<p><strong>ನವದೆಹಲಿ</strong>: 'ಮತ ಕಳ್ಳತನ’ವಿರುದ್ಧ ಡಿಸೆಂಬರ್ 14ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಮಹಾರ್ಯಾಲಿ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.</p><p>ಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ.</p><p>ಮತ ಕಳ್ಳತನದ ಭೂತವು ಇಂದು ನಮ್ಮ ಪ್ರಜಾಪ್ರಭುತ್ವದ ಮೇಲೆ ಎರಗಿರುವ ದೊಡ್ಡ ಅಪಾಯವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.</p><p>‘ನಮ್ಮ ಸಂವಿಧಾನವನ್ನು ನಾಶಮಾಡುವ ಈ ಪ್ರಯತ್ನಗಳ ವಿರುದ್ಧ ದೇಶದಾದ್ಯಂತ ಸಂದೇಶವನ್ನು ಕಳುಹಿಸಲು ಕಾಂಗ್ರೆಸ್, ಡಿಸೆಂಬರ್ 14ರಂದು (ಮಧ್ಯಾಹ್ನ 1.30 ರಿಂದ) ನವದೆಹಲಿಯ ರಾಮಲೀಲಾ ಮೈದಾನದಲ್ಲಿ 'ವೋಟ್ ಚೋರ್ ಗಡ್ಡಿ ಛೋಡ್' ಮಹಾ ರ್ಯಾಲಿಯನ್ನು ನಡೆಸಲಿದೆ’ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p><p>‘ನಕಲಿ ಮತದಾರರನ್ನು ಸೇರಿಸುವುದು, ವಿರೋಧ ಪಕ್ಷಗಳ ಬಗ್ಗೆ ಒಲವು ಹೊಂದಿರುವ ಮತದಾರರ ಹೆಸರನ್ನು ಅಳಿಸುವುದು ಮತ್ತು ಸಾಮೂಹಿಕವಾಗಿ ಮತದಾರರ ಪಟ್ಟಿಯನ್ನು ತಿರುಚುವಿಕೆಯಂತಹ ಬಿಜೆಪಿ-ಇಸಿಐನ ದುಷ್ಟ ತಂತ್ರಗಳನ್ನು ತಿರಸ್ಕರಿಸಿ, ಭಾರತದ ಮೂಲೆ ಮೂಲೆಗಳಿಂದ ನಮಗೆ ಕೋಟ್ಯಂತರ ಸಹಿಗಳು ಬಂದಿವೆ’ಎಂದು ವೇಣುಗೋಪಾಲ್ ಹೇಳಿದರು.</p><p>ಚುನಾವಣಾ ಆಯೋಗವು ನಿಯಮಗಳನ್ನು ಹೇಗೆ ಬದಿಗೊತ್ತುತ್ತದೆ, ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಹೇಗೆ ನಿರ್ಲಕ್ಷಿಸುತ್ತದೆ ಮತ್ತು ಬಿಜೆಪಿಯನ್ನು ಚುನಾವಣೆಗಳಲ್ಲಿ ಗೆಲ್ಲಿಸಲು ಹೇಗೆ ಭ್ರಷ್ಟ ಹಾದಿಯನ್ನು ಹಿಡಿಯುತ್ತದೆ ಎಂಬುದನ್ನು ಪ್ರತಿಯೊಬ್ಬ ಭಾರತೀಯನೂ ನೋಡಿದ್ದಾನೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.</p><p>‘ಒಂದು ಕಾಲದಲ್ಲಿ ತಟಸ್ಥವಾಗಿದ್ದ ಚುನಾವಣಾ ಆಯೋಗವು ಈಗ ಸ್ಪಷ್ಟವಾಗಿ ಪಕ್ಷಪಾತಿಯಾಗಿದೆ. ಚುನಾವಣೆಗಳಲ್ಲಿ ಸಮಾನ ಹೋರಾಟದ ಪರಿಕಲ್ಪನೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ’ಎಂದು ಅವರು ದೂರಿದ್ದಾರೆ.</p><p>‘ಚುನಾವಣಾ ವ್ಯವಸ್ಥೆ ಮೇಲಿನ ಈ ದಾಳಿ ನಮ್ಮ ಕಣ್ಣ ಮುಂದೆಯೇ ನಡೆಯುತ್ತಿದ್ದರೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಈ ಮಹಾ ರ್ಯಾಲಿಯು ಭಾರತೀಯ ಪ್ರಜಾಪ್ರಭುತ್ವವನ್ನು ಮತಗಳ್ಳರ ಹಿಡಿತದಿಂದ ಹೊರತರುವ ನಮ್ಮ ಹೋರಾಟದ ಆರಂಭ ಮಾತ್ರ!’ಎಂದು ವೇಣುಗೋಪಾಲ್ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ಮತ ಕಳ್ಳತನ’ವಿರುದ್ಧ ಡಿಸೆಂಬರ್ 14ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಮಹಾರ್ಯಾಲಿ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.