<p><strong>ನವದೆಹಲಿ:</strong> ದಕ್ಷಿಣ ಭಾರತದ ತುದಿಯಾದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಐದು ತಿಂಗಳು ನಡೆದ ‘ಭಾರತ್ ಜೋಡೊ ಯಾತ್ರೆ’ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಜ. 14ರಿಂದ ‘ಭಾರತ್ ನ್ಯಾಯ ಯಾತ್ರೆ’ ಕೈಗೊಳ್ಳಲಿದ್ದಾರೆ.</p>.<p>ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದ ಇಂಫಾಲ್ನಿಂದ ಮುಂಬೈವರೆಗಿನ ಈ ಯಾತ್ರೆಯು 66 ದಿನ ನಡೆಯಲಿದೆ. ಲೋಕಸಭೆ ಚುನಾವಣೆ ಮುನ್ನ ಕೈಗೊಳ್ಳಲಿರುವ ಯಾತ್ರೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕೆ ಸಂಬಂಧಿಸಿದ ವಿಷಯಗಳು ಪ್ರಮುಖವಾಗಿ ಪ್ರಸ್ತಾಪವಾಗಲಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಹಸಿರು ನಿಶಾನೆ ತೋರುವರು. ಮಾರ್ಚ್ 20ರಂದು ಯಾತ್ರೆ ಕೊನೆಗೊಳ್ಳಲಿದೆ.</p>.<p>ರಾಹುಲ್ ಅವರ ಈ ಎರಡನೇ ಯಾತ್ರೆಯು ಪೂರ್ವದಿಂದ ಪಶ್ಚಿಮದವರೆಗೆ 14 ರಾಜ್ಯಗಳ 85 ಜಿಲ್ಲೆಗಳಲ್ಲಿ 6,200 ಕಿ.ಮೀ ಕ್ರಮಿಸಲಿದೆ. ಯಾತ್ರೆಯು ಹೈಬ್ರಿಡ್ ಮಾದರಿಯಲ್ಲಿ ಇರಲಿದ್ದು ಬಸ್ ಸಂಚಾರ ಮತ್ತು ಪಾದಯಾತ್ರೆ ಎರಡನ್ನೂ ಒಳಗೊಂಡಿರಲಿದೆ. </p>.<p>ಯಾತ್ರೆಯು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸಗಢ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಸಂಚರಿಸಲಿದೆ.</p>.<p>ಕಳೆದ ವರ್ಷದ ಸೆ. 7ರಿಂದ ಈ ವರ್ಷದ ಜ. 20ರವರೆಗೆ ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ನಡೆದ ‘ಭಾರತ್ ಜೋಡೊ ಯಾತ್ರೆ’ ಪಾದಯಾತ್ರೆಯು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಿತ್ತು.</p>.<p>ಯುವಜನರೊಂದಿಗೆ ಸಂವಾದ: ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಪಕ್ಷದ ಈ ಹೊಸ ಕಾರ್ಯಕ್ರಮವನ್ನು ಪ್ರಕಟಿಸಿದರು. ನಿರುದ್ಯೋಗ, ಬೆಲೆ ಏರಿಕೆಯಿಂದ ಜನರಿಗೆ ಆಗಿರುವ ತೊಂದರೆಗಳ ಬಗ್ಗೆ ಯಾತ್ರೆ ಒತ್ತು ನೀಡಲಿದೆ. ಯುವ ಜನರು, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಜನರೊಂದಿಗೆ ಸಂವಾದವನ್ನು ಒಳಗೊಂಡಿರುತ್ತದೆ ಎಂದರು.</p>.<p>ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವು, ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ವಿಷಯಗಳಲ್ಲದೆ ‘ನ್ಯಾಯಕ್ಕಾಗಿ ಯಾತ್ರೆ’ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಖಾತರಿಪಡಿಸುವ ಉದ್ದೇಶವನ್ನೂ ಹೊಂದಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಪರ್ಕ) ಜೈರಾಮ್ ರಮೇಶ್ ವಿವರಿಸಿದರು.