<p><strong>ಲಖನೌ:</strong> ಅಯೋಧ್ಯೆಯಲ್ಲಿ ಜ. 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭ ಉತ್ತರಪ್ರದೇಶಕ್ಕೆ ‘ಗ್ಲೋಬಲ್ ಬ್ರ್ಯಾಂಡಿಂಗ್’ ಆಗಿ ಗುರುತಿಸಿಕೊಳ್ಳಲು ಒಳ್ಳೆಯ ಅವಕಾಶವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ.</p>.<p>ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು, ಅಯೋಧ್ಯೆಯಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಿದರು.</p>.<p>‘ಇಂದು, ಇಡೀ ಜಗತ್ತು ಅಯೋಧ್ಯೆಯತ್ತ ಕುತೂಹಲದಿಂದ ನೋಡುತ್ತಿದೆ. ಎಲ್ಲರೂ ಅಯೋಧ್ಯೆಗೆ ಬರಲು ಬಯಸುತ್ತಾರೆ. ಇದು ಉತ್ತರ ಪ್ರದೇಶಕ್ಕೆ ಜಾಗತಿಕ ಬ್ರ್ಯಾಂಡಿಂಗ್ ಆಗಿ ಗುರುತಿಸಿಕೊಳ್ಳಲು ಒಂದು ಅವಕಾಶ. ರಾಮ ಜನ್ಮಭೂಮಿಯಲ್ಲಿನ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಎಲ್ಲೆಡೆಯಿಂದ ಬರುವ ಭಕ್ತಾದಿಗಳು, ಪ್ರವಾಸಿಗರಿಗೆ ದೈವಿಕವಾಗಿ ಅಭೂತಪೂರ್ವ ಅನುಭವ ನೀಡುವಂತೆ ಮತ್ತು ಅವರ ಮನಸಿನಲ್ಲಿ ಅವಿಸ್ಮರಣೀಯವಾಗಿ ಉಳಿಯುವಂತೆ ಸರ್ಕಾರದ ಕಡೆಯಿಂದ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು‘ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ರಾಮ ಮಂದಿರವು ‘ರಾಷ್ಟ್ರ ಮಂದಿರ’ ರೂಪದಲ್ಲಿ ಭಾರತದ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಏಕತೆಯ ಸಂಕೇತವಾಗಲಿದೆ ಎಂದು ಆದಿತ್ಯನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಅಯೋಧ್ಯೆಯಲ್ಲಿ ಜ. 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭ ಉತ್ತರಪ್ರದೇಶಕ್ಕೆ ‘ಗ್ಲೋಬಲ್ ಬ್ರ್ಯಾಂಡಿಂಗ್’ ಆಗಿ ಗುರುತಿಸಿಕೊಳ್ಳಲು ಒಳ್ಳೆಯ ಅವಕಾಶವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ.</p>.<p>ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು, ಅಯೋಧ್ಯೆಯಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಿದರು.</p>.<p>‘ಇಂದು, ಇಡೀ ಜಗತ್ತು ಅಯೋಧ್ಯೆಯತ್ತ ಕುತೂಹಲದಿಂದ ನೋಡುತ್ತಿದೆ. ಎಲ್ಲರೂ ಅಯೋಧ್ಯೆಗೆ ಬರಲು ಬಯಸುತ್ತಾರೆ. ಇದು ಉತ್ತರ ಪ್ರದೇಶಕ್ಕೆ ಜಾಗತಿಕ ಬ್ರ್ಯಾಂಡಿಂಗ್ ಆಗಿ ಗುರುತಿಸಿಕೊಳ್ಳಲು ಒಂದು ಅವಕಾಶ. ರಾಮ ಜನ್ಮಭೂಮಿಯಲ್ಲಿನ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಎಲ್ಲೆಡೆಯಿಂದ ಬರುವ ಭಕ್ತಾದಿಗಳು, ಪ್ರವಾಸಿಗರಿಗೆ ದೈವಿಕವಾಗಿ ಅಭೂತಪೂರ್ವ ಅನುಭವ ನೀಡುವಂತೆ ಮತ್ತು ಅವರ ಮನಸಿನಲ್ಲಿ ಅವಿಸ್ಮರಣೀಯವಾಗಿ ಉಳಿಯುವಂತೆ ಸರ್ಕಾರದ ಕಡೆಯಿಂದ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು‘ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ರಾಮ ಮಂದಿರವು ‘ರಾಷ್ಟ್ರ ಮಂದಿರ’ ರೂಪದಲ್ಲಿ ಭಾರತದ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಏಕತೆಯ ಸಂಕೇತವಾಗಲಿದೆ ಎಂದು ಆದಿತ್ಯನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>