<p><strong>ನವದೆಹಲಿ</strong>: ಸೋನಿಯಾ ಗಾಂಧಿ ಅವರಿಂದ ಈ ಹುದ್ದೆಗೆ ಏರಿದ್ದೇನೆ ಎಂಬ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ, ‘ಇದನ್ನು ಕೇಳಿ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ’ ಎಂದು ಹೇಳಿದರು. </p>.<p>ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರನ್ನು ಕರ್ನಾಟಕದ ಜನರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಮಹಿಳೆಯೊಬ್ಬರು ವಿರೋಧ ಪಕ್ಷದ ಸ್ಥಾನಕ್ಕೆ ಯಾರನ್ನೂ ನೇಮಿಸಲು ಸಾಧ್ಯವಿಲ್ಲ. ಹೀಗೆ ಹೇಳುವುದು 140 ಕೋಟಿ ಜನರಿಗೆ ಮಾಡಿರುವ ಅಪಮಾನ’ ಎಂದು ಹೇಳಿದರು.</p>.<p>‘ತಾವೇ ಸಂವಿಧಾನದ ದೊಡ್ಡ ರಕ್ಷಕರು ಹಾಗೂ ಉಳಿದವರೆಲ್ಲ ಉಲ್ಲಂಘನೆ ಮಾಡುವವರು ಎಂದು ಕಾಂಗ್ರೆಸ್ನವರು ಹೇಳಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ನಾಯಕರೇ ಸಂವಿಧಾನವನ್ನು ಅತಿ ಹೆಚ್ಚು ಬಾರಿ ಉಲ್ಲಂಘಿಸಿದ್ದಾರೆ. 1975ರಲ್ಲಿ ಕಾಂಗ್ರೆಸ್ ಸಂವಿಧಾನವನ್ನೇ ಅಮಾನತಿನಲ್ಲಿಟ್ಟಿತ್ತು. ಜನರು ಈ ಘಟನೆಗಳನ್ನು ಮರೆಯಲು ಕಾಂಗ್ರೆಸ್ಸಿಗರು ಈಗ ಸಂವಿಧಾನದ ಉಲ್ಲಂಘನೆಯ ಕುರಿತು ಕಟ್ಟುಕಥೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸೋನಿಯಾ ಗಾಂಧಿ ಅವರಿಂದ ಈ ಹುದ್ದೆಗೆ ಏರಿದ್ದೇನೆ ಎಂಬ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ, ‘ಇದನ್ನು ಕೇಳಿ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ’ ಎಂದು ಹೇಳಿದರು. </p>.<p>ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರನ್ನು ಕರ್ನಾಟಕದ ಜನರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಮಹಿಳೆಯೊಬ್ಬರು ವಿರೋಧ ಪಕ್ಷದ ಸ್ಥಾನಕ್ಕೆ ಯಾರನ್ನೂ ನೇಮಿಸಲು ಸಾಧ್ಯವಿಲ್ಲ. ಹೀಗೆ ಹೇಳುವುದು 140 ಕೋಟಿ ಜನರಿಗೆ ಮಾಡಿರುವ ಅಪಮಾನ’ ಎಂದು ಹೇಳಿದರು.</p>.<p>‘ತಾವೇ ಸಂವಿಧಾನದ ದೊಡ್ಡ ರಕ್ಷಕರು ಹಾಗೂ ಉಳಿದವರೆಲ್ಲ ಉಲ್ಲಂಘನೆ ಮಾಡುವವರು ಎಂದು ಕಾಂಗ್ರೆಸ್ನವರು ಹೇಳಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ನಾಯಕರೇ ಸಂವಿಧಾನವನ್ನು ಅತಿ ಹೆಚ್ಚು ಬಾರಿ ಉಲ್ಲಂಘಿಸಿದ್ದಾರೆ. 1975ರಲ್ಲಿ ಕಾಂಗ್ರೆಸ್ ಸಂವಿಧಾನವನ್ನೇ ಅಮಾನತಿನಲ್ಲಿಟ್ಟಿತ್ತು. ಜನರು ಈ ಘಟನೆಗಳನ್ನು ಮರೆಯಲು ಕಾಂಗ್ರೆಸ್ಸಿಗರು ಈಗ ಸಂವಿಧಾನದ ಉಲ್ಲಂಘನೆಯ ಕುರಿತು ಕಟ್ಟುಕಥೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>