<p><strong>ನವದೆಹಲಿ:</strong> ಸಂವಿಧಾನ ದಿನವನ್ನು ಯಾವುದೇ ರಾಜಕೀಯ ಪಕ್ಷ ಆಯೋಜಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಸಂಸತ್ನ ‘ಸೆಂಟ್ರಲ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನ ಕಾರ್ಯಕ್ರಮವನ್ನು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್ಜೆಡಿ, ಶಿವಸೇನಾ ಸೇರಿದಂತೆ 14 ಪಕ್ಷಗಳು ಬಹಿಷ್ಕರಿಸಿವೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-on-constitution-day-says-dynastic-parties-a-matter-of-concern-across-india-887223.html" itemprop="url">ದೇಶದ ತುಂಬಾ ಕುಟುಂಬ ರಾಜಕಾರಣದ ಸಮಸ್ಯೆ: ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮೋದಿ</a></p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ಇಂದು ಈ ಸದನ ಮತ್ತು ಸಂವಿಧಾನಕ್ಕೆ ಗೌರವ ಸಲ್ಲಿಸುವ ದಿನ. ಸ್ವಾತಂತ್ರ್ಯ ಹೋರಾಟಗಾರರ ಬಹು ವರ್ಷಗಳ ಶ್ರಮ ಮತ್ತು ತ್ಯಾಗದ ಫಲವಾಗಿದೆ ಸಂವಿಧಾನ. ಇದು ಮಹಾತ್ಮ ಗಾಂಧಿ ಅವರನ್ನು ಸ್ಮರಿಸಬೇಕಾದ ದಿನವೂ ಆಗಿದೆ’ ಎಂದು ಹೇಳಿದರು.</p>.<p>‘ನಮ್ಮ ಸಂವಿಧಾನವು ದೇಶದ ಶತಮಾನಗಳ ಸಂಸ್ಕೃತಿಯನ್ನು ಒಳಗೊಂಡಿದೆ. ಸಂವಿಧಾನಕ್ಕೆ ಧಕ್ಕೆ ತರುವಂಥ ವಿಚಾರಗಳನ್ನು ನಾವು ನಿರ್ಲಕ್ಷಿಸುವಂತಿಲ್ಲ. ಇದಕ್ಕಾಗಿಯೇ ನಾವು ಈ ದಿನವನ್ನು ಆಚರಿಸಬೇಕು. ನಮ್ಮ ನಿರ್ಧಾರಗಳು ಸರಿಯಾಗಿ ಇವೆಯೇ ಎಂಬುದನ್ನು ಅರಿಯುವುದಕ್ಕಾಗಿ ನಾವು ಈ ದಿನವನ್ನು ಆಚರಿಸಬೇಕು’ ಎಂದು ಮೋದಿ ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/constitution-day-of-india-amit-shah-says-narendra-modi-govt-committed-to-welfare-of-all-sections-of-887198.html" itemprop="url">ಸಂವಿಧಾನ ದಿನ: ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ ಎಂದ ಅಮಿತ್ ಶಾ</a></p>.<p>ಬಿ.ಆರ್.ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನದ ದಿನವನ್ನು ಆಚರಿಸಲು ಸಿದ್ಧರಿಲ್ಲದಿರುವುದು ಕಳವಳಕಾರಿ ಸಂಗತಿ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವ ಪ್ರಕ್ರಿಯೆಯ ಮಹತ್ವದ ಭಾಗಗಳು. ಪ್ರಜಾಸತ್ತಾತ್ಮಕ ಸ್ವರೂಪಕ್ಕೆ ಧಕ್ಕೆ ಬಂದಾಗ ಸಂವಿಧಾನಕ್ಕೂ ಧಕ್ಕೆಯಾಗುತ್ತದೆ ಎಂದೂ ಅವರು ಹೇಳಿದರು.</p>.<p><strong>26/11ರ ಹುತಾತ್ಮರಿಗೆ ಗೌರವ ನಮನ:</strong> 26/11ರ ಮುಂಬೈ ದಾಳಿಯ ಹುತಾತ್ಮರಿಗೆ ಮೋದಿ ಗೌರವ ನಮನ ಸಲ್ಲಿಸಿದರು.</p>.<p>ಇದು ನಮ್ಮ ದೇಶಕ್ಕೆ ಶತ್ರುಗಳು ಪ್ರವೇಶಿಸಿ ಭಯೋತ್ಪಾದಕ ಕೃತ್ಯ ಎಸಗಿದ ದಿನ. ಅಂದು ನಮ್ಮ ವೀರ ಯೋಧರು ದೇಶದ ಜನರಿಗಾಗಿ ಪ್ರಾಣತ್ಯಾಗ ಮಾಡಿದರು. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/26-11-mumbai-terror-attack-president-of-india-ram-nath-kovind-and-rahul-gandhi-paid-tributes-to-887206.html" itemprop="url">26/11ರ ಮುಂಬೈ ದಾಳಿ: ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್ </a></p>.