‘2020ರ ಏಪ್ರಿ–ಮೇ ಬಳಿಕ ಚೀನಾ ಸೇನಾಪಡೆಗಳು ನಮ್ಮ ಎಷ್ಟು ಭೂಭಾಗವನ್ನು ಅತಿಕ್ರಮಿಸಿಕೊಂಡಿವೆ, ನಮ್ಮ ಕೆಚ್ಚೆದೆಯ ಯೋಧರನ್ನು ಚೀನಾ ಪಡೆಗಳು ಹತ್ಯೆ ಮಾಡಲು ಏನು ಕಾರಣ ಎಂಬುದನ್ನು ಪ್ರಧಾನಿ ಮತ್ತು ರಕ್ಷಣಾ ಸಚಿವರು ಈಗಲಾದರೂ ದೇಶದ ಜನತೆಗೆ ಉತ್ತರಿಸಬಲ್ಲರೇ’ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಪರವಾಗಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.