‘ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಯತ್ನಗಳು ನಡೆಯುತ್ತಿವೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಮೇಲೆ ಬಿಜೆಪಿ, ಆರ್ಎಸ್ಎಸ್ನಿಂದ ಸತತ ದಾಳಿ ನಡೆಯುತ್ತಿದೆ. ನ್ಯಾಯ, ಸಮಾನತೆಯಂತಹ ಸಂವಿಧಾನದ ಮೂಲ ಅಂಶಗಳ ಮೇಲೂ ಆಕ್ರಮಣ ನಡೆಸಲಾಗುತ್ತಿದೆ. ಇಂಥ ಸೈದ್ಧಾಂತಿಕ ದಾಳಿಯನ್ನು ಎದುರಿಸುವ ಸಲುವಾಗಿ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲು ಸಹ ನಿರ್ಧರಿಸಲಾಗಿದೆ’ ಎಂದರು.