ಕರ್ನಾಟಕ ಚುನಾವಣೆ ಫಲಿತಾಂಶ ಮತ್ತು ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಖ್ವಿ, ’ಕರ್ನಾಟಕ ಚುನಾವಣೆ ನಂತರ ವಿರೋಧ ಪಕ್ಷಗಳು ಭ್ರಮೆಯಲ್ಲಿವೆ. 2018ರಲ್ಲಿ ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ಕರ್ನಾಟಕದಲ್ಲಿ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಆ ವೇಳೆ 2019ರ ಲೋಕಸಭಾ ಚುನಾವಣೆ ಗೆಲ್ಲಬಹುದೆಂಬ ಭ್ರಮೆಯಲ್ಲಿತ್ತು. ಈಗಲೂ ಅದೇ ಭ್ರಮೆಯಲ್ಲಿದೆ’ ಎಂದು ಹೇಳಿದರು.