<p><strong>ನವದೆಹಲಿ:</strong> ಚುನಾವಣಾ ಆಯೋಗವು ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ಜಾರಿಗೊಳಿಸುವ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.</p><p>ಸಂಸತ್ ಆವರಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಬಯಲಿಗೆಳೆಯುವ ಕೆಲಸ ಮುಂದುವರಿಯಲಿದೆ. ‘ಅಭಿ ಪಿಕ್ಚರ್ ಬಾಕಿ ಹೈ’ ಎಂದಿದ್ದಾರೆ.</p><p>‘ಕೇವಲ ಒಂದು ಕ್ಷೇತ್ರದಲ್ಲಿ ‘ವೋಟ್ ಚೋರಿ’ (ಮತ ಕಳವು) ನಡೆದಿಲ್ಲ. ಇತರ ಹಲವು ಕ್ಷೇತ್ರಗಳಲ್ಲೂ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಈ ಕೆಲಸವನ್ನು ರಾಷ್ಟ್ರಮಟ್ಟದಲ್ಲಿ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಅಕ್ರಮ ನಡೆದಿರುವುದು ಚುನಾವಣಾ ಆಯೋಗಕ್ಕೆ ತಿಳಿದಿದೆ. ನಮಗೂ ತಿಳಿದಿದೆ’ ಎಂದು ಹೇಳಿದರು.</p><p>‘ಮೊದಲು, ನಮ್ಮ ಬಳಿ ಪುರಾವೆಗಳು ಇರಲಿಲ್ಲ. ಆದರೆ ಈಗ ಸಾಕಷ್ಟು ಪುರಾವೆಗಳಿವೆ. ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವು ಸಂವಿಧಾನದ ಅಡಿಪಾಯವಾಗಿದೆ’ ಎಂದರು. </p><p>ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬಿಹಾರದ ಮತದಾರರ ಕರಡು ಪಟ್ಟಿಯಲ್ಲಿ 124 ವರ್ಷದ ಮಹಿಳೆ ಮಿಂತಾ ದೇವಿ ಎಂಬವರ ಹೆಸರು ಇರುವ ಬಗ್ಗೆ ಮಾಧ್ಯಮದವರು ಕೇಳಿದಾಗ, ‘ಅಂತಹ ಹಲವು ಪ್ರಕರಣಗಳಿವೆ. ಅಭಿ ಪಿಕ್ಚರ್ ಬಾಕಿ ಹೈ’ ಎಂದು ಪ್ರತಿಕ್ರಿಯಿಸಿದರು.</p><p>ರಾಹುಲ್ ಹೇಳಿಕೆಗೆ ದನಿಗೂಡಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ‘ಮತದಾರರ ಪಟ್ಟಿಯಲ್ಲಿ ಇದೇ ರೀತಿ ನಕಲಿ ವಿಳಾಸ ಮತ್ತು ಹೆಸರು ಇರುವ ಹಲವು ಪ್ರಕರಣಗಳು ಇವೆ’ ಎಂದು ಆರೋಪಿಸಿದರು.</p> <h2><strong>ಪ್ರತಿಭಟನೆ: </strong></h2><p>ಮತ ಕಳವು ಹಾಗೂ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ‘ಇಂಡಿಯಾ’ ಮೈತ್ರಿಕೂಟದ ಹಲವು ಸಂಸದರು ಸಂಸತ್ ಭವನದ ಆವರಣದಲ್ಲಿ ಮಂಗಳವಾರ ಕೂಡಾ ಪ್ರತಿಭಟನೆ ನಡೆಸಿದರು.</p>.ರಾಹುಲ್ ಗಾಂಧಿ ಅವರ ಗಂಭೀರವಾದ ಪ್ರಶ್ನೆಗಳಿಗೆ ಆಯೋಗ ಉತ್ತರ ನೀಡಬೇಕಿದೆ: ತರೂರ್.