ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದ ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ: ಕಿರೋಡೀ ಲಾಲ್‌ ಆರೋಪ

Published 1 ಡಿಸೆಂಬರ್ 2023, 16:19 IST
Last Updated 1 ಡಿಸೆಂಬರ್ 2023, 16:19 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದಲ್ಲಿ ಅತಂತ್ರ ಫಲಿತಾಂಶ ಬಂದರೆ ಕಾಂಗ್ರೆಸ್‌ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಹಾಗೂ ಸವಾಯ್‌ ಮಾಧೋಪುರ್ ಕ್ಷೇತ್ರದ ಅಭ್ಯರ್ಥಿ ಕಿರೋಡೀ ಲಾಲ್‌ ಮೀನಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು ‘ಶಾಸಕರ ಖರೀದಿ’ಯನ್ನು ಹಿಂದಿನಿಂದಲೂ ಮಾಡಿಕೊಂಡು ಬರುತ್ತಿದ್ದು, ಈ ಬಾರಿಯೂ ಅಂತಹ ಪ್ರಯತ್ನಕ್ಕೆ ಮುಂದಾಗಲಿದೆ ಎಂದು ಟೀಕಿಸಿದರು.

‘ಕಾಂಗ್ರೆಸ್‌ ಪಕ್ಷ ತನ್ನ ಶಾಸಕರನ್ನು ಒಟ್ಟಾಗಿ ಇಡಲು ಬೆಂಗಳೂರಿನಲ್ಲಿ ಎರಡು ರೆಸಾರ್ಟ್‌ಗಳನ್ನು ಈಗಾಗಲೇ ಬುಕ್ ಮಾಡಿದೆ ಎಂಬ ಖಚಿತ ಮಾಹಿತಿ ನನಗೆ ಲಭಿಸಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT