<p><strong>ಶಿಮ್ಲಾ:</strong>ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದ್ದು, 1 ಲಕ್ಷ ಉದ್ಯೋಗ ಸೃಷ್ಟಿ, ಮನೆಗಳಿಗೆ 300 ಯೂನಿಟ್ವರೆಗೆ ಉಚಿತ ವಿದ್ಯುತ್, ಹಳೆಯ ಪಿಂಚಣಿ ಯೋಜನೆ ಮರು ಜಾರಿಯಂತಹ ನಿರ್ಧಾರಗಳನ್ನು ಪ್ರಕಟಿಸಿದೆ.</p>.<p>₹680 ಕೋಟಿ ಮೊತ್ತದ ನವೋದ್ಯಮ ನಿಧಿ ಸ್ಥಾಪನೆ, 18ರಿಂದ 60 ವರ್ಷದೊಳಗಿನ ಮಹಿಳೆಯರಿಗೆ ₹1,500 ಸಹಾಯಧನ ನೀಡುವ ಪ್ರಮುಖ ಅಂಶಗಳನ್ನು ಪ್ರಣಾಳಿಕೆ ಒಳಗೊಂಡಿದೆ.ರಾಜ್ಯದಲ್ಲಿ ಸೇಬು ಬೆಳೆಯ ಬೆಲೆ ನಿರ್ಧರಿಸಲು ಸೇಬು ಬೆಳೆಗಾರರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಪ್ರಣಾಳಿಕೆ ಭರವಸೆ ನೀಡಿದೆ.</p>.<p>ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ, ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಶುಖು, ಎಐಸಿಸಿ ಕಾರ್ಯದರ್ಶಿಗಳಾದ ತೇಜಿಂದರ್ ಪಾಲ್ ಬಿಟ್ಟು ಮತ್ತು ಮನೀಶ್ ಚತ್ರನ್ ಅವರು ಈ ವೇಳೆ ಉಪಸ್ಥಿತರಿದ್ದರು.</p>.<p>ನ.12ರಂದು ನಡೆಯಲಿರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಎದುರಿಸಲಿದ್ದು, ಚುನಾಯಿತ ಶಾಸಕರು ಹಾಗೂ ವರಿಷ್ಠರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.</p>.<p>ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮಾಡುವಂತೆ ರಾಜಸ್ಥಾನ, ಛತ್ತೀಸಗಡ ರಾಜ್ಯಗಳು ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಬಘೆಲ್ ಹೇಳಿದರು. ಮತ್ತೆ ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದು, ಯೋಜನೆ ಜಾರಿಗೆ ಕಾನೂನು ಸಲಹೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.</p>.<p>5 ವರ್ಷಗಳಲ್ಲಿ ಬಿಜೆಪಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಧಣಿರಾಮ್ ಶಾಂಡಿಲ್ ಅವರು ಆರೋಪಿಸಿದ್ದಾರೆ. ‘ಇದು ಕೇವಲ ಪ್ರಣಾಳಿಕೆಯಲ್ಲ. ಹಿಮಾಚಲ ಪ್ರದೇಶದ ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಸಿದ್ಧಪಡಿಸಿರುವ ಮುನ್ನೋಟ’ ಎಂದು ಅವರು ಹೇಳಿದ್ದಾರೆ.</p>.<p>ಸಮಾಜದ ಎಲ್ಲ ವರ್ಗದ ಜನರನ್ನು ಸಂಪರ್ಕಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದು ಶುಕ್ಲಾ ಅವರು ಹೇಳಿದರು. ರಾಜ್ಯದಲ್ಲಿ ಮಾದಕವಸ್ತು ಹಾವಳಿ ತಡೆಯಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಮಾದಕವಸ್ತು ನಿಗ್ರಹ ಕಾರ್ಯಪಡೆ ರಚಿಸುವ ಭರವಸೆ ನೀಡಲಾಗಿದೆ ಎಂದರು.</p>.<p><strong>ಪ್ರಣಾಳಿಕೆಯ ಇತರ ಅಂಶಗಳು</strong></p>.<p>- ಟ್ಯಾಕ್ಸಿ ಚಾಲಕರಿಗೆ ಅಲ್ಪ ಬಡ್ಡಿದರದಲ್ಲಿ ಸಾಲ; ವಾಹನ ಪರ್ಮಿಟ್ ಅವಧಿ 15 ವರ್ಷಕ್ಕೆ ವಿಸ್ತರಣೆ</p>.<p>- ಅಧಿಕಾರಿಗಳಿಗೆ ತೊಂದರೆ ಕೊಡುವ ಉದ್ದೇಶದಿಂದ ಸರ್ಕಾರ ಮಾಡಿದ್ದ ಎಲ್ಲ ವರ್ಗಾವಣೆ ರದ್ದು</p>.<p>- ಪತ್ರಕರ್ತರಿಗೆ ಪಿಂಚಣಿ ಯೋಜನೆ ಜಾರಿ</p>.<p>- ಬಂದೂಕು ಪರವಾನಗಿ ಶುಲ್ಕ ಇಳಿಕೆ</p>.<p>- ರಾಜ್ಯ ಸರ್ಕಾರದ ಸಾಲದ ಹೊರೆ ತಗ್ಗಿಸುವುದು</p>.<p><strong>ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ: ಅನುರಾಗ್</strong></p>.<p>ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಟೀಕಿಸಿದ್ದಾರೆ. ಸ್ವತಃ ಯಾವುದೇ ಖಾತರಿ ಇಲ್ಲದ ಪಕ್ಷವೊಂದು ನೀಡಿರುವ ಭರವಸೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.</p>.<p>‘ಮನೆಗೊಂದು ಉದ್ಯೋಗ ನೀಡುವುದಾಗಿ 2003ರಲ್ಲಿ ಕಾಂಗ್ರೆಸ್ ಹೇಳಿತ್ತು. ಕೆಲಸ ಸಿಕ್ಕಿತಾ? ಇಲ್ಲ. ಮತ್ತೆ 2012ರಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿತ್ತು. ಆದರೆ ಆ ಭರವಸೆ ಈಡೇರಿಸಲಿಲ್ಲ. ಅವರು ಕೆಲಸವನ್ನೂ ನೀಡಲಿಲ್ಲ, ಭತ್ಯೆಯನ್ನೂ ನೀಡಲಿಲ್ಲ’ ಎಂದು ಚಿಂತಪುರನಿ ಎಂಬಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಠಾಕೂರ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong>ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದ್ದು, 1 ಲಕ್ಷ ಉದ್ಯೋಗ ಸೃಷ್ಟಿ, ಮನೆಗಳಿಗೆ 300 ಯೂನಿಟ್ವರೆಗೆ ಉಚಿತ ವಿದ್ಯುತ್, ಹಳೆಯ ಪಿಂಚಣಿ ಯೋಜನೆ ಮರು ಜಾರಿಯಂತಹ ನಿರ್ಧಾರಗಳನ್ನು ಪ್ರಕಟಿಸಿದೆ.</p>.<p>₹680 ಕೋಟಿ ಮೊತ್ತದ ನವೋದ್ಯಮ ನಿಧಿ ಸ್ಥಾಪನೆ, 18ರಿಂದ 60 ವರ್ಷದೊಳಗಿನ ಮಹಿಳೆಯರಿಗೆ ₹1,500 ಸಹಾಯಧನ ನೀಡುವ ಪ್ರಮುಖ ಅಂಶಗಳನ್ನು ಪ್ರಣಾಳಿಕೆ ಒಳಗೊಂಡಿದೆ.ರಾಜ್ಯದಲ್ಲಿ ಸೇಬು ಬೆಳೆಯ ಬೆಲೆ ನಿರ್ಧರಿಸಲು ಸೇಬು ಬೆಳೆಗಾರರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಪ್ರಣಾಳಿಕೆ ಭರವಸೆ ನೀಡಿದೆ.</p>.<p>ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ, ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಶುಖು, ಎಐಸಿಸಿ ಕಾರ್ಯದರ್ಶಿಗಳಾದ ತೇಜಿಂದರ್ ಪಾಲ್ ಬಿಟ್ಟು ಮತ್ತು ಮನೀಶ್ ಚತ್ರನ್ ಅವರು ಈ ವೇಳೆ ಉಪಸ್ಥಿತರಿದ್ದರು.</p>.<p>ನ.12ರಂದು ನಡೆಯಲಿರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಎದುರಿಸಲಿದ್ದು, ಚುನಾಯಿತ ಶಾಸಕರು ಹಾಗೂ ವರಿಷ್ಠರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.</p>.