<p><strong>ನವದೆಹಲಿ:</strong> ಪ್ರತಿಯೊಬ್ಬ ಭಾರತೀಯನ ಮತದಾನದ ಹಕ್ಕಿಗಾಗಿ ವಿರೋಧ ಪಕ್ಷಗಳು ಹೋರಾಟ ನಡೆಸುತ್ತಿದ್ದು, ಸ್ವಚ್ಛ ಹಾಗೂ ಸರಿಯಾದ ಮತದಾರರ ಪಟ್ಟಿಗಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. </p><p>'ಮತ ಕಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷಗಳ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. </p><p>'ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ನಡೆಸಿದ ಪರಿಶೀಲನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ನಕಲಿಯಾಗಿವೆ ಎಂದು ಸಾಬೀತಾದರೂ ಚುನಾವಣಾ ಆಯೋಗವು ಮೌನ ವಹಿಸುತ್ತಿದೆ. ಸತ್ಯ ಇಡೀ ದೇಶದ ಮುಂದಿದೆ' ಎಂದು ಅವರು ಹೇಳಿದ್ದಾರೆ. </p><p>'ದೇಶದ ಮುಂದೆ ಸತ್ಯಾಂಶ ಇದ್ದು, ಚುನಾವಣಾ ಆಯೋಗಕ್ಕೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಇದು ಕೇವಲ ರಾಜಕೀಯ ಹೋರಾಟವಲ್ಲ. ಸಂವಿಧಾನವನ್ನು ಉಳಿಸುವ ಹೋರಾಟ' ಎಂದು ಅವರು ಪ್ರತಿಪಾದಿಸಿದ್ದಾರೆ. </p><p>'ಒಬ್ಬ ವ್ಯಕ್ತಿಗೆ ಒಂದು ಮತ' ಹಕ್ಕಿಗಾಗಿ ಈ ಹೋರಾಟ ನಡೆಯುತ್ತಿದೆ. ನಾವು ಸ್ವಚ್ಛ ಹಾಗೂ ಸರಿಯಾದ ಮತದಾರರ ಪಟ್ಟಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. </p>.ಇದು ಮಾಡು ಇಲ್ಲವೇ ಮಡಿ ಹೋರಾಟ | ಮತ ಕಳವು ತನಿಖೆ ಮಾಡಿ: ರಾಹುಲ್ ಗಾಂಧಿ.ಮತಗಳ್ಳತನ ಆರೋಪ: ರಾಹುಲ್ ಗಾಂಧಿ ಮೆದುಳಿನಲ್ಲಿ ಚಿಪ್ ಕಾಣೆಯಾಗಿದೆ ಎಂದ ಫಡಣವೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರತಿಯೊಬ್ಬ ಭಾರತೀಯನ ಮತದಾನದ ಹಕ್ಕಿಗಾಗಿ ವಿರೋಧ ಪಕ್ಷಗಳು ಹೋರಾಟ ನಡೆಸುತ್ತಿದ್ದು, ಸ್ವಚ್ಛ ಹಾಗೂ ಸರಿಯಾದ ಮತದಾರರ ಪಟ್ಟಿಗಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. </p><p>'ಮತ ಕಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷಗಳ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. </p><p>'ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ನಡೆಸಿದ ಪರಿಶೀಲನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ನಕಲಿಯಾಗಿವೆ ಎಂದು ಸಾಬೀತಾದರೂ ಚುನಾವಣಾ ಆಯೋಗವು ಮೌನ ವಹಿಸುತ್ತಿದೆ. ಸತ್ಯ ಇಡೀ ದೇಶದ ಮುಂದಿದೆ' ಎಂದು ಅವರು ಹೇಳಿದ್ದಾರೆ. </p><p>'ದೇಶದ ಮುಂದೆ ಸತ್ಯಾಂಶ ಇದ್ದು, ಚುನಾವಣಾ ಆಯೋಗಕ್ಕೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಇದು ಕೇವಲ ರಾಜಕೀಯ ಹೋರಾಟವಲ್ಲ. ಸಂವಿಧಾನವನ್ನು ಉಳಿಸುವ ಹೋರಾಟ' ಎಂದು ಅವರು ಪ್ರತಿಪಾದಿಸಿದ್ದಾರೆ. </p><p>'ಒಬ್ಬ ವ್ಯಕ್ತಿಗೆ ಒಂದು ಮತ' ಹಕ್ಕಿಗಾಗಿ ಈ ಹೋರಾಟ ನಡೆಯುತ್ತಿದೆ. ನಾವು ಸ್ವಚ್ಛ ಹಾಗೂ ಸರಿಯಾದ ಮತದಾರರ ಪಟ್ಟಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. </p>.ಇದು ಮಾಡು ಇಲ್ಲವೇ ಮಡಿ ಹೋರಾಟ | ಮತ ಕಳವು ತನಿಖೆ ಮಾಡಿ: ರಾಹುಲ್ ಗಾಂಧಿ.ಮತಗಳ್ಳತನ ಆರೋಪ: ರಾಹುಲ್ ಗಾಂಧಿ ಮೆದುಳಿನಲ್ಲಿ ಚಿಪ್ ಕಾಣೆಯಾಗಿದೆ ಎಂದ ಫಡಣವೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>