ಡಿಸೆಂಬರ್ 3ರಂದು ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ 24 ತಾಸಿನ ಬಳಿಕ ಎಲ್ಲರೂ ತೆಲಂಗಾಣದಲ್ಲಿ ಸಿಎಂ ಆಯ್ಕೆ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಮಾಧ್ಯಮಗಳಲ್ಲಿ ಟೀಕಿಸಿದರು. ಆದರೆ ನಮ್ಮ ಮುಖ್ಯಮಂತ್ರಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದು, ಇಂದು ಮಧ್ಯಾಹ್ನ (ಗುರುವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಜೈರಾಮ್ ತಿಳಿಸಿದ್ದಾರೆ.
ಆದರೆ ಮೂರು ದಿನಗಳು ಕಳೆದರೂ ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮುಖ್ಯಮಂತ್ರಿಯನ್ನು ಘೋಷಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ನಿಜವಾಗಿಯೂ ಬಿಜೆಪಿ ಸಿಎಂ ಆಯ್ಕೆ ಮಾಡಲು ವಿಳಂಬವಾಗಲು ಕಾರಣ ಏನು ಎಂದು ಅವರು ಪ್ರಶ್ನೆ ಮಾಡಿದ್ದಾರೆ.