<p><strong>ಜೈಪುರ:</strong> ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣದ ನೀತಿಯಿಂದಾಗಿ ಸಮಾಜ ವಿರೋಧಿ ಚಟುವಟಿಕೆಗಳನ್ನು ಸಡಿಲಗೊಳಿಸುವ ಮೂಲಕ ರಾಜಸ್ಥಾನವನ್ನು ಅಪರಾಧ ಮತ್ತು ಗಲಭೆಗಳಲ್ಲಿ ಅಗ್ರಸ್ಥಾನಕ್ಕೇರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. </p><p>ಭರತ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ‘ಜಾದೂಗಾರ’ರಿಗೆ ಮತ ನೀಡದಿರಲು ಜನರು ನಿರ್ಧರಿಸಿದ್ದಾರೆ. ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಕಣ್ಮರೆಯಾಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. </p><p>ಡಿಸೆಂಬರ್ 3ರಂದು ಕಾಂಗ್ರೆಸ್ ‘ಛೂ ಮಂತರ್’ ಆಗಲಿದೆ. ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ವೃತ್ತಿಪರ ಜಾದೂಗಾರನ ಮಗನಾದ ಗೆಹಲೋತ್ ಅವರು ಮ್ಯಾಜಿಕ್ ಟ್ರಿಕ್ಸ್ ಪ್ರದರ್ಶಿಸುವ ಮೂಲಕ ದೇಶದಾದ್ಯಂತ ಸುತ್ತಾಟ ನಡೆಸಿದ್ದರು ಎಂದು ಮೋದಿ ಲೇವಡಿ ಮಾಡಿದ್ದಾರೆ. </p><p>‘ಒಂದೆಡೆ ಭಾರತ ವಿಶ್ವ ನಾಯಕನಾಗುತ್ತಿದೆ. ಮತ್ತೊಂದೆಡೆ ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ರಾಜಸ್ಥಾನವನ್ನು ಭ್ರಷ್ಟಾಚಾರ, ಗಲಭೆಗಳು ಮತ್ತು ಅಪರಾಧಗಳಲ್ಲಿ ನಾಯಕನನ್ನಾಗಿ ಮಾಡಿದೆ. ಅದಕ್ಕಾಗಿಯೇ ಈ ಬಾರಿ ರಾಜಸ್ಥಾನ ಮಾಂತ್ರಿಕ ಜೀ... (ಅಶೋಕ್ ಗೆಹಲೋತ್) ನೀವು ಬಹುಮತ ಪಡೆಯಲು ಸಾಧ್ಯವಿಲ್ಲ’ ಎಂದು ಮೋದಿ ಕಿಡಿಕಾರಿದ್ದಾರೆ. </p><p>ರಾಜ್ಯದಲ್ಲಿ ಕಾಂಗ್ರೆಸ್ ತನ್ನ ತುಷ್ಟೀಕರಣ ನೀತಿಯಿಂದಾಗಿ ಅಪರಾಧಿಗಳಿಗೆ ಮುಕ್ತವಾಗಿ ಓಡಾಡಲು ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ ಎಂದು ಅವರು ತಿಳಿಸಿದ್ದಾರೆ. </p><p>ದೇಶದಲ್ಲಿ ಕಾಂಗ್ರೆಸ್ ಎಲ್ಲೇ ಅಧಿಕಾರಕ್ಕೆ ಬಂದರೂ ಭಯೋತ್ಪಾದಕರು, ಕ್ರಿಮಿನಲ್ಗಳು ಮತ್ತು ಗಲಭೆಕೋರರನ್ನು ಮುಕ್ತವಾಗಿ ಓಡಾಡುತ್ತಿರುತ್ತಾರೆ. ಕಾಂಗ್ರೆಸ್ಗೆ ಓಲೈಕೆಯೇ ಸರ್ವಸ್ವ. ಜನರ ಪ್ರಾಣವನ್ನು ಪಣಕ್ಕಿಟ್ಟಾದರೂ ಸರಿ ಕಾಂಗ್ರೆಸ್ ಓಲೈಕೆಗಾಗಿ ಯಾವುದೇ ಹಂತಕ್ಕೆ ಬೇಕಾದರೂ ಹೋಗಬಹುದು ಎಂದು ಮೋದಿ ಹರಿಹಾಯ್ದಿದ್ದಾರೆ.