<p><strong>ಬಸ್ತರ್/ ಜಗದಲ್ಪುರ (ಛತ್ತೀಸಗಢ)</strong>: ಮುಂಬರುವ ಲೋಕಸಭಾ ಚುನಾವಣೆಯು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹಾಗೂ ಅವುಗಳನ್ನು ನಾಶಮಾಡಲು ಹೊರಟಿರುವ ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದರು.</p>.<p>ಛತ್ತೀಸ್ಗಡದ ಬಸ್ತರ್ ಮತ್ತು ಜಗದಲ್ಪುರದಲ್ಲಿ ಅವರು ಚುನಾವಣಾ ಪ್ರಚಾರ ಸಭೆಗಳನ್ನುದ್ದೇಶಿಸಿ ಮಾತನಾಡಿದರು. ಬಸ್ತರ್ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.</p>.<p>‘ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಹೋರಾಡುತ್ತಿದೆ. ಮತ್ತೊಂದೆಡೆ, ನರೇಂದ್ರ ಮೋದಿ, ಅದಾನಿ ಮತ್ತು ಆರ್ಎಸ್ಎಸ್ನವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದಾರೆ. ಅವರು ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಬಿಜೆಪಿ ಮತ್ತು ಆರ್ಎಸ್ಎಸ್ನವರು ಆದಿವಾಸಿಗಳ ಧರ್ಮ, ಸಿದ್ಧಾಂತ ಮತ್ತು ಇತಿಹಾಸದ ಮೇಲೆ ದಾಳಿ ನಡೆಸುತ್ತಾ ಬಂದಿದ್ದಾರೆ. ಮೋದಿ ಸರ್ಕಾರವು ಆದಿವಾಸಿಗಳ ಜಮೀನನ್ನು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ’ ಎಂದು ದೂರಿದರು. </p>.<p>‘ಬಿಜೆಪಿಯು ಉದ್ದೇಶಪೂರ್ವಕವಾಗಿ ‘ಆದಿವಾಸಿ’ ಜನರನ್ನು ‘ವನವಾಸಿ’ ಎಂದು ಕರೆಯುತ್ತಿದೆ. ಇದರ ಹಿಂದೆ ಅವರನ್ನು ಒಕ್ಕಲೆಬ್ಬಿಸುವ ಉದ್ದೇಶವಿದ್ದು, ನೀರು, ಅರಣ್ಯ ಮತ್ತು ಭೂಮಿಯ ಮೇಲಿನ ಅವರ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಅಡಗಿದೆ’ ಎಂದು ಟೀಕಿಸಿದರು.</p>.<p><strong>ರಾಹುಲ್ ಹೇಳಿದ್ದು... </strong></p><ul><li><p>ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂಬ ಕಾರಣ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿಲ್ಲ. ಬಿಜೆಪಿಯ ಮನಃಸ್ಥಿತಿಯನ್ನು ಇದು ತೋರಿಸುತ್ತದೆ.</p></li><li><p> ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ನಡೆಸಲಾಗುವುದು </p></li><li><p>ಪ್ರಧಾನಿ ಮೋದಿ ಅವರ ಅಧಿಕಾರದ ಅವಧಿಯಲ್ಲಿ 22 ಉದ್ಯಮಿಗಳ ಸಂಪತ್ತು ದೇಶದ 70 ಕೋಟಿ ಜನರ ಸಂಪತ್ತಿಗೆ ಸಮನಾಗುವ ರೀತಿಯಲ್ಲಿ ಬೆಳೆದಿದೆ. ಮೋದಿ ಅವರು ಈ ಉದ್ಯಮಿಗಳನ್ನು ದಿನದ 24 ಗಂಟೆಯೂ ಬೆಂಬಲಿಸುತ್ತಾರೆ</p></li></ul>.<p><strong>ಪ್ರಧಾನಿ ಮಾತಿಗೆ ಮರುಳಾಗಬೇಡಿ: ಪ್ರಿಯಾಂಕಾ </strong></p><p><strong>ರಾಮನಗರ (ಉತ್ತರಾಖಂಡ):</strong> ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಆಡುವ ಬಣ್ಣದ ಮಾತುಗಳಿಗೆ ಮರುಳಾಗಬೇಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತದಾರರಿಗೆ ತಿಳಿಸಿದರು. </p><p>ಉತ್ತರಾಖಂಡದ ರಾಮನಗರದಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ‘ಮೋದಿ ಸರ್ಕಾರದ 10 ವರ್ಷಗಳು ನಿಮ್ಮ ಜೀವನದಲ್ಲಿ ನಿಜವಾಗಿಯೂ ಸಕಾರಾತ್ಮಕ ಬದಲಾವಣೆಯನ್ನು ತಂದಿದೆಯೇ ಎಂಬುದನ್ನು ಮತ ಚಲಾಯಿಸುವ ಮುನ್ನ ನೀವು ನಿಮ್ಮಲ್ಲಿ ಪ್ರಾಮಾಣಿಕವಾಗಿ ಕೇಳಿಕೊಳ್ಳಿ’ ಎಂದು ಹೇಳಿದರು.