<p><strong>ನವದೆಹಲಿ</strong>: ಪ್ರಯಾಣಿಕರೊಬ್ಬರ ಬ್ಯಾಗ್ ಕಳ್ಳತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ರೈಲ್ವೆಗೆ ಗ್ರಾಹಕ ಆಯೋಗವು ₹1.08 ಲಕ್ಷ ದಂಡ ವಿಧಿಸಿದೆ.</p>.<p>2016ರ ಜನವರಿ ತಿಂಗಳಲ್ಲಿ ಮಾಲ್ವ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರ ಬ್ಯಾಗ್ ಝಾನ್ಸಿ– ಗ್ವಾಲಿಯರ್ ಮಧ್ಯೆ ಕಳ್ಳತನವಾಗಿತ್ತು. ಅದರಲ್ಲಿ ₹80 ಸಾವಿರ ಮೌಲ್ಯದ ವಸ್ತುಗಳಿದ್ದವು. ಈ ಬಗ್ಗೆ ಅವರು ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ಆಯೋಗವು, ‘ತನ್ನ ವಸ್ತುಗಳ ಕಳ್ಳತನವಾಗಿರುವ ಬಗ್ಗೆ ದೂರುದಾರರು ರೈಲ್ವೆಗೆ ದೂರು ನೀಡಲು ಪ್ರಯತ್ನಿಸಿದ್ದರು. ಆದರೆ ಅವರು ಸಾಕಷ್ಟು ಮಾನಸಿಕ ವೇದನೆ ಅನುಭವಿಸಿದ್ದಾರೆ. ರೈಲ್ವೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ’ ಎಂದು ತಿಳಿಸಿದೆ. </p>.<p>‘ಪ್ರಯಾಣಿಕರ ವಸ್ತುಗಳ ಸುರಕ್ಷತೆ ಬಗ್ಗೆ ಗಮನಹರಿಸದ ರೈಲ್ವೇ ಇಲಾಖೆಯು, ದೂರುದಾರರು ಕಳೆದುಕೊಂಡಿರುವ ವಸ್ತುಗಳ ಮೌಲ್ಯ ₹80 ಸಾವಿರದ ಜೊತೆಗೆ ಅವರು ಅನುಭವಿಸಿರುವ ಮಾನಸಿಕ ವೇದನೆಗೆ ಪರಿಹಾರವಾಗಿ ₹20 ಸಾವಿರ ಮತ್ತು ₹8 ಸಾವಿರ ದಾವೆ ವೆಚ್ಚವನ್ನು ಪಾವತಿಸಬೇಕು’ ಎಂದು ಆಯೋಗ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಯಾಣಿಕರೊಬ್ಬರ ಬ್ಯಾಗ್ ಕಳ್ಳತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ರೈಲ್ವೆಗೆ ಗ್ರಾಹಕ ಆಯೋಗವು ₹1.08 ಲಕ್ಷ ದಂಡ ವಿಧಿಸಿದೆ.</p>.<p>2016ರ ಜನವರಿ ತಿಂಗಳಲ್ಲಿ ಮಾಲ್ವ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರ ಬ್ಯಾಗ್ ಝಾನ್ಸಿ– ಗ್ವಾಲಿಯರ್ ಮಧ್ಯೆ ಕಳ್ಳತನವಾಗಿತ್ತು. ಅದರಲ್ಲಿ ₹80 ಸಾವಿರ ಮೌಲ್ಯದ ವಸ್ತುಗಳಿದ್ದವು. ಈ ಬಗ್ಗೆ ಅವರು ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ಆಯೋಗವು, ‘ತನ್ನ ವಸ್ತುಗಳ ಕಳ್ಳತನವಾಗಿರುವ ಬಗ್ಗೆ ದೂರುದಾರರು ರೈಲ್ವೆಗೆ ದೂರು ನೀಡಲು ಪ್ರಯತ್ನಿಸಿದ್ದರು. ಆದರೆ ಅವರು ಸಾಕಷ್ಟು ಮಾನಸಿಕ ವೇದನೆ ಅನುಭವಿಸಿದ್ದಾರೆ. ರೈಲ್ವೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ’ ಎಂದು ತಿಳಿಸಿದೆ. </p>.<p>‘ಪ್ರಯಾಣಿಕರ ವಸ್ತುಗಳ ಸುರಕ್ಷತೆ ಬಗ್ಗೆ ಗಮನಹರಿಸದ ರೈಲ್ವೇ ಇಲಾಖೆಯು, ದೂರುದಾರರು ಕಳೆದುಕೊಂಡಿರುವ ವಸ್ತುಗಳ ಮೌಲ್ಯ ₹80 ಸಾವಿರದ ಜೊತೆಗೆ ಅವರು ಅನುಭವಿಸಿರುವ ಮಾನಸಿಕ ವೇದನೆಗೆ ಪರಿಹಾರವಾಗಿ ₹20 ಸಾವಿರ ಮತ್ತು ₹8 ಸಾವಿರ ದಾವೆ ವೆಚ್ಚವನ್ನು ಪಾವತಿಸಬೇಕು’ ಎಂದು ಆಯೋಗ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>