</p>.<p>‘ಭಾರತ್ ಜೋಡೊ ಯಾತ್ರೆ’ ವೇಳೆ ಆರ್ಥಿಕ ಅಸಮಾನತೆ, ಧ್ರುವೀಕರಣ ಮತ್ತು ಸರ್ವಾಧಿಕಾರದ ವಿಷಯಗಳನ್ನು ರಾಹುಲ್ ಪ್ರಸ್ತಾಪಿಸಿದ್ದರು ಎಂದರು. </p>.<p>‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆ ಕುರಿತು ಮಾತುಕತೆ ಆರಂಭಿಸಿರುವ ಸಂದರ್ಭದಲ್ಲೇ ಈ ಯಾತ್ರೆ ನಡೆಯುತ್ತಿದೆ. </p>.<p>ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿಯವರು ಸುಮಾರು ಏಳು ತಿಂಗಳು ಮೌನವಾಗಿದ್ದರು. ರಾಜ್ಯವನ್ನು ಬಿಜೆಪಿ ಹಾಳುಗೆಡುವಿರುವುದರ ಬಗ್ಗೆ ಪಕ್ಷದ ಆತಂಕ ಮತ್ತು ಕಳಕಳಿಯನ್ನು ಯಾತ್ರೆ ಬಿಂಬಿಸುತ್ತದೆ. ಮಣಿಪುರವನ್ನು ಪುನರ್ನಿರ್ಮಿಸುವ ಪ್ರಕ್ರಿಯೆಗೆ ಯಾತ್ರೆ ಚಾಲನೆ ನೀಡುತ್ತದೆ ಎಂದು ಜೈರಾಮ್ ರಮೇಶ್ ಹೇಳಿದರು.</p>.<p>‘ಭಾರತ್ ಜೋಡೊ ಯಾತ್ರೆ’ಯ ಮಾದರಿಯಲ್ಲೇ ಎರಡನೇ ಯಾತ್ರೆಯನ್ನು ರಾಹುಲ್ ಅವರು ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಒತ್ತಾಯ ಕೇಳಿಬಂದಿತ್ತು. </p>.<p>ಪಕ್ಷದ ಚುನಾವಣಾ ಸಿದ್ಧತೆಗೆ ಯಾತ್ರೆಯು ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ನ ಚುನಾವಣಾ ಸಿದ್ಧತೆ ಬಗ್ಗೆ ಚಿಂತೆ ಅಗತ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಕ್ಷಿಣ ಭಾರತದ ತುದಿಯಾದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಐದು ತಿಂಗಳು ನಡೆದ ‘ಭಾರತ್ ಜೋಡೊ ಯಾತ್ರೆ’ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಜ. 14ರಿಂದ ‘ಭಾರತ್ ನ್ಯಾಯ ಯಾತ್ರೆ’ ಕೈಗೊಳ್ಳಲಿದ್ದಾರೆ.</p>.<p>ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದ ಇಂಫಾಲ್ನಿಂದ ಮುಂಬೈವರೆಗಿನ ಈ ಯಾತ್ರೆಯು 66 ದಿನ ನಡೆಯಲಿದೆ. ಲೋಕಸಭೆ ಚುನಾವಣೆ ಮುನ್ನ ಕೈಗೊಳ್ಳಲಿರುವ ಯಾತ್ರೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕೆ ಸಂಬಂಧಿಸಿದ ವಿಷಯಗಳು ಪ್ರಮುಖವಾಗಿ ಪ್ರಸ್ತಾಪವಾಗಲಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಹಸಿರು ನಿಶಾನೆ ತೋರುವರು. ಮಾರ್ಚ್ 20ರಂದು ಯಾತ್ರೆ ಕೊನೆಗೊಳ್ಳಲಿದೆ.</p>.<p>ರಾಹುಲ್ ಅವರ ಈ ಎರಡನೇ ಯಾತ್ರೆಯು ಪೂರ್ವದಿಂದ ಪಶ್ಚಿಮದವರೆಗೆ 14 ರಾಜ್ಯಗಳ 85 ಜಿಲ್ಲೆಗಳಲ್ಲಿ 6,200 ಕಿ.ಮೀ ಕ್ರಮಿಸಲಿದೆ. ಯಾತ್ರೆಯು ಹೈಬ್ರಿಡ್ ಮಾದರಿಯಲ್ಲಿ ಇರಲಿದ್ದು ಬಸ್ ಸಂಚಾರ ಮತ್ತು ಪಾದಯಾತ್ರೆ ಎರಡನ್ನೂ ಒಳಗೊಂಡಿರಲಿದೆ. </p>.<p>ಯಾತ್ರೆಯು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸಗಢ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಸಂಚರಿಸಲಿದೆ.