ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಖಿಲೇಶ್, ರಾಜ್ಯದ 11 ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ನೊಂದಿಗಿನ ಸಮಾಜವಾದಿ ಪಕ್ಷದ ಮೈತ್ರಿಯು ಉತ್ತಮ ಬೆಳವಣಿಗೆಯಾಗಿದೆ. ಈ ಮೂಲಕ ಗೆಲುವು ಸಾಧಿಸಲು ಅನುಕೂಲವಾಗಲಿದೆ. ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರವು ದೇಶದಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶವು ಒಟ್ಟು 80 ಸಂಸದರ ಬಲ ಹೊಂದಿದೆ.
ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ನಲ್ಲಿಯೇ ಮುಂದುವರಿಯುತ್ತಾರೋ ಅಥವಾ ಅದನ್ನು ತ್ಯಜಿಸಿ, ಬಿಜೆಪಿಯೊಂದಿಗೆ ಕೈ ಜೋಡಿಸಿ ಅಧಿಕಾರದಲ್ಲಿ ಉಳಿಯುತ್ತಾರೋ ಎಂಬ ಕುತೂಹಲ ಮುಂದುವರಿದಿದೆ.
ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಆದರೆ ಅದಕ್ಕೀಗ ನಿತೀಶ್ ಅವರಿಗೆ ಮನಸ್ಸಿದ್ದಂತಿಲ್ಲ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್ ಮೂಲಗಳು ತಿಳಿಸಿವೆ.