<p><strong>ನವದೆಹಲಿ:</strong> ಕಾಂಗ್ರೆಸ್ನ ಹಿರಿಯ ಮುಖಂಡ ಅಧಿರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ವಿದೇಶಿಗ ಎಂದು ಟೀಕಿಸಿದ್ದಕ್ಕೆ ಶುಕ್ರವಾರ ಕ್ಷಮೆ ಕೋರಿದ್ದಾರೆ. </p>.<p>‘ಅಜಾಗರೂಕತೆಯಿಂದಾಗಿ ಒಬ್ರಯಾನ್ ಅವರನ್ನು ವಿದೇಶಿಗ ಎಂದು ಕರೆದಿದ್ದಕ್ಕಾಗಿ ನಾನು ವಿಷಾದ ವ್ಯಕ್ತಪಡಿಸಿದ್ದೇನೆ’ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಕ್ಷಮೆಯನ್ನು ಸ್ವೀಕರಿಸಿರುವುದಾಗಿ ಡೆರೆಕ್ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. </p>.<p>ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ನಡುವೆ ಸೀಟು ಹಂಚಿಕೆ ಮಾತುಕತೆ ಸಾಧ್ಯವಾಗದಿರಲು ಮೂರು ಕಾರಣಗಳಿವೆ. ಅವುಗಳೆಂದರೆ, ಅಧಿರ್ ರಂಜನ್ ಚೌಧರಿ, ಅಧಿರ್ ರಂಜನ್ ಚೌಧರಿ ಮತ್ತು ಅಧಿರ್ ರಂಜನ್ ಚೌಧರಿ ಎಂದು ಡೆರೆಕ್ ಒಬ್ರಯಾನ್ ಹೇಳಿದ್ದರು. </p>.<p>ಈ ಕುರಿತು ಗುರುವಾರ ರಾತ್ರಿ ಸಿಲಿಗುರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಚೌಧರಿ ಅವರು, ‘ವಿದೇಶಿಗರಾದ ಡೆರೆಕ್ ಒಬ್ರಯಾನ್ ಅವರಿಗೆ ಎಲ್ಲವೂ ಗೊತ್ತಿದೆ, ಅವರನ್ನೇ ಕೇಳಿ’ ಎಂದು ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ನ ಹಿರಿಯ ಮುಖಂಡ ಅಧಿರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ವಿದೇಶಿಗ ಎಂದು ಟೀಕಿಸಿದ್ದಕ್ಕೆ ಶುಕ್ರವಾರ ಕ್ಷಮೆ ಕೋರಿದ್ದಾರೆ. </p>.<p>‘ಅಜಾಗರೂಕತೆಯಿಂದಾಗಿ ಒಬ್ರಯಾನ್ ಅವರನ್ನು ವಿದೇಶಿಗ ಎಂದು ಕರೆದಿದ್ದಕ್ಕಾಗಿ ನಾನು ವಿಷಾದ ವ್ಯಕ್ತಪಡಿಸಿದ್ದೇನೆ’ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಕ್ಷಮೆಯನ್ನು ಸ್ವೀಕರಿಸಿರುವುದಾಗಿ ಡೆರೆಕ್ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. </p>.<p>ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ನಡುವೆ ಸೀಟು ಹಂಚಿಕೆ ಮಾತುಕತೆ ಸಾಧ್ಯವಾಗದಿರಲು ಮೂರು ಕಾರಣಗಳಿವೆ. ಅವುಗಳೆಂದರೆ, ಅಧಿರ್ ರಂಜನ್ ಚೌಧರಿ, ಅಧಿರ್ ರಂಜನ್ ಚೌಧರಿ ಮತ್ತು ಅಧಿರ್ ರಂಜನ್ ಚೌಧರಿ ಎಂದು ಡೆರೆಕ್ ಒಬ್ರಯಾನ್ ಹೇಳಿದ್ದರು. </p>.<p>ಈ ಕುರಿತು ಗುರುವಾರ ರಾತ್ರಿ ಸಿಲಿಗುರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಚೌಧರಿ ಅವರು, ‘ವಿದೇಶಿಗರಾದ ಡೆರೆಕ್ ಒಬ್ರಯಾನ್ ಅವರಿಗೆ ಎಲ್ಲವೂ ಗೊತ್ತಿದೆ, ಅವರನ್ನೇ ಕೇಳಿ’ ಎಂದು ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>