ಕಾಂಗ್ರೆಸ್ಸಿನಲ್ಲಿ ನ್ಯಾಯ ಸಿಗದ ಕಾರಣಕ್ಕೆ ಆ ಪಕ್ಷವನ್ನು ತೊರೆದ ನಾಯಕರ ಪಟ್ಟಿ ದೊಡ್ಡದಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ವ್ಯಂಗ್ಯವಾಡಿದರು. ‘ಇದೊಂದು ಹುಸಿ ಯಾತ್ರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಜನರಿಗೆ ನ್ಯಾಯ ಕೊಡಿಸುವ ಬಗ್ಗೆ ಮಾತನಾಡುತ್ತಾರೆ. ಆದರೆ, ವಾಸ್ತವದಲ್ಲಿ ಕಾಂಗ್ರೆಸ್ಸಿನ ನಾಯಕರೇ ನ್ಯಾಯ ವಂಚಿತರು’ ಎಂದು ಠಾಕೂರ್ ಹೇಳಿದರು.