</p><p>ನವೆಂಬರ್ 25ರಂದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣದ ನೀತಿಯಿಂದಾಗಿ ಸಮಾಜ ವಿರೋಧಿ ಚಟುವಟಿಕೆಗಳನ್ನು ಸಡಿಲಗೊಳಿಸುವ ಮೂಲಕ ರಾಜಸ್ಥಾನವನ್ನು ಅಪರಾಧ ಮತ್ತು ಗಲಭೆಗಳಲ್ಲಿ ಅಗ್ರಸ್ಥಾನಕ್ಕೇರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. </p><p>ಭರತ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ‘ಜಾದೂಗಾರ’ರಿಗೆ ಮತ ನೀಡದಿರಲು ಜನರು ನಿರ್ಧರಿಸಿದ್ದಾರೆ. ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಕಣ್ಮರೆಯಾಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. </p><p>ಡಿಸೆಂಬರ್ 3ರಂದು ಕಾಂಗ್ರೆಸ್ ‘ಛೂ ಮಂತರ್’ ಆಗಲಿದೆ. ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ವೃತ್ತಿಪರ ಜಾದೂಗಾರನ ಮಗನಾದ ಗೆಹಲೋತ್ ಅವರು ಮ್ಯಾಜಿಕ್ ಟ್ರಿಕ್ಸ್ ಪ್ರದರ್ಶಿಸುವ ಮೂಲಕ ದೇಶದಾದ್ಯಂತ ಸುತ್ತಾಟ ನಡೆಸಿದ್ದರು ಎಂದು ಮೋದಿ ಲೇವಡಿ ಮಾಡಿದ್ದಾರೆ. </p><p>‘ಒಂದೆಡೆ ಭಾರತ ವಿಶ್ವ ನಾಯಕನಾಗುತ್ತಿದೆ. ಮತ್ತೊಂದೆಡೆ ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ರಾಜಸ್ಥಾನವನ್ನು ಭ್ರಷ್ಟಾಚಾರ, ಗಲಭೆಗಳು ಮತ್ತು ಅಪರಾಧಗಳಲ್ಲಿ ನಾಯಕನನ್ನಾಗಿ ಮಾಡಿದೆ. ಅದಕ್ಕಾಗಿಯೇ ಈ ಬಾರಿ ರಾಜಸ್ಥಾನ ಮಾಂತ್ರಿಕ ಜೀ... (ಅಶೋಕ್ ಗೆಹಲೋತ್) ನೀವು ಬಹುಮತ ಪಡೆಯಲು ಸಾಧ್ಯವಿಲ್ಲ’ ಎಂದು ಮೋದಿ ಕಿಡಿಕಾರಿದ್ದಾರೆ. </p><p>ರಾಜ್ಯದಲ್ಲಿ ಕಾಂಗ್ರೆಸ್ ತನ್ನ ತುಷ್ಟೀಕರಣ ನೀತಿಯಿಂದಾಗಿ ಅಪರಾಧಿಗಳಿಗೆ ಮುಕ್ತವಾಗಿ ಓಡಾಡಲು ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ ಎಂದು ಅವರು ತಿಳಿಸಿದ್ದಾರೆ. </p><p>ದೇಶದಲ್ಲಿ ಕಾಂಗ್ರೆಸ್ ಎಲ್ಲೇ ಅಧಿಕಾರಕ್ಕೆ ಬಂದರೂ ಭಯೋತ್ಪಾದಕರು, ಕ್ರಿಮಿನಲ್ಗಳು ಮತ್ತು ಗಲಭೆಕೋರರನ್ನು ಮುಕ್ತವಾಗಿ ಓಡಾಡುತ್ತಿರುತ್ತಾರೆ. ಕಾಂಗ್ರೆಸ್ಗೆ ಓಲೈಕೆಯೇ ಸರ್ವಸ್ವ. ಜನರ ಪ್ರಾಣವನ್ನು ಪಣಕ್ಕಿಟ್ಟಾದರೂ ಸರಿ ಕಾಂಗ್ರೆಸ್ ಓಲೈಕೆಗಾಗಿ ಯಾವುದೇ ಹಂತಕ್ಕೆ ಬೇಕಾದರೂ ಹೋಗಬಹುದು ಎಂದು ಮೋದಿ ಹರಿಹಾಯ್ದಿದ್ದಾರೆ.</p><p>ನವೆಂಬರ್ 25ರಂದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>