ಡಿಸೆಂಬರ್ 3 ರಂದು ನಡೆಯುವ ಮತ ಎಣಿಕೆಗೂ ಮುಂಚೆಯೇ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದೆ. ಆದರೂ, ಕಾಂಗ್ರೆಸ್ ಕಾರ್ಯಕರ್ತರ ಧೈರ್ಯವನ್ನು ಕುಗ್ಗಿಸಲು ಮತ್ತು ಚುನಾವಣಾ ಫಲಿತಾಂಶ ಬರುವ ಮೊದಲೇ ಕೆಲಸಗಳನ್ನು ಮಾಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಉದ್ದೇಶಪೂರ್ವಕವಾಗಿ ಕೆಲವು ಸಮೀಕ್ಷೆಗಳನ್ನು ಬಿಜೆಪಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ಆರೋಪಿಸಿದ್ದಾರೆ.
ಜಿಲ್ಲಾ ಘಟಕದ ಅಧ್ಯಕ್ಷರು, ಮುಂಚೂಣಿ ಸಂಘಟನೆಗಳ ಮುಖಂಡರು ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ತಮ್ಮ ಕಾರ್ಯಗಳತ್ತ ಗಮನ ಹರಿಸುವ ಮೂಲಕ ಮತ ಎಣಿಕೆ ಸಂಪೂರ್ಣ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಕಮಲ್ ನಾಥ್ ಮನವಿ ಮಾಡಿದರು.