</p><p>ಭಾರತೀಯ ಚುನಾವಣಾ ಆಯೋಗ(ಇಸಿಐ) ಪಕ್ಷಪಾತಿಯಾಗಿದ್ದು, ಚುನಾವಣೆಗಳ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಮಾನ ಹೋರಾಟದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ನಾಶಪಡಿಸುತ್ತಿದೆ ಎಂದು ಅದು ಆರೋಪಿಸಿದೆ.</p><p>ಮತ ಕಳ್ಳತನದ ಭೂತವು ಇಂದು ನಮ್ಮ ಪ್ರಜಾಪ್ರಭುತ್ವದ ಮೇಲೆ ಎರಗಿರುವ ದೊಡ್ಡ ಅಪಾಯವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.</p><p>‘ನಮ್ಮ ಸಂವಿಧಾನವನ್ನು ನಾಶಮಾಡುವ ಈ ಪ್ರಯತ್ನಗಳ ವಿರುದ್ಧ ದೇಶದಾದ್ಯಂತ ಸಂದೇಶವನ್ನು ಕಳುಹಿಸಲು ಕಾಂಗ್ರೆಸ್, ಡಿಸೆಂಬರ್ 14ರಂದು (ಮಧ್ಯಾಹ್ನ 1.30 ರಿಂದ) ನವದೆಹಲಿಯ ರಾಮಲೀಲಾ ಮೈದಾನದಲ್ಲಿ 'ವೋಟ್ ಚೋರ್ ಗಡ್ಡಿ ಛೋಡ್' ಮಹಾ ರ್ಯಾಲಿಯನ್ನು ನಡೆಸಲಿದೆ’ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p><p>‘ನಕಲಿ ಮತದಾರರನ್ನು ಸೇರಿಸುವುದು, ವಿರೋಧ ಪಕ್ಷಗಳ ಬಗ್ಗೆ ಒಲವು ಹೊಂದಿರುವ ಮತದಾರರ ಹೆಸರನ್ನು ಅಳಿಸುವುದು ಮತ್ತು ಸಾಮೂಹಿಕವಾಗಿ ಮತದಾರರ ಪಟ್ಟಿಯನ್ನು ತಿರುಚುವಿಕೆಯಂತಹ ಬಿಜೆಪಿ-ಇಸಿಐನ ದುಷ್ಟ ತಂತ್ರಗಳನ್ನು ತಿರಸ್ಕರಿಸಿ, ಭಾರತದ ಮೂಲೆ ಮೂಲೆಗಳಿಂದ ನಮಗೆ ಕೋಟ್ಯಂತರ ಸಹಿಗಳು ಬಂದಿವೆ’ಎಂದು ವೇಣುಗೋಪಾಲ್ ಹೇಳಿದರು.</p><p>ಚುನಾವಣಾ ಆಯೋಗವು ನಿಯಮಗಳನ್ನು ಹೇಗೆ ಬದಿಗೊತ್ತುತ್ತದೆ, ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಹೇಗೆ ನಿರ್ಲಕ್ಷಿಸುತ್ತದೆ ಮತ್ತು ಬಿಜೆಪಿಯನ್ನು ಚುನಾವಣೆಗಳಲ್ಲಿ ಗೆಲ್ಲಿಸಲು ಹೇಗೆ ಭ್ರಷ್ಟ ಹಾದಿಯನ್ನು ಹಿಡಿಯುತ್ತದೆ ಎಂಬುದನ್ನು ಪ್ರತಿಯೊಬ್ಬ ಭಾರತೀಯನೂ ನೋಡಿದ್ದಾನೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.</p><p>‘ಒಂದು ಕಾಲದಲ್ಲಿ ತಟಸ್ಥವಾಗಿದ್ದ ಚುನಾವಣಾ ಆಯೋಗವು ಈಗ ಸ್ಪಷ್ಟವಾಗಿ ಪಕ್ಷಪಾತಿಯಾಗಿದೆ. ಚುನಾವಣೆಗಳಲ್ಲಿ ಸಮಾನ ಹೋರಾಟದ ಪರಿಕಲ್ಪನೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ’ಎಂದು ಅವರು ದೂರಿದ್ದಾರೆ.</p><p>‘ಚುನಾವಣಾ ವ್ಯವಸ್ಥೆ ಮೇಲಿನ ಈ ದಾಳಿ ನಮ್ಮ ಕಣ್ಣ ಮುಂದೆಯೇ ನಡೆಯುತ್ತಿದ್ದರೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಈ ಮಹಾ ರ್ಯಾಲಿಯು ಭಾರತೀಯ ಪ್ರಜಾಪ್ರಭುತ್ವವನ್ನು ಮತಗಳ್ಳರ ಹಿಡಿತದಿಂದ ಹೊರತರುವ ನಮ್ಮ ಹೋರಾಟದ ಆರಂಭ ಮಾತ್ರ!’ಎಂದು ವೇಣುಗೋಪಾಲ್ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>