</p>.<p>ಕಳೆದ ವರ್ಷದ ಸೆ. 7ರಿಂದ ಈ ವರ್ಷದ ಜ. 20ರವರೆಗೆ ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ನಡೆದ ‘ಭಾರತ್ ಜೋಡೊ ಯಾತ್ರೆ’ ಪಾದಯಾತ್ರೆಯು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಿತ್ತು.</p>.<p>ಯುವಜನರೊಂದಿಗೆ ಸಂವಾದ: ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಪಕ್ಷದ ಈ ಹೊಸ ಕಾರ್ಯಕ್ರಮವನ್ನು ಪ್ರಕಟಿಸಿದರು. ನಿರುದ್ಯೋಗ, ಬೆಲೆ ಏರಿಕೆಯಿಂದ ಜನರಿಗೆ ಆಗಿರುವ ತೊಂದರೆಗಳ ಬಗ್ಗೆ ಯಾತ್ರೆ ಒತ್ತು ನೀಡಲಿದೆ. ಯುವ ಜನರು, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಜನರೊಂದಿಗೆ ಸಂವಾದವನ್ನು ಒಳಗೊಂಡಿರುತ್ತದೆ ಎಂದರು.</p>.<p>ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವು, ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ವಿಷಯಗಳಲ್ಲದೆ ‘ನ್ಯಾಯಕ್ಕಾಗಿ ಯಾತ್ರೆ’ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಖಾತರಿಪಡಿಸುವ ಉದ್ದೇಶವನ್ನೂ ಹೊಂದಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಪರ್ಕ) ಜೈರಾಮ್ ರಮೇಶ್ ವಿವರಿಸಿದರು.</p>.<p>‘ಭಾರತ್ ಜೋಡೊ ಯಾತ್ರೆ’ ವೇಳೆ ಆರ್ಥಿಕ ಅಸಮಾನತೆ, ಧ್ರುವೀಕರಣ ಮತ್ತು ಸರ್ವಾಧಿಕಾರದ ವಿಷಯಗಳನ್ನು ರಾಹುಲ್ ಪ್ರಸ್ತಾಪಿಸಿದ್ದರು ಎಂದರು. </p>.<p>‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆ ಕುರಿತು ಮಾತುಕತೆ ಆರಂಭಿಸಿರುವ ಸಂದರ್ಭದಲ್ಲೇ ಈ ಯಾತ್ರೆ ನಡೆಯುತ್ತಿದೆ. </p>.<p>ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿಯವರು ಸುಮಾರು ಏಳು ತಿಂಗಳು ಮೌನವಾಗಿದ್ದರು. ರಾಜ್ಯವನ್ನು ಬಿಜೆಪಿ ಹಾಳುಗೆಡುವಿರುವುದರ ಬಗ್ಗೆ ಪಕ್ಷದ ಆತಂಕ ಮತ್ತು ಕಳಕಳಿಯನ್ನು ಯಾತ್ರೆ ಬಿಂಬಿಸುತ್ತದೆ. ಮಣಿಪುರವನ್ನು ಪುನರ್ನಿರ್ಮಿಸುವ ಪ್ರಕ್ರಿಯೆಗೆ ಯಾತ್ರೆ ಚಾಲನೆ ನೀಡುತ್ತದೆ ಎಂದು ಜೈರಾಮ್ ರಮೇಶ್ ಹೇಳಿದರು.</p>.<p>‘ಭಾರತ್ ಜೋಡೊ ಯಾತ್ರೆ’ಯ ಮಾದರಿಯಲ್ಲೇ ಎರಡನೇ ಯಾತ್ರೆಯನ್ನು ರಾಹುಲ್ ಅವರು ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಒತ್ತಾಯ ಕೇಳಿಬಂದಿತ್ತು. </p>.<p>ಪಕ್ಷದ ಚುನಾವಣಾ ಸಿದ್ಧತೆಗೆ ಯಾತ್ರೆಯು ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ನ ಚುನಾವಣಾ ಸಿದ್ಧತೆ ಬಗ್ಗೆ ಚಿಂತೆ ಅಗತ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>