<p>ನವದೆಹಲಿ: ‘ಸಂವಿಧಾನದ ಪೀಠಿಕೆಯಿಂದ ‘ಜಾತ್ಯತೀತ’ ಹಾಗೂ ‘ಸಮಾಜವಾದಿ’ ಪದಗಳನ್ನು ತೆಗೆಯುವ ಅಥವಾ ಮರುಪರಿಶೀಲಿಸುವ ಯಾವುದೇ ಯೋಜನೆ ಇಲ್ಲವೇ ಉದ್ದೇಶ ತಾನು ಹೊಂದಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.</p><p>ಸಂಸದರೊಬ್ಬರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕಾನೂನು ಸಚಿವ ಅರ್ಜುನ ರಾಮ್ ಮೇಘವಾಲ್,‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಈ ಪದಗಳನ್ನು ಸಂವಿಧಾನದಲ್ಲಿ ಸೇರ್ಪಡೆ ಮಾಡಲಾಗಿದೆ. ಆದರೆ, ಈ ಪದಗಳನ್ನು ಮರುಪರಿಶೀಲನೆ ಮಾಡುವ ಅಥವಾ ಪೀಠಿಕೆಯಿಂದ ತೆಗೆದು ಹಾಕುವ ವಿಚಾರ ಇಲ್ಲ’ ಎಂದು ಹೇಳಿದ್ದಾರೆ.</p><p>‘ಈ ಎರಡು ಪದಗಳನ್ನು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವುದಕ್ಕೆ ಸಂಬಂಧಿಸಿ ಸರ್ಕಾರವು ‘ಔಪಚಾರಿಕ’ವಾಗಿ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಪ್ರಕ್ರಿಯೆ ಆರಂಭಿಸಿಲ್ಲ’ ಎಂದೂ ಹೇಳಿದ್ದಾರೆ.</p><p>‘ಈ ವಿಚಾರ ಕುರಿತು ಸಾರ್ವಜನಿಕ ವಲಯ ಮತ್ತು ರಾಜಕೀಯ ಪಕ್ಷಗಳ ಮೊಗಸಾಲೆಗಳಲ್ಲಿ ಚರ್ಚೆಗಳು ಅಥವಾ ಸಂವಾದಗಳು ನಡೆದಿರಬಹುದು. ಆದರೆ, ಈ ಪದಗಳನ್ನು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವ ಕುರಿತು ಪ್ರಸ್ತುತ ಯಾವುದೇ ಯೋಜನೆ ಅಥವಾ ಉದ್ದೇಶ ಇಲ್ಲ ಎಂಬುದೇ ಸರ್ಕಾರದ ನಿಲುವಾಗಿದೆ’ ಎಂದು ಮೇಘವಾಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಸಂವಿಧಾನದ ಪೀಠಿಕೆಯಿಂದ ‘ಜಾತ್ಯತೀತ’ ಹಾಗೂ ‘ಸಮಾಜವಾದಿ’ ಪದಗಳನ್ನು ತೆಗೆಯುವ ಅಥವಾ ಮರುಪರಿಶೀಲಿಸುವ ಯಾವುದೇ ಯೋಜನೆ ಇಲ್ಲವೇ ಉದ್ದೇಶ ತಾನು ಹೊಂದಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.</p><p>ಸಂಸದರೊಬ್ಬರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕಾನೂನು ಸಚಿವ ಅರ್ಜುನ ರಾಮ್ ಮೇಘವಾಲ್,‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಈ ಪದಗಳನ್ನು ಸಂವಿಧಾನದಲ್ಲಿ ಸೇರ್ಪಡೆ ಮಾಡಲಾಗಿದೆ. ಆದರೆ, ಈ ಪದಗಳನ್ನು ಮರುಪರಿಶೀಲನೆ ಮಾಡುವ ಅಥವಾ ಪೀಠಿಕೆಯಿಂದ ತೆಗೆದು ಹಾಕುವ ವಿಚಾರ ಇಲ್ಲ’ ಎಂದು ಹೇಳಿದ್ದಾರೆ.</p><p>‘ಈ ಎರಡು ಪದಗಳನ್ನು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವುದಕ್ಕೆ ಸಂಬಂಧಿಸಿ ಸರ್ಕಾರವು ‘ಔಪಚಾರಿಕ’ವಾಗಿ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಪ್ರಕ್ರಿಯೆ ಆರಂಭಿಸಿಲ್ಲ’ ಎಂದೂ ಹೇಳಿದ್ದಾರೆ.</p><p>‘ಈ ವಿಚಾರ ಕುರಿತು ಸಾರ್ವಜನಿಕ ವಲಯ ಮತ್ತು ರಾಜಕೀಯ ಪಕ್ಷಗಳ ಮೊಗಸಾಲೆಗಳಲ್ಲಿ ಚರ್ಚೆಗಳು ಅಥವಾ ಸಂವಾದಗಳು ನಡೆದಿರಬಹುದು. ಆದರೆ, ಈ ಪದಗಳನ್ನು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವ ಕುರಿತು ಪ್ರಸ್ತುತ ಯಾವುದೇ ಯೋಜನೆ ಅಥವಾ ಉದ್ದೇಶ ಇಲ್ಲ ಎಂಬುದೇ ಸರ್ಕಾರದ ನಿಲುವಾಗಿದೆ’ ಎಂದು ಮೇಘವಾಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>