</p><p> ‘ಮೋದಿ ಸರ್ಕಾರ ತನ್ನ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಬೆಲೆಯೇರಿಕೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸ್ತರ್/ ಜಗದಲ್ಪುರ (ಛತ್ತೀಸಗಢ)</strong>: ಮುಂಬರುವ ಲೋಕಸಭಾ ಚುನಾವಣೆಯು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹಾಗೂ ಅವುಗಳನ್ನು ನಾಶಮಾಡಲು ಹೊರಟಿರುವ ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದರು.</p>.<p>ಛತ್ತೀಸ್ಗಡದ ಬಸ್ತರ್ ಮತ್ತು ಜಗದಲ್ಪುರದಲ್ಲಿ ಅವರು ಚುನಾವಣಾ ಪ್ರಚಾರ ಸಭೆಗಳನ್ನುದ್ದೇಶಿಸಿ ಮಾತನಾಡಿದರು. ಬಸ್ತರ್ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.</p>.<p>‘ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಹೋರಾಡುತ್ತಿದೆ. ಮತ್ತೊಂದೆಡೆ, ನರೇಂದ್ರ ಮೋದಿ, ಅದಾನಿ ಮತ್ತು ಆರ್ಎಸ್ಎಸ್ನವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದಾರೆ. ಅವರು ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಬಿಜೆಪಿ ಮತ್ತು ಆರ್ಎಸ್ಎಸ್ನವರು ಆದಿವಾಸಿಗಳ ಧರ್ಮ, ಸಿದ್ಧಾಂತ ಮತ್ತು ಇತಿಹಾಸದ ಮೇಲೆ ದಾಳಿ ನಡೆಸುತ್ತಾ ಬಂದಿದ್ದಾರೆ. ಮೋದಿ ಸರ್ಕಾರವು ಆದಿವಾಸಿಗಳ ಜಮೀನನ್ನು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ’ ಎಂದು ದೂರಿದರು. </p>.<p>‘ಬಿಜೆಪಿಯು ಉದ್ದೇಶಪೂರ್ವಕವಾಗಿ ‘ಆದಿವಾಸಿ’ ಜನರನ್ನು ‘ವನವಾಸಿ’ ಎಂದು ಕರೆಯುತ್ತಿದೆ. ಇದರ ಹಿಂದೆ ಅವರನ್ನು ಒಕ್ಕಲೆಬ್ಬಿಸುವ ಉದ್ದೇಶವಿದ್ದು, ನೀರು, ಅರಣ್ಯ ಮತ್ತು ಭೂಮಿಯ ಮೇಲಿನ ಅವರ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಅಡಗಿದೆ’ ಎಂದು ಟೀಕಿಸಿದರು.</p>.<p><strong>ರಾಹುಲ್ ಹೇಳಿದ್ದು... </strong></p><ul><li><p>ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂಬ ಕಾರಣ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿಲ್ಲ. ಬಿಜೆಪಿಯ ಮನಃಸ್ಥಿತಿಯನ್ನು ಇದು ತೋರಿಸುತ್ತದೆ.</p></li><li><p> ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿ ನಡೆಸಲಾಗುವುದು </p></li><li><p>ಪ್ರಧಾನಿ ಮೋದಿ ಅವರ ಅಧಿಕಾರದ ಅವಧಿಯಲ್ಲಿ 22 ಉದ್ಯಮಿಗಳ ಸಂಪತ್ತು ದೇಶದ 70 ಕೋಟಿ ಜನರ ಸಂಪತ್ತಿಗೆ ಸಮನಾಗುವ ರೀತಿಯಲ್ಲಿ ಬೆಳೆದಿದೆ. ಮೋದಿ ಅವರು ಈ ಉದ್ಯಮಿಗಳನ್ನು ದಿನದ 24 ಗಂಟೆಯೂ ಬೆಂಬಲಿಸುತ್ತಾರೆ</p></li></ul>.<p><strong>ಪ್ರಧಾನಿ ಮಾತಿಗೆ ಮರುಳಾಗಬೇಡಿ: ಪ್ರಿಯಾಂಕಾ </strong></p><p><strong>ರಾಮನಗರ (ಉತ್ತರಾಖಂಡ):</strong> ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಆಡುವ ಬಣ್ಣದ ಮಾತುಗಳಿಗೆ ಮರುಳಾಗಬೇಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತದಾರರಿಗೆ ತಿಳಿಸಿದರು. </p><p>ಉತ್ತರಾಖಂಡದ ರಾಮನಗರದಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ‘ಮೋದಿ ಸರ್ಕಾರದ 10 ವರ್ಷಗಳು ನಿಮ್ಮ ಜೀವನದಲ್ಲಿ ನಿಜವಾಗಿಯೂ ಸಕಾರಾತ್ಮಕ ಬದಲಾವಣೆಯನ್ನು ತಂದಿದೆಯೇ ಎಂಬುದನ್ನು ಮತ ಚಲಾಯಿಸುವ ಮುನ್ನ ನೀವು ನಿಮ್ಮಲ್ಲಿ ಪ್ರಾಮಾಣಿಕವಾಗಿ ಕೇಳಿಕೊಳ್ಳಿ’ ಎಂದು ಹೇಳಿದರು.</p><p> ‘ಮೋದಿ ಸರ್ಕಾರ ತನ್ನ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಬೆಲೆಯೇರಿಕೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>