ಮತಗಳ್ಳತನ | 'ಅಣು ಬಾಂಬ್' ಇದೆ ಎಂದ ರಾಹುಲ್; ನಿರ್ಲಕ್ಷಿಸಿದ ಚುನಾವಣಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚುನಾವಣಾ ಆಯೋಗವು ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ಜಾರಿಗೊಳಿಸುವ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.</p><p>ಸಂಸತ್ ಆವರಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಬಯಲಿಗೆಳೆಯುವ ಕೆಲಸ ಮುಂದುವರಿಯಲಿದೆ. ‘ಅಭಿ ಪಿಕ್ಚರ್ ಬಾಕಿ ಹೈ’ ಎಂದಿದ್ದಾರೆ.</p><p>‘ಕೇವಲ ಒಂದು ಕ್ಷೇತ್ರದಲ್ಲಿ ‘ವೋಟ್ ಚೋರಿ’ (ಮತ ಕಳವು) ನಡೆದಿಲ್ಲ. ಇತರ ಹಲವು ಕ್ಷೇತ್ರಗಳಲ್ಲೂ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಈ ಕೆಲಸವನ್ನು ರಾಷ್ಟ್ರಮಟ್ಟದಲ್ಲಿ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಅಕ್ರಮ ನಡೆದಿರುವುದು ಚುನಾವಣಾ ಆಯೋಗಕ್ಕೆ ತಿಳಿದಿದೆ. ನಮಗೂ ತಿಳಿದಿದೆ’ ಎಂದು ಹೇಳಿದರು.</p><p>‘ಮೊದಲು, ನಮ್ಮ ಬಳಿ ಪುರಾವೆಗಳು ಇರಲಿಲ್ಲ. ಆದರೆ ಈಗ ಸಾಕಷ್ಟು ಪುರಾವೆಗಳಿವೆ. ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವು ಸಂವಿಧಾನದ ಅಡಿಪಾಯವಾಗಿದೆ’ ಎಂದರು. </p><p>ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬಿಹಾರದ ಮತದಾರರ ಕರಡು ಪಟ್ಟಿಯಲ್ಲಿ 124 ವರ್ಷದ ಮಹಿಳೆ ಮಿಂತಾ ದೇವಿ ಎಂಬವರ ಹೆಸರು ಇರುವ ಬಗ್ಗೆ ಮಾಧ್ಯಮದವರು ಕೇಳಿದಾಗ, ‘ಅಂತಹ ಹಲವು ಪ್ರಕರಣಗಳಿವೆ. ಅಭಿ ಪಿಕ್ಚರ್ ಬಾಕಿ ಹೈ’ ಎಂದು ಪ್ರತಿಕ್ರಿಯಿಸಿದರು.</p><p>ರಾಹುಲ್ ಹೇಳಿಕೆಗೆ ದನಿಗೂಡಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ‘ಮತದಾರರ ಪಟ್ಟಿಯಲ್ಲಿ ಇದೇ ರೀತಿ ನಕಲಿ ವಿಳಾಸ ಮತ್ತು ಹೆಸರು ಇರುವ ಹಲವು ಪ್ರಕರಣಗಳು ಇವೆ’ ಎಂದು ಆರೋಪಿಸಿದರು.</p> <h2><strong>ಪ್ರತಿಭಟನೆ: </strong></h2><p>ಮತ ಕಳವು ಹಾಗೂ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ‘ಇಂಡಿಯಾ’ ಮೈತ್ರಿಕೂಟದ ಹಲವು ಸಂಸದರು ಸಂಸತ್ ಭವನದ ಆವರಣದಲ್ಲಿ ಮಂಗಳವಾರ ಕೂಡಾ ಪ್ರತಿಭಟನೆ ನಡೆಸಿದರು.</p>.ರಾಹುಲ್ ಗಾಂಧಿ ಅವರ ಗಂಭೀರವಾದ ಪ್ರಶ್ನೆಗಳಿಗೆ ಆಯೋಗ ಉತ್ತರ ನೀಡಬೇಕಿದೆ: ತರೂರ್.ಮತಗಳ್ಳತನ | 'ಅಣು ಬಾಂಬ್' ಇದೆ ಎಂದ ರಾಹುಲ್; ನಿರ್ಲಕ್ಷಿಸಿದ ಚುನಾವಣಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>