<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದ ಮರುದಿನವೇ ಆರ್ಪಿಎನ್ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಸೇರುವುದಕ್ಕಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.</p>.<p>ಜಾರ್ಖಂಡ್ ಮತ್ತು ಛತ್ತೀಸ್ಗಡದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದ ಸಿಂಗ್, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶಕ್ಕೆ ಹಾಗೂ ದೇಶದ ಜನರಿಗೆ ಸೇವೆ ಸಲ್ಲಿಸಲು ಪಕ್ಷದಲ್ಲಿ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.</p>.<p><a href="https://www.prajavani.net/india-news/up-election-2022-star-campaigner-list-of-uttar-pradesh-congress-announced-904658.html" itemprop="url">UP Election | ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ: ಯಾರಿಗೆಲ್ಲ ಸ್ಥಾನ? </a></p>.<p>‘ಗಣರಾಜ್ಯ ಉದಯಿಸಿದ ದಿನವನ್ನು ನಾವು ಆಚರಿಸುತ್ತಿರುವ ಈ ಸಂದರ್ಭದಲ್ಲಿ ನಾನು ರಾಜಕೀಯ ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ಜೈ ಹಿಂದ್,’ ಎಂದು ರಾಜೀನಾಮೆ ಪತ್ರದ ಪ್ರತಿಯೊಂದಿಗೆ ಅವರು ಟ್ವೀಟ್ ಮಾಡಿದ್ದಾರೆ.</p>.<p>ಅವರು ಇಂದೇ ಬಿಜೆಪಿ ಸೇರುವ ಸಾಧ್ಯತೆ ಇದೆ. ಜಿತಿನ್ ಪ್ರಸಾದ ಅವರ ಬಳಿಕ ಬಿಜೆಪಿ ಸೇರುತ್ತಿರುವ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದಾರೆ.</p>.<p>ಆರ್ಪಿಎನ್ ಸಿಂಗ್ (58) ಎಂದೇ ಖ್ಯಾತರಾಗಿರುವ ರತನ್ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಅವರನ್ನು ಸಮಾಜವಾದಿ ಪಕ್ಷದ ಸ್ವಾಮಿ ಪ್ರಸಾದ್ ಮೌರ್ಯ (ಇತ್ತೀಚೆಗೆ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದರು) ವಿರುದ್ಧ ಬಿಜೆಪಿ ಕಣಕ್ಕಿಳಿಸುವ ನಿರೀಕ್ಷೆ ಇದೆ.</p>.<p>ಪಡ್ರೌನಾದ ರಾಜಮನೆತನದ ಹಿನ್ನೆಲೆಯುಳ್ಳ ಸಿಂಗ್, 1996 ಹಾಗೂ 2009ರ ಅವಧಿಯಲ್ಲಿ ಪಡ್ರೌನಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2009ರಲ್ಲಿ ಕುಶೀನಗರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2014 ಹಾಗೂ 2019ರಲ್ಲಿ ಸೋಲನುಭವಿಸಿದ್ದರು.</p>.<p><a href="https://www.prajavani.net/india-news/sp-mla-subhash-rai-joins-bjp-904828.html" itemprop="url">ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಶಾಸಕ ಸುಭಾಷ್ ರಾಯ್ ಬಿಜೆಪಿಗೆ ಸೇರ್ಪಡೆ </a></p>.<p>1997ರಿಂದ 1999ರ ವರೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಯುವ ಮೋರ್ಚಾದ ಅಧ್ಯಕ್ಷರಾಗಿದ್ದರು. 2003ರಿಂದ 2006ರ ವರೆಗೆ ಎಐಸಿಸಿ ಕಾರ್ಯದರ್ಶಿಯಾಗಿದ್ದರು.</p>.<p>2009ರಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ರಸ್ತೆ, ಸಾರಿಗೆ ಮತ್ತು ಹೆದ್ದಾರಿ, ಪೆಟ್ರೋಲಿಯಂ ಹಾಗೂ ಗೃಹ ಇಲಾಖೆಗಳ ರಾಜ್ಯ ಖಾತೆ ಸಚಿವರಾಗಿದ್ದರು.</p>.<p><a href="https://www.prajavani.net/india-news/bjp-slams-akhilesh-for-pakistan-comments-904826.html" itemprop="url">ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ಗೆ ಪಾಕಿಸ್ತಾನದ ಮೇಲೆ ಪ್ರೀತಿ ಎಂದ ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದ ಮರುದಿನವೇ ಆರ್ಪಿಎನ್ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಸೇರುವುದಕ್ಕಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.