<p><strong>ಸಹರ್ಸ:</strong> 'ದೇಶ ಹಾಗೂ ಬಿಹಾರವನ್ನು ಅವಮಾನಿಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ದೂಷಿಸುತ್ತಿದ್ದಾರೆ. ಅಂದ ಹಾಗೆ ಅವರು 'ಅವಮಾನ ಸಚಿವಾಲಯವನ್ನು' ತೆರೆಯಬೇಕು' ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಸೋಮವಾರ) ವಾಗ್ದಾಳಿ ನಡೆಸಿದ್ದಾರೆ. </p><p>ಸಹರ್ಸ ಜಿಲ್ಲೆಯ ಸೋನಾಬರ್ಸಾದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, 'ಪ್ರಧಾನಿ ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಎನ್ಡಿಎ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫ್ಯಲ್ಯದ ಬಗ್ಗೆ ಒಂದೇ ಒಂದು ಮಾತನ್ನು ಆಡುತ್ತಿಲ್ಲ' ಎಂದು ಆರೋಪಿಸಿದ್ದಾರೆ. </p><p>'ಚುನಾವಣೆಯ ಸಂದರ್ಭದಲ್ಲಿ ಭರವಸೆಗಳನ್ನು ನೀಡುವ ಮೊದಲು ಕಳೆದ 20 ವರ್ಷಗಳಲ್ಲಿ ಎನ್ಡಿಎ ಬಿಹಾರಕ್ಕೆ ಏನನ್ನು ಮಾಡಿದೆ ಎಂಬುದಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೊದಲು ಉತ್ತರಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>'ಬಿಹಾರದಲ್ಲಿ ಸರ್ಕಾರವನ್ನು ನಿತೀಶ್ ಕುಮಾರ್ ನಡೆಸುತ್ತಿಲ್ಲ. ಬದಲಾಗಿ 'ರಿಮೋಟ್ ಕಂಟ್ರೋಲ್' ಆಗಿ ದೆಹಲಿಯಿಂದ ಪ್ರಧಾನಿ ಹಾಗೂ ಕೇಂದ್ರ ನಾಯಕರು ನಿಯಂತ್ರಿಸುತ್ತಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ. </p><p>'ಬಿಹಾರದ ಎನ್ಡಿಎ ಸರ್ಕಾರವು ಸಂವಿಧಾನ ಖಾತ್ರಿಪಡಿಸಿದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬೆದರಿಕೆ ಒಡ್ಡುತ್ತಿ'ದೆ ಎಂದು ಅವರು ಹೇಳಿದ್ದಾರೆ. </p><p>'ರಾಜ್ಯದಲ್ಲಿ ನಿರುದ್ಯೋಗ ಹೆಚ್ಚುತ್ತಿದ್ದು, ಯುವಜನರು ರಾಜ್ಯ ಬಿಟ್ಟು ಹೋಗುತ್ತಿದ್ದಾರೆ. ಉದ್ಯೋಗ ಸೃಷ್ಟಿಸುವ ಸಾರ್ವಜನಿಕ ವಲಯಗಳನ್ನು ಬಿಜೆಪಿಯ ಕಾರ್ಪೋರೇಟ್ ಮಿತ್ರರಿಗೆ ನೀಡಲಾಗಿದೆ' ಎಂದು ಅವರು ಟೀಕಿಸಿದ್ದಾರೆ. </p>.Bihar Elections: ಸರ್ಕಾರ ರಚನೆ ಖಚಿತ, ಪ್ರಮಾಣವಚನ ದಿನಾಂಕ ಘೋಷಿಸಿದ ತೇಜಸ್ವಿ.Bihar Elections: ಒಂದು ಕೋಟಿ ಉದ್ಯೋಗದ ಭರವಸೆ ನೀಡಿದ ಎನ್ಡಿಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಹರ್ಸ:</strong> 'ದೇಶ ಹಾಗೂ ಬಿಹಾರವನ್ನು ಅವಮಾನಿಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ದೂಷಿಸುತ್ತಿದ್ದಾರೆ. ಅಂದ ಹಾಗೆ ಅವರು 'ಅವಮಾನ ಸಚಿವಾಲಯವನ್ನು' ತೆರೆಯಬೇಕು' ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಸೋಮವಾರ) ವಾಗ್ದಾಳಿ ನಡೆಸಿದ್ದಾರೆ. </p><p>ಸಹರ್ಸ ಜಿಲ್ಲೆಯ ಸೋನಾಬರ್ಸಾದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, 'ಪ್ರಧಾನಿ ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಎನ್ಡಿಎ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫ್ಯಲ್ಯದ ಬಗ್ಗೆ ಒಂದೇ ಒಂದು ಮಾತನ್ನು ಆಡುತ್ತಿಲ್ಲ' ಎಂದು ಆರೋಪಿಸಿದ್ದಾರೆ. </p><p>'ಚುನಾವಣೆಯ ಸಂದರ್ಭದಲ್ಲಿ ಭರವಸೆಗಳನ್ನು ನೀಡುವ ಮೊದಲು ಕಳೆದ 20 ವರ್ಷಗಳಲ್ಲಿ ಎನ್ಡಿಎ ಬಿಹಾರಕ್ಕೆ ಏನನ್ನು ಮಾಡಿದೆ ಎಂಬುದಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮೊದಲು ಉತ್ತರಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>'ಬಿಹಾರದಲ್ಲಿ ಸರ್ಕಾರವನ್ನು ನಿತೀಶ್ ಕುಮಾರ್ ನಡೆಸುತ್ತಿಲ್ಲ. ಬದಲಾಗಿ 'ರಿಮೋಟ್ ಕಂಟ್ರೋಲ್' ಆಗಿ ದೆಹಲಿಯಿಂದ ಪ್ರಧಾನಿ ಹಾಗೂ ಕೇಂದ್ರ ನಾಯಕರು ನಿಯಂತ್ರಿಸುತ್ತಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ. </p><p>'ಬಿಹಾರದ ಎನ್ಡಿಎ ಸರ್ಕಾರವು ಸಂವಿಧಾನ ಖಾತ್ರಿಪಡಿಸಿದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬೆದರಿಕೆ ಒಡ್ಡುತ್ತಿ'ದೆ ಎಂದು ಅವರು ಹೇಳಿದ್ದಾರೆ. </p><p>'ರಾಜ್ಯದಲ್ಲಿ ನಿರುದ್ಯೋಗ ಹೆಚ್ಚುತ್ತಿದ್ದು, ಯುವಜನರು ರಾಜ್ಯ ಬಿಟ್ಟು ಹೋಗುತ್ತಿದ್ದಾರೆ. ಉದ್ಯೋಗ ಸೃಷ್ಟಿಸುವ ಸಾರ್ವಜನಿಕ ವಲಯಗಳನ್ನು ಬಿಜೆಪಿಯ ಕಾರ್ಪೋರೇಟ್ ಮಿತ್ರರಿಗೆ ನೀಡಲಾಗಿದೆ' ಎಂದು ಅವರು ಟೀಕಿಸಿದ್ದಾರೆ. </p>.Bihar Elections: ಸರ್ಕಾರ ರಚನೆ ಖಚಿತ, ಪ್ರಮಾಣವಚನ ದಿನಾಂಕ ಘೋಷಿಸಿದ ತೇಜಸ್ವಿ.Bihar Elections: ಒಂದು ಕೋಟಿ ಉದ್ಯೋಗದ ಭರವಸೆ ನೀಡಿದ ಎನ್ಡಿಎ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>