<p>ಸ್ವಚ್ಛ ಭಾರತ, ಸ್ವಾವಲಂಬನೆ, ಮಹಿಳೆಯರನ್ನು ಗೌರವಿಸುವುದು ಮತ್ತು ಅವರ ಬೆಳವಣಿಗೆಗೆ ಪ್ರೋತ್ಸಾಹಿಸುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಪ್ರಸ್ತಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂವಿಧಾನ ದಿನವನ್ನು ಯಾವುದೇ ರಾಜಕೀಯ ಪಕ್ಷ ಆಯೋಜಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಸಂಸತ್ನ ‘ಸೆಂಟ್ರಲ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನ ಕಾರ್ಯಕ್ರಮವನ್ನು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್ಜೆಡಿ, ಶಿವಸೇನಾ ಸೇರಿದಂತೆ 14 ಪಕ್ಷಗಳು ಬಹಿಷ್ಕರಿಸಿವೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-on-constitution-day-says-dynastic-parties-a-matter-of-concern-across-india-887223.html" itemprop="url">ದೇಶದ ತುಂಬಾ ಕುಟುಂಬ ರಾಜಕಾರಣದ ಸಮಸ್ಯೆ: ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮೋದಿ</a></p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ಇಂದು ಈ ಸದನ ಮತ್ತು ಸಂವಿಧಾನಕ್ಕೆ ಗೌರವ ಸಲ್ಲಿಸುವ ದಿನ. ಸ್ವಾತಂತ್ರ್ಯ ಹೋರಾಟಗಾರರ ಬಹು ವರ್ಷಗಳ ಶ್ರಮ ಮತ್ತು ತ್ಯಾಗದ ಫಲವಾಗಿದೆ ಸಂವಿಧಾನ. ಇದು ಮಹಾತ್ಮ ಗಾಂಧಿ ಅವರನ್ನು ಸ್ಮರಿಸಬೇಕಾದ ದಿನವೂ ಆಗಿದೆ’ ಎಂದು ಹೇಳಿದರು.</p>.<p>‘ನಮ್ಮ ಸಂವಿಧಾನವು ದೇಶದ ಶತಮಾನಗಳ ಸಂಸ್ಕೃತಿಯನ್ನು ಒಳಗೊಂಡಿದೆ. ಸಂವಿಧಾನಕ್ಕೆ ಧಕ್ಕೆ ತರುವಂಥ ವಿಚಾರಗಳನ್ನು ನಾವು ನಿರ್ಲಕ್ಷಿಸುವಂತಿಲ್ಲ. ಇದಕ್ಕಾಗಿಯೇ ನಾವು ಈ ದಿನವನ್ನು ಆಚರಿಸಬೇಕು. ನಮ್ಮ ನಿರ್ಧಾರಗಳು ಸರಿಯಾಗಿ ಇವೆಯೇ ಎಂಬುದನ್ನು ಅರಿಯುವುದಕ್ಕಾಗಿ ನಾವು ಈ ದಿನವನ್ನು ಆಚರಿಸಬೇಕು’ ಎಂದು ಮೋದಿ ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/constitution-day-of-india-amit-shah-says-narendra-modi-govt-committed-to-welfare-of-all-sections-of-887198.html" itemprop="url">ಸಂವಿಧಾನ ದಿನ: ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ ಎಂದ ಅಮಿತ್ ಶಾ</a></p>.<p>ಬಿ.ಆರ್.ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನದ ದಿನವನ್ನು ಆಚರಿಸಲು ಸಿದ್ಧರಿಲ್ಲದಿರುವುದು ಕಳವಳಕಾರಿ ಸಂಗತಿ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವ ಪ್ರಕ್ರಿಯೆಯ ಮಹತ್ವದ ಭಾಗಗಳು. ಪ್ರಜಾಸತ್ತಾತ್ಮಕ ಸ್ವರೂಪಕ್ಕೆ ಧಕ್ಕೆ ಬಂದಾಗ ಸಂವಿಧಾನಕ್ಕೂ ಧಕ್ಕೆಯಾಗುತ್ತದೆ ಎಂದೂ ಅವರು ಹೇಳಿದರು.</p>.<p><strong>26/11ರ ಹುತಾತ್ಮರಿಗೆ ಗೌರವ ನಮನ:</strong> 26/11ರ ಮುಂಬೈ ದಾಳಿಯ ಹುತಾತ್ಮರಿಗೆ ಮೋದಿ ಗೌರವ ನಮನ ಸಲ್ಲಿಸಿದರು.</p>.<p>ಇದು ನಮ್ಮ ದೇಶಕ್ಕೆ ಶತ್ರುಗಳು ಪ್ರವೇಶಿಸಿ ಭಯೋತ್ಪಾದಕ ಕೃತ್ಯ ಎಸಗಿದ ದಿನ. ಅಂದು ನಮ್ಮ ವೀರ ಯೋಧರು ದೇಶದ ಜನರಿಗಾಗಿ ಪ್ರಾಣತ್ಯಾಗ ಮಾಡಿದರು. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/26-11-mumbai-terror-attack-president-of-india-ram-nath-kovind-and-rahul-gandhi-paid-tributes-to-887206.html" itemprop="url">26/11ರ ಮುಂಬೈ ದಾಳಿ: ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್ </a></p>.<p>ಸ್ವಚ್ಛ ಭಾರತ, ಸ್ವಾವಲಂಬನೆ, ಮಹಿಳೆಯರನ್ನು ಗೌರವಿಸುವುದು ಮತ್ತು ಅವರ ಬೆಳವಣಿಗೆಗೆ ಪ್ರೋತ್ಸಾಹಿಸುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಪ್ರಸ್ತಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>