದೂರಿದ್ದಾರೆ.</p>.ಎ.ಐ ಶೃಂಗಸಭೆ: ನಿರ್ಣಯಕ್ಕೆ 88 ರಾಷ್ಟ್ರಗಳ ಸಹಮತ.ಎ.ಐ ಶೃಂಗಸಭೆ: ಬಿಲ್ ಗೇಟ್ಸ್ ಪಾಲ್ಗೊಳ್ಳುವಿಕೆ ಬಗ್ಗೆ ಗೊಂದಲ.<p>ಶೃಂಗಸಭೆಯಲ್ಲಿ ಅರಾಜಕತೆ ಸೃಷ್ಟಿಸಿ ದೇಶದ ಗೌರವ ಹಾಳು ಮಾಡುವ ಉದ್ದೇಶದಿಂದ ಈ ಪ್ರತಿಭಟನೆ ಮಾಡಲಾಗಿದೆ. ಇಂತಹ ಕೃತ್ಯವನ್ನು ಸಂಘಟಿಸಿದ ವ್ಯಕ್ತಿಗೆ ಶಿಕ್ಷೆಯಾಗಬೇಕು ಎಂದು ಗೌರವ್ ಭಾಟಿಯಾ ಹೇಳಿದರು. </p><p>ಈ ಘಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ದೆಹಲಿ ನ್ಯಾಯಾಲಯ ನಾಲ್ಕು ದಿನ ಅವರನ್ನು ಪೊಲೀಸ್ ಬಂಧನಕ್ಕೆ ಒಪ್ಪಿಸಿದೆ.</p><p>ರಾಹುಲ್ ಗಾಂಧಿ ತಾನು ಕಾನೂನಿಗಿಂತ ದೊಡ್ಡವನು ಎಂಬ ಭಾವನೆ ಹೊಂದಿರಬಹುದು. ಆದರೆ ದೇಶದ ಗೌರವ ಹಾಳು ಮಾಡಲು ಯತ್ನಿಸಿದ ವ್ಯಕ್ತಿ ಯಾರು ಆಗಿರಲಿ ಅವರಿಗೆ ಕಾನೂನಿನ ಶಿಕ್ಷೆಯಾಗಲಿದೆ ಎಂದರು. </p><p>ಪೊಲೀಸ್ ಬಂಧನದಲ್ಲಿರುವ ಉದಯ್ ಭಾನು ತನಿಖೆ ವೇಳೆ ಸತ್ಯವನ್ನು ಹೇಳುವರು. ಈ ಘಟನೆಗೆ ಕಾರಣರಾದವರ ಹೆಸರನ್ನು ಬಹಿರಂಗಪಡಿಸುವರು. ಆಗ ದೇಶದ ಜನತೆಗೆ ಸತ್ಯ ಗೊತ್ತಾಗುತ್ತದೆ ಎಂದು ಅವರು ಹೇಳಿದರು.</p><p> ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎ.ಐ ಶೃಂಗಸಭೆಯ ‘ಎಕ್ಸ್ಪೋ’ ನಡೆದಿದ್ದ ಹಾಲ್ನಲ್ಲಿ ಕಳೆದ ಶುಕ್ರವಾರ ಕೆಲಹೊತ್ತು ಪ್ರತಿಭಟನೆ ನಡೆಸಿತ್ತು.</p><p>ಕಾರ್ಯಕರ್ತರು ಟಿ–ಶರ್ಟ್ಗಳನ್ನು ಬಿಚ್ಚಿ, ಮೋದಿ ವಿರುದ್ಧ ಹಾಗೂ ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ನಂತರ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದರು.</p>