<p><strong>ಬೆಂಗಳೂರು:</strong> ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಬಹುಮತ ಪಡೆದು ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಶುಕ್ರವಾರ) ಹೇಳಿದ್ದಾರೆ. </p><p>ಈ ಕುರಿತು ಸುದ್ದಿಸಂಸ್ಧೆ 'ಎಎನ್ಐ'ಗೆ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. </p><p>'ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಜಯ ಸಾಧಿಸಲಿದ್ದೇವೆ. ಹರಿಯಾಣವಂತೂ ಗೆಲ್ಲಲಿದ್ದೇವೆ. ಜಮ್ಮು-ಕಾಶ್ಮೀರದಲ್ಲೂ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ' ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. </p><p>'ಬಿಜೆಪಿ ಬಳಿ ದುಡ್ಡು ಇದೆ, ಅವರ ನೀತಿ ವಿಭಿನ್ನ ಅಂತ ಹೇಳುತ್ತಾರೆ. ಆದರೆ ಈಗ ಫಲಿತಾಂಶ ನಿಮ್ಮ ಮುಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲರ ಬೆಂಬಲವಿದೆ. ಕಾಂಗ್ರೆಸ್ ಪರ ಎಲ್ಲರ ಗಮನವಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವೇ ಗೆಲುವು ಗಳಿಸಲಿದೆ' ಎಂದು ಅವರು ಹೇಳಿದ್ದಾರೆ. </p><p>ಈ ಮೊದಲು ಮುಡಾ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿದ್ದ ಖರ್ಗೆ, 'ಇದೊಂದು ಸಣ್ಣ ಪ್ರಕರಣ. ಆದರೂ ಈ ಬಗ್ಗೆ ಪ್ರತಿನಿತ್ಯ ಚರ್ಚಿಸಲಾಗುತ್ತಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಾರೆ. ಅವರ ಬೆಂಬಲಕ್ಕೆ ನಾನೂ ಸೇರಿದಂತೆ ಹೈಕಮಾಂಡ್ ನಿಂತಿದೆ' ಎಂದು ಹೇಳಿದ್ದರು. </p>.ಇಷ್ಟು ಸಂಕಷ್ಟ ಸೃಷ್ಟಿಯಾಗಲು ಪ್ರಧಾನಿ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ.ಸಿದ್ದರಾಮಯ್ಯ ಬೆಂಬಲಕ್ಕೆ ನಾವೆಲ್ಲ ಇದ್ದೇವೆ: ಮಲ್ಲಿಕಾರ್ಜುನ ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಬಹುಮತ ಪಡೆದು ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಶುಕ್ರವಾರ) ಹೇಳಿದ್ದಾರೆ. </p><p>ಈ ಕುರಿತು ಸುದ್ದಿಸಂಸ್ಧೆ 'ಎಎನ್ಐ'ಗೆ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. </p><p>'ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಜಯ ಸಾಧಿಸಲಿದ್ದೇವೆ. ಹರಿಯಾಣವಂತೂ ಗೆಲ್ಲಲಿದ್ದೇವೆ. ಜಮ್ಮು-ಕಾಶ್ಮೀರದಲ್ಲೂ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ' ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. </p><p>'ಬಿಜೆಪಿ ಬಳಿ ದುಡ್ಡು ಇದೆ, ಅವರ ನೀತಿ ವಿಭಿನ್ನ ಅಂತ ಹೇಳುತ್ತಾರೆ. ಆದರೆ ಈಗ ಫಲಿತಾಂಶ ನಿಮ್ಮ ಮುಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲರ ಬೆಂಬಲವಿದೆ. ಕಾಂಗ್ರೆಸ್ ಪರ ಎಲ್ಲರ ಗಮನವಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವೇ ಗೆಲುವು ಗಳಿಸಲಿದೆ' ಎಂದು ಅವರು ಹೇಳಿದ್ದಾರೆ. </p><p>ಈ ಮೊದಲು ಮುಡಾ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿದ್ದ ಖರ್ಗೆ, 'ಇದೊಂದು ಸಣ್ಣ ಪ್ರಕರಣ. ಆದರೂ ಈ ಬಗ್ಗೆ ಪ್ರತಿನಿತ್ಯ ಚರ್ಚಿಸಲಾಗುತ್ತಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಾರೆ. ಅವರ ಬೆಂಬಲಕ್ಕೆ ನಾನೂ ಸೇರಿದಂತೆ ಹೈಕಮಾಂಡ್ ನಿಂತಿದೆ' ಎಂದು ಹೇಳಿದ್ದರು. </p>.ಇಷ್ಟು ಸಂಕಷ್ಟ ಸೃಷ್ಟಿಯಾಗಲು ಪ್ರಧಾನಿ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ.ಸಿದ್ದರಾಮಯ್ಯ ಬೆಂಬಲಕ್ಕೆ ನಾವೆಲ್ಲ ಇದ್ದೇವೆ: ಮಲ್ಲಿಕಾರ್ಜುನ ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>