‘ಸಮಿತಿಗೆ ತಜ್ಞರ ಹೆಸರನ್ನು ಶಿಫಾರಸು ಮಾಡುವ ಪ್ರಕ್ರಿಯೆಯು ಕೊನೇ ಹಂತದಲ್ಲಿದೆ’ ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ‘ಅಟಾರ್ನಿ ಜನರಲ್ ಅವರು ಹೇಳಿದ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದ್ದೇವೆ. ಬೇಸಿಗೆ ರಜೆಯ ಬಳಿಕ ವಿಚಾರಣೆಗೆ ದಿನಾಂಕ ನಿಗದಿ ಮಾಡುತ್ತೇವೆ’ ಎಂದಿತು.