‘ನ್ಯಾಯಾಲಯವು ಎಂದಿಗೂ ಕ್ಷಮೆಯಲ್ಲಿ ನಂಬಿಕೆ ಇರಿಸಿದೆ. ಅದರಲ್ಲೂ, ಹೃದಯಾಳದಿಂದ ಮತ್ತು ಬೇಷರತ್ತಾಗಿ ಕ್ಷಮೆ ಯಾಚಿಸಿದರೆ ಅದನ್ನು ನ್ಯಾಯಾಲಯ ಪರಿಗಣಿಸುತ್ತದೆ. ಹೀಗಾಗಿ ನಾವು ವಿಶಾಲವಾದ ಹೃದಯದಿಂದ ಈ ಕ್ಷಮೆಯನ್ನು ಸ್ವೀಕರಿಸಿದ್ದೇವೆ ಮತ್ತು ಈ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆಯನ್ನು ಇಲ್ಲಿಯೇ ಸಮಾಪ್ತಿಗೊಳಿಸುತ್ತಿದ್ದೇವೆ. ಎಲ್ಲರೂ ನ್ಯಾಯಾಂಗವನ್ನು ಸಂಪೂರ್ಣವಾಗಿ ಗೌರವಿಸಬೇಕು ಎಂಬುದಷ್ಟೇ ನಮ್ಮ ಉದ್ದೇಶ’ ಎಂದು ಪೀಠ ಹೇಳಿತು.