ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಪ್ರೀಂ ಕೋರ್ಟ್ ಆವರಣದಲ್ಲಿ ಧ್ವಜಾರೋಹಣ ನಡೆಸಿದ ಬಳಿಕ ಮಾತನಾಡಿದ ಅವರು, ನಿರ್ದೇಶನಾತ್ಮಕ ತತ್ವಗಳ ಕುರಿತ ಸಂವಿಧಾನದ ವಿಧಿ 38ನ್ನು ಉಲ್ಲೇಖಿಸಿದರು. ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಂಶಗಳನ್ನು ಭದ್ರಪಡಿಸುವ ಮೂಲಕ ಸಾಮಾಜಿಕ ವ್ಯವಸ್ಥೆ ರೂಪಿಸುವುದು ಸರ್ಕಾರದ ಜವಾಬ್ದಾರಿ ಎಂದರು.