<p><strong>ವಿಶ್ವಸಂಸ್ಥೆ</strong>:‘ಬಂಧಿತ ರಾಜಕೀಯ ನಾಯಕರನ್ನು ಮ್ಯಾನ್ಮಾರ್ ಸೇನೆ ಕೂಡಲೇ ಬಿಡುಗಡೆ ಮಾಡಬೇಕು. ದೇಶದಲ್ಲಿ ಹಿಂಸಾಚಾರವನ್ನು ಅಂತ್ಯಗೊಳಿಸಬೇಕು ಎಂಬುದು ಭಾರತದ ಒತ್ತಾಯವಾಗಿದೆ. ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್ ತಿರುಮೂರ್ತಿ ಹೇಳಿದರು.</p>.<p>‘ಮ್ಯಾನ್ಮಾರ್ ಕುರಿತಾಗಿ ಆಸಿಯಾನ್ ಪ್ರಸ್ತಾಪಿಸಿರುವ ಐದು ಅಂಶಗಳನ್ನು ಭಾರತ ಸ್ವಾಗತಿಸುತ್ತದೆ. ವಿಶ್ವಸಂಸ್ಥೆ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಹ ಆಸಿಯಾನ್ನ ನಿರ್ಧಾರಗಳನ್ನು ಬೆಂಬಲಿಸಬೇಕು’ ಎಂದು ಅವರು ತಿಳಿಸಿದರು.</p>.<p>ಮ್ಯಾನ್ಮಾರ್ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳು ನಡೆಸಿದ ಖಾಸಗಿ ಸಭೆಯಲ್ಲಿ ಭಾರತ ತನ್ನ ನಿಲುವನ್ನು ವ್ಯಕ್ತಪಡಿಸಿದೆ.</p>.<p>‘ಮ್ಯಾನ್ಮಾರ್ನಲ್ಲಿ ಹಿಂಸಾಚಾರವನ್ನು ನಿಲ್ಲಿಸಬೇಕು. ಜನರ ಹಿತಾಸಕ್ತಿಗಾಗಿ ಎಲ್ಲಾ ಪಕ್ಷಗಳು ರಚನಾತ್ಮಕ ಸಂವಾದವನ್ನು ನಡೆಸಿ, ಪರಿಹಾರವನ್ನು ಕಂಡುಕೊಳ್ಳಬೇಕು’ ಎಂದುಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ಇತ್ತೀಚೆಗೆ ನಡೆಸಿದ್ದ ಶೃಂಗಸಭೆಯಲ್ಲಿ ಒತ್ತಾಯಿಸಿತ್ತು.</p>.<p>‘ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ಆಸಿಯಾನ್) ಉಪಕ್ರಮ ಮತ್ತು ಐದು ಅಂಶಗಳ ಒಮ್ಮತವನ್ನು ಭಾರತ ಸ್ವಾಗತಿಸಿದೆ’ ಎಂದು ಟಿ.ಎಸ್ ತಿರುಮೂರ್ತಿ ಅವರು ಟ್ವೀಟ್ ಮಾಡಿದ್ದಾರೆ.</p>.<p>ಮ್ಯಾನ್ಮಾರ್ನಲ್ಲಿ ಫೆಬ್ರುವರಿ 1 ರಂದು ಸೇನಾ ದಂಗೆ ನಂತರ, ನಾಯಕಿ ಆಂಗ್ ಸಾನ್ ಸೂಕಿ ಸೇರಿದಂತೆ ಇತರೆ ರಾಜಕೀಯ ನಾಯಕರನ್ನು ಬಂಧಿಸಲಾಗಿದೆ. ಅಲ್ಲದೆ, ಸೇನಾ ದಂಗೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದವರನ್ನು ಕೂಡ ಬಂಧಿಸಲಾಗಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>:‘ಬಂಧಿತ ರಾಜಕೀಯ ನಾಯಕರನ್ನು ಮ್ಯಾನ್ಮಾರ್ ಸೇನೆ ಕೂಡಲೇ ಬಿಡುಗಡೆ ಮಾಡಬೇಕು. ದೇಶದಲ್ಲಿ ಹಿಂಸಾಚಾರವನ್ನು ಅಂತ್ಯಗೊಳಿಸಬೇಕು ಎಂಬುದು ಭಾರತದ ಒತ್ತಾಯವಾಗಿದೆ. ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್ ತಿರುಮೂರ್ತಿ ಹೇಳಿದರು.</p>.<p>‘ಮ್ಯಾನ್ಮಾರ್ ಕುರಿತಾಗಿ ಆಸಿಯಾನ್ ಪ್ರಸ್ತಾಪಿಸಿರುವ ಐದು ಅಂಶಗಳನ್ನು ಭಾರತ ಸ್ವಾಗತಿಸುತ್ತದೆ. ವಿಶ್ವಸಂಸ್ಥೆ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಹ ಆಸಿಯಾನ್ನ ನಿರ್ಧಾರಗಳನ್ನು ಬೆಂಬಲಿಸಬೇಕು’ ಎಂದು ಅವರು ತಿಳಿಸಿದರು.</p>.<p>ಮ್ಯಾನ್ಮಾರ್ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 15 ಸದಸ್ಯ ರಾಷ್ಟ್ರಗಳು ನಡೆಸಿದ ಖಾಸಗಿ ಸಭೆಯಲ್ಲಿ ಭಾರತ ತನ್ನ ನಿಲುವನ್ನು ವ್ಯಕ್ತಪಡಿಸಿದೆ.</p>.<p>‘ಮ್ಯಾನ್ಮಾರ್ನಲ್ಲಿ ಹಿಂಸಾಚಾರವನ್ನು ನಿಲ್ಲಿಸಬೇಕು. ಜನರ ಹಿತಾಸಕ್ತಿಗಾಗಿ ಎಲ್ಲಾ ಪಕ್ಷಗಳು ರಚನಾತ್ಮಕ ಸಂವಾದವನ್ನು ನಡೆಸಿ, ಪರಿಹಾರವನ್ನು ಕಂಡುಕೊಳ್ಳಬೇಕು’ ಎಂದುಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ಇತ್ತೀಚೆಗೆ ನಡೆಸಿದ್ದ ಶೃಂಗಸಭೆಯಲ್ಲಿ ಒತ್ತಾಯಿಸಿತ್ತು.</p>.<p>‘ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ಆಸಿಯಾನ್) ಉಪಕ್ರಮ ಮತ್ತು ಐದು ಅಂಶಗಳ ಒಮ್ಮತವನ್ನು ಭಾರತ ಸ್ವಾಗತಿಸಿದೆ’ ಎಂದು ಟಿ.ಎಸ್ ತಿರುಮೂರ್ತಿ ಅವರು ಟ್ವೀಟ್ ಮಾಡಿದ್ದಾರೆ.</p>.<p>ಮ್ಯಾನ್ಮಾರ್ನಲ್ಲಿ ಫೆಬ್ರುವರಿ 1 ರಂದು ಸೇನಾ ದಂಗೆ ನಂತರ, ನಾಯಕಿ ಆಂಗ್ ಸಾನ್ ಸೂಕಿ ಸೇರಿದಂತೆ ಇತರೆ ರಾಜಕೀಯ ನಾಯಕರನ್ನು ಬಂಧಿಸಲಾಗಿದೆ. ಅಲ್ಲದೆ, ಸೇನಾ ದಂಗೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದವರನ್ನು ಕೂಡ ಬಂಧಿಸಲಾಗಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>