<p><strong>ನವದೆಹಲಿ: </strong>ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ. </p><p>ಕಳೆದ 12 ವರ್ಷಗಳಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಏಳು ವಿಭಿನ್ನ ಹಂತಗಳಲ್ಲಿ ಕುಸಿದಿದ್ದರೂ ದೇಶದಲ್ಲಿ ಅದರ ಪ್ರಯೋಜನ ಗ್ರಾಹಕರಿಗೆ ತಲುಪಿರಲಿಲ್ಲ ಎಂದು ಬೊಟ್ಟು ಮಾಡಿದೆ. </p><p>ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ₹3ಕ್ಕೆ ಇಳಿಸಿ ಹಾಗೂ ಡೀಸೆಲ್ಗೆ ಸುಂಕದಿಂದ ವಿನಾಯಿತಿ ನೀಡಲಾಗಿತ್ತು. </p><p>ಈಗಿನ ಘೋಷಣೆಯು ಚುನಾವಣೆಗಷ್ಟೇ ಸೀಮಿತ. ಏಪ್ರಿಲ್ 30ರವರೆಗೆ ಕಾಯಿರಿ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರ್ ಹೇಳಿದ್ದಾರೆ.</p><p>ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಇಳಿಮುಖವಾಗುತ್ತಿವೆ ಎಂದು ಅಂದುಕೊಂಡರೆ ಅದು ತಪ್ಪು ಕಲ್ಪನೆ ಎಂದು ಅವರು ಹೇಳಿದ್ದಾರೆ. </p><p>ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಹಾಗೂ 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ಮೇ 4ರಂದು ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. </p>.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆತಂಕದ ನಡುವೆ ಗುಡ್ ನ್ಯೂಸ್ ನೀಡಿದ ಸರ್ಕಾರ.Video: ಪೆಟ್ರೋಲ್ ತುಂಬಿಕೊಳ್ಳಲು ಬಂಕ್ಗೆ ಬಂದವು ಕುಕ್ಕರ್, ಬಕೆಟ್!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ. </p><p>ಕಳೆದ 12 ವರ್ಷಗಳಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಏಳು ವಿಭಿನ್ನ ಹಂತಗಳಲ್ಲಿ ಕುಸಿದಿದ್ದರೂ ದೇಶದಲ್ಲಿ ಅದರ ಪ್ರಯೋಜನ ಗ್ರಾಹಕರಿಗೆ ತಲುಪಿರಲಿಲ್ಲ ಎಂದು ಬೊಟ್ಟು ಮಾಡಿದೆ. </p><p>ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ₹3ಕ್ಕೆ ಇಳಿಸಿ ಹಾಗೂ ಡೀಸೆಲ್ಗೆ ಸುಂಕದಿಂದ ವಿನಾಯಿತಿ ನೀಡಲಾಗಿತ್ತು. </p><p>ಈಗಿನ ಘೋಷಣೆಯು ಚುನಾವಣೆಗಷ್ಟೇ ಸೀಮಿತ. ಏಪ್ರಿಲ್ 30ರವರೆಗೆ ಕಾಯಿರಿ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರ್ ಹೇಳಿದ್ದಾರೆ.</p><p>ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಇಳಿಮುಖವಾಗುತ್ತಿವೆ ಎಂದು ಅಂದುಕೊಂಡರೆ ಅದು ತಪ್ಪು ಕಲ್ಪನೆ ಎಂದು ಅವರು ಹೇಳಿದ್ದಾರೆ. </p><p>ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಹಾಗೂ 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ಮೇ 4ರಂದು ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. </p>.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆತಂಕದ ನಡುವೆ ಗುಡ್ ನ್ಯೂಸ್ ನೀಡಿದ ಸರ್ಕಾರ.Video: ಪೆಟ್ರೋಲ್ ತುಂಬಿಕೊಳ್ಳಲು ಬಂಕ್ಗೆ ಬಂದವು ಕುಕ್ಕರ್, ಬಕೆಟ್!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>