‘ಇಂದು, ಇಡೀ ಜಗತ್ತು ಅಯೋಧ್ಯೆಯತ್ತ ಕುತೂಹಲದಿಂದ ನೋಡುತ್ತಿದೆ. ಎಲ್ಲರೂ ಅಯೋಧ್ಯೆಗೆ ಬರಲು ಬಯಸುತ್ತಾರೆ. ಇದು ಉತ್ತರ ಪ್ರದೇಶಕ್ಕೆ ಜಾಗತಿಕ ಬ್ರ್ಯಾಂಡಿಂಗ್ ಆಗಿ ಗುರುತಿಸಿಕೊಳ್ಳಲು ಒಂದು ಅವಕಾಶ. ರಾಮ ಜನ್ಮಭೂಮಿಯಲ್ಲಿನ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಎಲ್ಲೆಡೆಯಿಂದ ಬರುವ ಭಕ್ತಾದಿಗಳು, ಪ್ರವಾಸಿಗರಿಗೆ ದೈವಿಕವಾಗಿ ಅಭೂತಪೂರ್ವ ಅನುಭವ ನೀಡುವಂತೆ ಮತ್ತು ಅವರ ಮನಸಿನಲ್ಲಿ ಅವಿಸ್ಮರಣೀಯವಾಗಿ ಉಳಿಯುವಂತೆ ಸರ್ಕಾರದ ಕಡೆಯಿಂದ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು‘ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.