<p><strong>ತಿರುವನಂತಪುರ</strong>: ಜಮಾತ್–ಎ–ಇಸ್ಲಾಮಿ ಮತ್ತು ಅದರ ರಾಜಕೀಯ ಪಕ್ಷವಾದ ವೆಲ್ಫೇರ್ ಪಾರ್ಟಿಯೊಂದಿಗಿನ ಸಂಬಂಧವನ್ನು ಉಲ್ಲೇಖಿಸಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯ ವಿರುದ್ಧ ಕೇರಳ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದೆ. ಈ ಹಿಂದೆ ಆಡಳಿತಾರೂಢ ಸಿಪಿಐ(ಎಂ) ಕೂಡ ಯುಡಿಎಫ್ ಅನ್ನು ಗುರಿಯಾಗಿಸಿ ಇದೇ ರೀತಿಯಲ್ಲಿ ಟೀಕಿಸಿತ್ತು. </p>.<p>‘ರಾಹುಲ್ ಗಾಂಧಿಯ ಕಾಂಗ್ರೆಸ್ ಮತ್ತು ಯುಡಿಎಫ್ ಮೈತ್ರಿಯು ಜಮಾತೆ–ಎ–ಇಸ್ಲಾಮಿ ಸೇರಿದಂತೆ ತೀವ್ರವಾದಿ ಇಸ್ಲಾಮಿಕ್ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕೇರಳ ಮತ್ತು ಭಾರತ ಎರಡಕ್ಕೂ ಅಪಾಯವನ್ನು ಉಂಟುಮಾಡುತ್ತಿವೆ’ ಎಂದು ಬಿಜೆಪಿಯ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಫೇಸ್ಬುಕ್ ಪೋಸ್ಟ್ನಲ್ಲಿ ಆರೋಪಿಸಿದ್ದಾರೆ.</p>.<p>‘ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಗಳಿಗೆ ಪ್ರಜಾಪ್ರಭುತ್ವ ಸಂಸ್ಥೆಗಳೊಳಗೆ ನುಸುಳಲು ಬಿಡಬಾರದು’ ಎಂದು ಚಂದ್ರಶೇಖರ್ ಹೇಳಿದ್ದಾರೆ.</p>.<p>ಕಾಂಗ್ರೆಸ್ ಮತ್ತು ಯುಡಿಎಫ್ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಮೂಲಭೂತವಾದಿ ಸಂಘಟನೆಗಳ ಬೆಂಬಲ ಪಡೆದಿದ್ದವು ಎಂದು ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಜಮಾತ್–ಎ–ಇಸ್ಲಾಮಿ ಮತ್ತು ಅದರ ರಾಜಕೀಯ ಪಕ್ಷವಾದ ವೆಲ್ಫೇರ್ ಪಾರ್ಟಿಯೊಂದಿಗಿನ ಸಂಬಂಧವನ್ನು ಉಲ್ಲೇಖಿಸಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯ ವಿರುದ್ಧ ಕೇರಳ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದೆ. ಈ ಹಿಂದೆ ಆಡಳಿತಾರೂಢ ಸಿಪಿಐ(ಎಂ) ಕೂಡ ಯುಡಿಎಫ್ ಅನ್ನು ಗುರಿಯಾಗಿಸಿ ಇದೇ ರೀತಿಯಲ್ಲಿ ಟೀಕಿಸಿತ್ತು. </p>.<p>‘ರಾಹುಲ್ ಗಾಂಧಿಯ ಕಾಂಗ್ರೆಸ್ ಮತ್ತು ಯುಡಿಎಫ್ ಮೈತ್ರಿಯು ಜಮಾತೆ–ಎ–ಇಸ್ಲಾಮಿ ಸೇರಿದಂತೆ ತೀವ್ರವಾದಿ ಇಸ್ಲಾಮಿಕ್ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕೇರಳ ಮತ್ತು ಭಾರತ ಎರಡಕ್ಕೂ ಅಪಾಯವನ್ನು ಉಂಟುಮಾಡುತ್ತಿವೆ’ ಎಂದು ಬಿಜೆಪಿಯ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಫೇಸ್ಬುಕ್ ಪೋಸ್ಟ್ನಲ್ಲಿ ಆರೋಪಿಸಿದ್ದಾರೆ.</p>.<p>‘ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಗಳಿಗೆ ಪ್ರಜಾಪ್ರಭುತ್ವ ಸಂಸ್ಥೆಗಳೊಳಗೆ ನುಸುಳಲು ಬಿಡಬಾರದು’ ಎಂದು ಚಂದ್ರಶೇಖರ್ ಹೇಳಿದ್ದಾರೆ.</p>.<p>ಕಾಂಗ್ರೆಸ್ ಮತ್ತು ಯುಡಿಎಫ್ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಮೂಲಭೂತವಾದಿ ಸಂಘಟನೆಗಳ ಬೆಂಬಲ ಪಡೆದಿದ್ದವು ಎಂದು ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>