<p><strong>ಮುಂಬೈ</strong>: ವಿರೋಧ ಪಕ್ಷಗಳ ಗುಂಪಿನಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಹೊಂದಿರುವುದರಿಂದ ಲೋಕಸಭೆಯಲ್ಲಿ ಹೊಸ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎನ್ಸಿಪಿ (ಎಸ್ಪಿ) ವರಿಷ್ಠ ಶರದ್ ಪವಾರ್ ಹೇಳಿದ್ದಾರೆ.</p><p>‘ಜೂನ್ 24ರಿಂದ ಪ್ರಾರಂಭವಾಗುವ ಲೋಕಸಭೆ ಅಧಿವೇಶನಕ್ಕೆ ಮೊದಲು, ಇಂಡಿಯಾ ಮೈತ್ರಿಕೂಟದ ಪಾಲುದಾರರು ಸಭೆ ನಡೆಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುತ್ತಾರೆ. ನಾವು ನಿರ್ಧಾರವನ್ನು ಅನುಮೋದಿಸುತ್ತೇವೆ’ ಎಂದು ಪವಾರ್ ಹೇಳಿದರು. </p><p>ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಹುದ್ದೆಯು ವಿರೋಧ ಪಕ್ಷಗಳ ಪಾಲಾಗುವ ಸಾಧ್ಯತೆ ಕಡಿಮೆ ಇದೆ ಎಂದ ಅವರು, ‘ಕಳೆದ ಬಾರಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವ ಭರವಸೆಯನ್ನು ಈಡೇರಿಸಲಿಲ್ಲ. ಮೋದಿ ಅವರು ಈ ಬಾರಿಯೂ ಇದನ್ನು ಒಪ್ಪದ ಕಾರಣ ಅದು ಈಡೇರುವ ಬಗ್ಗೆ ನನಗೆ ಅನುಮಾನವಿದೆ. ಆದರೂ ನಾವು ಆ ಬಗ್ಗೆ ಚರ್ಚಿಸಲಿದ್ದೇವೆ’ ಎಂದು ಹೇಳಿದರು. </p><p>‘288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಮುಂದೆ ನಡೆಯಲಿರುವ ಚುನಾವಣೆಯನ್ನು ಗೆಲ್ಲಲು ವಿಪಕ್ಷಗಳ ಮಹಾ ವಿಕಾಸ್ ಆಘಾಡಿ (ಎಂವಿಎ) ಸಜ್ಜಾಗಿದೆ. ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಿತ್ರಪಕ್ಷಗಳು ಒಟ್ಟು 48 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಗೆದ್ದಿವೆ. ಈ ಫಲಿತಾಂಶವನ್ನು ಗಮನಿಸಿದರೆ ನಾವು 155ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ’ ಎಂದು ಅವರು ಪವಾರ್ ವಿಶ್ವಾಸ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಿರೋಧ ಪಕ್ಷಗಳ ಗುಂಪಿನಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಹೊಂದಿರುವುದರಿಂದ ಲೋಕಸಭೆಯಲ್ಲಿ ಹೊಸ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎನ್ಸಿಪಿ (ಎಸ್ಪಿ) ವರಿಷ್ಠ ಶರದ್ ಪವಾರ್ ಹೇಳಿದ್ದಾರೆ.</p><p>‘ಜೂನ್ 24ರಿಂದ ಪ್ರಾರಂಭವಾಗುವ ಲೋಕಸಭೆ ಅಧಿವೇಶನಕ್ಕೆ ಮೊದಲು, ಇಂಡಿಯಾ ಮೈತ್ರಿಕೂಟದ ಪಾಲುದಾರರು ಸಭೆ ನಡೆಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುತ್ತಾರೆ. ನಾವು ನಿರ್ಧಾರವನ್ನು ಅನುಮೋದಿಸುತ್ತೇವೆ’ ಎಂದು ಪವಾರ್ ಹೇಳಿದರು. </p><p>ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಹುದ್ದೆಯು ವಿರೋಧ ಪಕ್ಷಗಳ ಪಾಲಾಗುವ ಸಾಧ್ಯತೆ ಕಡಿಮೆ ಇದೆ ಎಂದ ಅವರು, ‘ಕಳೆದ ಬಾರಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವ ಭರವಸೆಯನ್ನು ಈಡೇರಿಸಲಿಲ್ಲ. ಮೋದಿ ಅವರು ಈ ಬಾರಿಯೂ ಇದನ್ನು ಒಪ್ಪದ ಕಾರಣ ಅದು ಈಡೇರುವ ಬಗ್ಗೆ ನನಗೆ ಅನುಮಾನವಿದೆ. ಆದರೂ ನಾವು ಆ ಬಗ್ಗೆ ಚರ್ಚಿಸಲಿದ್ದೇವೆ’ ಎಂದು ಹೇಳಿದರು. </p><p>‘288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಮುಂದೆ ನಡೆಯಲಿರುವ ಚುನಾವಣೆಯನ್ನು ಗೆಲ್ಲಲು ವಿಪಕ್ಷಗಳ ಮಹಾ ವಿಕಾಸ್ ಆಘಾಡಿ (ಎಂವಿಎ) ಸಜ್ಜಾಗಿದೆ. ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಿತ್ರಪಕ್ಷಗಳು ಒಟ್ಟು 48 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಗೆದ್ದಿವೆ. ಈ ಫಲಿತಾಂಶವನ್ನು ಗಮನಿಸಿದರೆ ನಾವು 155ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ’ ಎಂದು ಅವರು ಪವಾರ್ ವಿಶ್ವಾಸ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>