</p>.<p>ಜಾರ್ಖಂಡ್ ಮತ್ತು ಛತ್ತೀಸ್ಗಡದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದ ಸಿಂಗ್, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶಕ್ಕೆ ಹಾಗೂ ದೇಶದ ಜನರಿಗೆ ಸೇವೆ ಸಲ್ಲಿಸಲು ಪಕ್ಷದಲ್ಲಿ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.</p>.<p><a href="https://www.prajavani.net/india-news/up-election-2022-star-campaigner-list-of-uttar-pradesh-congress-announced-904658.html" itemprop="url">UP Election | ಕಾಂಗ್ರೆಸ್ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ: ಯಾರಿಗೆಲ್ಲ ಸ್ಥಾನ? </a></p>.<p>‘ಗಣರಾಜ್ಯ ಉದಯಿಸಿದ ದಿನವನ್ನು ನಾವು ಆಚರಿಸುತ್ತಿರುವ ಈ ಸಂದರ್ಭದಲ್ಲಿ ನಾನು ರಾಜಕೀಯ ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ಜೈ ಹಿಂದ್,’ ಎಂದು ರಾಜೀನಾಮೆ ಪತ್ರದ ಪ್ರತಿಯೊಂದಿಗೆ ಅವರು ಟ್ವೀಟ್ ಮಾಡಿದ್ದಾರೆ.</p>.<p>ಅವರು ಇಂದೇ ಬಿಜೆಪಿ ಸೇರುವ ಸಾಧ್ಯತೆ ಇದೆ. ಜಿತಿನ್ ಪ್ರಸಾದ ಅವರ ಬಳಿಕ ಬಿಜೆಪಿ ಸೇರುತ್ತಿರುವ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದಾರೆ.</p>.<p>ಆರ್ಪಿಎನ್ ಸಿಂಗ್ (58) ಎಂದೇ ಖ್ಯಾತರಾಗಿರುವ ರತನ್ಜಿತ್ ಪ್ರತಾಪ್ ನಾರಾಯಣ್ ಸಿಂಗ್ ಅವರನ್ನು ಸಮಾಜವಾದಿ ಪಕ್ಷದ ಸ್ವಾಮಿ ಪ್ರಸಾದ್ ಮೌರ್ಯ (ಇತ್ತೀಚೆಗೆ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದರು) ವಿರುದ್ಧ ಬಿಜೆಪಿ ಕಣಕ್ಕಿಳಿಸುವ ನಿರೀಕ್ಷೆ ಇದೆ.</p>.<p>ಪಡ್ರೌನಾದ ರಾಜಮನೆತನದ ಹಿನ್ನೆಲೆಯುಳ್ಳ ಸಿಂಗ್, 1996 ಹಾಗೂ 2009ರ ಅವಧಿಯಲ್ಲಿ ಪಡ್ರೌನಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2009ರಲ್ಲಿ ಕುಶೀನಗರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2014 ಹಾಗೂ 2019ರಲ್ಲಿ ಸೋಲನುಭವಿಸಿದ್ದರು.</p>.<p><a href="https://www.prajavani.net/india-news/sp-mla-subhash-rai-joins-bjp-904828.html" itemprop="url">ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಶಾಸಕ ಸುಭಾಷ್ ರಾಯ್ ಬಿಜೆಪಿಗೆ ಸೇರ್ಪಡೆ </a></p>.<p>1997ರಿಂದ 1999ರ ವರೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಯುವ ಮೋರ್ಚಾದ ಅಧ್ಯಕ್ಷರಾಗಿದ್ದರು. 2003ರಿಂದ 2006ರ ವರೆಗೆ ಎಐಸಿಸಿ ಕಾರ್ಯದರ್ಶಿಯಾಗಿದ್ದರು.</p>.<p>2009ರಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ರಸ್ತೆ, ಸಾರಿಗೆ ಮತ್ತು ಹೆದ್ದಾರಿ, ಪೆಟ್ರೋಲಿಯಂ ಹಾಗೂ ಗೃಹ ಇಲಾಖೆಗಳ ರಾಜ್ಯ ಖಾತೆ ಸಚಿವರಾಗಿದ್ದರು.</p>.<p><a href="https://www.prajavani.net/india-news/bjp-slams-akhilesh-for-pakistan-comments-904826.html" itemprop="url">ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ಗೆ ಪಾಕಿಸ್ತಾನದ ಮೇಲೆ ಪ್ರೀತಿ ಎಂದ ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>