<p>ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮಾಡುವಂತೆ ರಾಜಸ್ಥಾನ, ಛತ್ತೀಸಗಡ ರಾಜ್ಯಗಳು ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಬಘೆಲ್ ಹೇಳಿದರು. ಮತ್ತೆ ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದು, ಯೋಜನೆ ಜಾರಿಗೆ ಕಾನೂನು ಸಲಹೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.</p>.<p>5 ವರ್ಷಗಳಲ್ಲಿ ಬಿಜೆಪಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಧಣಿರಾಮ್ ಶಾಂಡಿಲ್ ಅವರು ಆರೋಪಿಸಿದ್ದಾರೆ. ‘ಇದು ಕೇವಲ ಪ್ರಣಾಳಿಕೆಯಲ್ಲ. ಹಿಮಾಚಲ ಪ್ರದೇಶದ ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಸಿದ್ಧಪಡಿಸಿರುವ ಮುನ್ನೋಟ’ ಎಂದು ಅವರು ಹೇಳಿದ್ದಾರೆ.</p>.<p>ಸಮಾಜದ ಎಲ್ಲ ವರ್ಗದ ಜನರನ್ನು ಸಂಪರ್ಕಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದು ಶುಕ್ಲಾ ಅವರು ಹೇಳಿದರು. ರಾಜ್ಯದಲ್ಲಿ ಮಾದಕವಸ್ತು ಹಾವಳಿ ತಡೆಯಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಮಾದಕವಸ್ತು ನಿಗ್ರಹ ಕಾರ್ಯಪಡೆ ರಚಿಸುವ ಭರವಸೆ ನೀಡಲಾಗಿದೆ ಎಂದರು.</p>.<p><strong>ಪ್ರಣಾಳಿಕೆಯ ಇತರ ಅಂಶಗಳು</strong></p>.<p>- ಟ್ಯಾಕ್ಸಿ ಚಾಲಕರಿಗೆ ಅಲ್ಪ ಬಡ್ಡಿದರದಲ್ಲಿ ಸಾಲ; ವಾಹನ ಪರ್ಮಿಟ್ ಅವಧಿ 15 ವರ್ಷಕ್ಕೆ ವಿಸ್ತರಣೆ</p>.<p>- ಅಧಿಕಾರಿಗಳಿಗೆ ತೊಂದರೆ ಕೊಡುವ ಉದ್ದೇಶದಿಂದ ಸರ್ಕಾರ ಮಾಡಿದ್ದ ಎಲ್ಲ ವರ್ಗಾವಣೆ ರದ್ದು</p>.<p>- ಪತ್ರಕರ್ತರಿಗೆ ಪಿಂಚಣಿ ಯೋಜನೆ ಜಾರಿ</p>.<p>- ಬಂದೂಕು ಪರವಾನಗಿ ಶುಲ್ಕ ಇಳಿಕೆ</p>.<p>- ರಾಜ್ಯ ಸರ್ಕಾರದ ಸಾಲದ ಹೊರೆ ತಗ್ಗಿಸುವುದು</p>.<p><strong>ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ: ಅನುರಾಗ್</strong></p>.<p>ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಟೀಕಿಸಿದ್ದಾರೆ. ಸ್ವತಃ ಯಾವುದೇ ಖಾತರಿ ಇಲ್ಲದ ಪಕ್ಷವೊಂದು ನೀಡಿರುವ ಭರವಸೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.</p>.<p>‘ಮನೆಗೊಂದು ಉದ್ಯೋಗ ನೀಡುವುದಾಗಿ 2003ರಲ್ಲಿ ಕಾಂಗ್ರೆಸ್ ಹೇಳಿತ್ತು. ಕೆಲಸ ಸಿಕ್ಕಿತಾ? ಇಲ್ಲ. ಮತ್ತೆ 2012ರಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿತ್ತು. ಆದರೆ ಆ ಭರವಸೆ ಈಡೇರಿಸಲಿಲ್ಲ. ಅವರು ಕೆಲಸವನ್ನೂ ನೀಡಲಿಲ್ಲ, ಭತ್ಯೆಯನ್ನೂ ನೀಡಲಿಲ್ಲ’ ಎಂದು ಚಿಂತಪುರನಿ ಎಂಬಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಠಾಕೂರ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>