<p><strong>ಕೋಲ್ಕತ್ತ</strong>: ತನ್ನ ಆದೇಶಗಳನ್ನು ಪಾಲಿಸದ ಯಾವುದೇ ವ್ಯಕ್ತಿಯ ಬಂಧನಕ್ಕೆ ವಾರಂಟ್ ಹೊರಡಿಸುವ ಅಧಿಕಾರವನ್ನು ಗ್ರಾಹಕ ವ್ಯಾಜ್ಯಗಳನ್ನು ಪರಿಹರಿಸುವ ವೇದಿಕೆಯು ಹೊಂದಿಲ್ಲ ಎಂದು ಕಲ್ಕತ್ತ ಹೈಕೋರ್ಟ್ ಹೇಳಿದೆ.</p>.<p>ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆಯು ತನ್ನನ್ನು ಬಂಧಿಸುವಂತೆ ಆದೇಶಿಸಿ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಸುವ್ರಾ ಘೋಷ್ ಅವರು ಅರ್ಜಿಯ ವಿಚಾರಣೆ ನಡೆಸಿ, ಗ್ರಾಹಕ ವೇದಿಕೆ ನೀಡಿದ್ದ ನೋಟಿಸ್ ಅನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ, ಈ ರೀತಿಯ ನೋಟಿಸ್ ಜಾರಿಗೊಳಿಸುವುದು ಗ್ರಾಹಕ ಹಿತರಕ್ಷಣೆ ಕಾಯ್ದೆಯ ನಿಬಂಧನೆಗಳ ವ್ಯಾಪ್ತಿಗೆ ಬರುವುದಿಲ್ಲ ಎಂದೂ ಹೇಳಿದ್ದಾರೆ.</p>.<p>2013ರಲ್ಲಿ ವ್ಯಕ್ತಿಯೊಬ್ಬರು ಫೈನಾನ್ಸ್ ಕಂಪನಿಯೊಂದರಿಂದ ಸಾಲ ಪಡೆದು ಟ್ರಾಕ್ಟರ್ ಖರೀದಿಸಿದ್ದರು. ಬಳಿಕ ₹25,716 ಸಾಲ ಮರುಪಾವತಿಸುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಸಾಲ ಕೊಟ್ಟಿದ್ದ ಸಂಸ್ಥೆಯು ಟ್ರಾಕ್ಟರ್, ಆರ್ಸಿಯನ್ನು ವಶಪಡಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಾಲ ಪಡೆದ ವ್ಯಕ್ತಿಯು ಗ್ರಾಹಕ ವೇದಿಕೆ ಮೊರೆ ಹೋಗಿದ್ದರು. ಆದರೆ, ಗ್ರಾಹಕ ವೇದಿಕೆಯು ಸಾಲ ಪಾವತಿಸಿದ ಬಳಿಕವೇ ಆರ್ಸಿಯನ್ನು ಅವರಿಗೆ ಮರಳಿಸುವಂತೆ ಸಂಸ್ಥೆಗೆ ಆದೇಶ ನೀಡಿತ್ತು.</p>.<p class="title">ವೇದಿಕೆ ಆದೇಶಿಸಿದ ಬಳಿಕವೂ ವ್ಯಕ್ತಿ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಾಲ ಕೊಟ್ಟ ಸಂಸ್ಥೆ ಗ್ರಾಹಕ ವೇದಿಕೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ವೇದಿಕೆಯು ವ್ಯಕ್ತಿಯ ಬಂಧನಕ್ಕೆ ನೋಟಿಸ್ ಜಾರಿಗೊಳಿಸಿತ್ತು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ತನ್ನ ಆದೇಶಗಳನ್ನು ಪಾಲಿಸದ ಯಾವುದೇ ವ್ಯಕ್ತಿಯ ಬಂಧನಕ್ಕೆ ವಾರಂಟ್ ಹೊರಡಿಸುವ ಅಧಿಕಾರವನ್ನು ಗ್ರಾಹಕ ವ್ಯಾಜ್ಯಗಳನ್ನು ಪರಿಹರಿಸುವ ವೇದಿಕೆಯು ಹೊಂದಿಲ್ಲ ಎಂದು ಕಲ್ಕತ್ತ ಹೈಕೋರ್ಟ್ ಹೇಳಿದೆ.</p>.<p>ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆಯು ತನ್ನನ್ನು ಬಂಧಿಸುವಂತೆ ಆದೇಶಿಸಿ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಸುವ್ರಾ ಘೋಷ್ ಅವರು ಅರ್ಜಿಯ ವಿಚಾರಣೆ ನಡೆಸಿ, ಗ್ರಾಹಕ ವೇದಿಕೆ ನೀಡಿದ್ದ ನೋಟಿಸ್ ಅನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ, ಈ ರೀತಿಯ ನೋಟಿಸ್ ಜಾರಿಗೊಳಿಸುವುದು ಗ್ರಾಹಕ ಹಿತರಕ್ಷಣೆ ಕಾಯ್ದೆಯ ನಿಬಂಧನೆಗಳ ವ್ಯಾಪ್ತಿಗೆ ಬರುವುದಿಲ್ಲ ಎಂದೂ ಹೇಳಿದ್ದಾರೆ.</p>.<p>2013ರಲ್ಲಿ ವ್ಯಕ್ತಿಯೊಬ್ಬರು ಫೈನಾನ್ಸ್ ಕಂಪನಿಯೊಂದರಿಂದ ಸಾಲ ಪಡೆದು ಟ್ರಾಕ್ಟರ್ ಖರೀದಿಸಿದ್ದರು. ಬಳಿಕ ₹25,716 ಸಾಲ ಮರುಪಾವತಿಸುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಸಾಲ ಕೊಟ್ಟಿದ್ದ ಸಂಸ್ಥೆಯು ಟ್ರಾಕ್ಟರ್, ಆರ್ಸಿಯನ್ನು ವಶಪಡಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಾಲ ಪಡೆದ ವ್ಯಕ್ತಿಯು ಗ್ರಾಹಕ ವೇದಿಕೆ ಮೊರೆ ಹೋಗಿದ್ದರು. ಆದರೆ, ಗ್ರಾಹಕ ವೇದಿಕೆಯು ಸಾಲ ಪಾವತಿಸಿದ ಬಳಿಕವೇ ಆರ್ಸಿಯನ್ನು ಅವರಿಗೆ ಮರಳಿಸುವಂತೆ ಸಂಸ್ಥೆಗೆ ಆದೇಶ ನೀಡಿತ್ತು.</p>.<p class="title">ವೇದಿಕೆ ಆದೇಶಿಸಿದ ಬಳಿಕವೂ ವ್ಯಕ್ತಿ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಾಲ ಕೊಟ್ಟ ಸಂಸ್ಥೆ ಗ್ರಾಹಕ ವೇದಿಕೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ವೇದಿಕೆಯು ವ್ಯಕ್ತಿಯ ಬಂಧನಕ್ಕೆ ನೋಟಿಸ್ ಜಾರಿಗೊಳಿಸಿತ್ತು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>