<p><strong>ಹೈದರಾಬಾದ್</strong>: ‘ಆಂಧ್ರ ಪ್ರದೇಶ ಮುಸಲ್ಮಾನರೇತರ ಬಾಲಕರಿಗೂ ‘ಸುನ್ನತಿ’ಯನ್ನು ನಿಯಮಿತ ವೈದ್ಯಕೀಯ ವಿಧಾನದ ಮೂಲಕ ಮಾಡಲಾಗುತ್ತಿದ್ದು, ಕೋಮು ಕಾರ್ಯಸೂಚಿಯನ್ನು ಮುನ್ನಡೆಸುವ ಸಂಘಟಿತ ಪ್ರಯತ್ನವಾಗಿದೆ’ ಎಂದು ಸಿಬಿಐನ ನಿವೃತ್ತ ನಿರ್ದೇಶಕ ಎಂ.ನಾಗೇಶ್ವರ ರಾವ್ ಕಳವಳ ವ್ಯಕ್ತಪಡಿಸಿದ್ದಾರೆ. </p><p>‘ಈ ವಿಷಯದಲ್ಲಿ ವೈದ್ಯಕೀಯ ಹಾಗೂ ಕಾನೂನಿನ ವಿಚಾರಗಳ ಕುರಿತು ಪರಿಶೀಲನೆ ನಡೆಸಲಾಗುವುದು’ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p><p>‘ತೆಲುಗುದೇಶಂ ನೇತೃತ್ವದ ಮೈತ್ರಿ ಸರ್ಕಾರದ ಆಡಳಿತದಲ್ಲಿಯೂ ಸುನ್ನತಿ ಪ್ರಕ್ರಿಯೆಗಳು ಹೆಚ್ಚುತ್ತಿರುವ ಬೆಳವಣಿಗೆಯು ತೀವ್ರ ಕಳವಳ ಉಂಟುಮಾಡಿದೆ’ ಎಂದು ಆಂಧ್ರ ಪ್ರದೇಶದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಸತ್ಯ ಕುಮಾರ್ ಯಾದವ್ ಅವರಿಗೆ ಪತ್ರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p><p>‘ಸುನ್ನತಿ ಮಾಡುವುದರಿಂದ ವೈದ್ಯಕೀಯವಾಗಿ ಲಾಭವಿದೆ ಎಂದು ಭಾವಿಸಿರುವ ಹಲವು ವೈದ್ಯರು ಮುಸಲ್ಮಾನರೇತರ ಬಾಲಕರಿಗೂ ಈ ರೀತಿ ಮಾಡುವಂತೆ ಸಲಹೆ ನೀಡಿ, ಶಸ್ತ್ರಚಿಕಿತ್ಸೆ ನಡೆಸುತ್ತಿರುವುದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ಶಿಕ್ಷಣ ಹಾಗೂ ತರಬೇತಿಯ ಹೆಸರಿನಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದ್ದು, ವಿಜ್ಞಾನದ ಆಚರಣೆ ಹೆಸರಿನಲ್ಲಿ ನಿರ್ದಿಷ್ಟ ಧರ್ಮದ ಕಾರ್ಯಸೂಚಿಯನ್ನು ಜಾರಿಗೊಳಿಸುವ ಸಂಘಟಿತ ಪ್ರಯತ್ನವಾಗಿದೆ’ ಎಂದು ಪತ್ರದಲ್ಲಿ ದೂರಿದ್ದಾರೆ.</p><p>ಮಧ್ಯಪ್ರವೇಶಕ್ಕೆ ಆಗ್ರಹ: ‘ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಈ ಪದ್ಧತಿಯ ಕುರಿತಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಂವಿಧಾನಿಕ ಸಮಿತಿ ರಚಿಸಬೇಕು’ ಎಂದು ನಾಗೇಶ್ವರರಾವ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p><p>‘ಅಗತ್ಯ ಬಿದ್ದರೆ ಅಧಿಕಾರಿಗಳು 10 ವರ್ಷ ಅಥವಾ ಅದಕ್ಕಿಂತ ಹಿಂದಿನ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಬೇಕು. ವೈದ್ಯಕೀಯ ಪಠ್ಯಕ್ರಮಗಳಲ್ಲಿಯೂ ಇದನ್ನು ಅಳವಡಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.</p><p>ಪತ್ರದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತ್ಯ ಕುಮಾರ್ ಯಾದವ್, ‘ಸಿಬಿಐನ ಮಾಜಿ ಮುಖ್ಯಸ್ಥರು ಸಮಸ್ಯೆ ಕುರಿತು ಸರ್ಕಾರದ ಗಮನಸೆಳೆದಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಸರ್ಕಾರವು ಆಧುನಿಕ ವೈದ್ಯಕೀಯ ಪದ್ಧತಿ, ನೈತಿಕ ಮಾನದಂಡ ಹಾಗೂ ಕೋಮು ಸಾಮರಸ್ಯ ಕಾಪಾಡಲು ಬದ್ಧವಾಗಿದೆ. ಆರೋಗ್ಯ ಇಲಾಖೆಯು ಈ ವಿಚಾರದ ಕುರಿತಂತೆ ವೈದ್ಯಕೀಯ ನಿಯಮಾವಳಿಗಳು ಹಾಗೂ ಕಾನೂನಿನ ಅವಕಾಶಗಳ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಬಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ‘ಆಂಧ್ರ ಪ್ರದೇಶ ಮುಸಲ್ಮಾನರೇತರ ಬಾಲಕರಿಗೂ ‘ಸುನ್ನತಿ’ಯನ್ನು ನಿಯಮಿತ ವೈದ್ಯಕೀಯ ವಿಧಾನದ ಮೂಲಕ ಮಾಡಲಾಗುತ್ತಿದ್ದು, ಕೋಮು ಕಾರ್ಯಸೂಚಿಯನ್ನು ಮುನ್ನಡೆಸುವ ಸಂಘಟಿತ ಪ್ರಯತ್ನವಾಗಿದೆ’ ಎಂದು ಸಿಬಿಐನ ನಿವೃತ್ತ ನಿರ್ದೇಶಕ ಎಂ.ನಾಗೇಶ್ವರ ರಾವ್ ಕಳವಳ ವ್ಯಕ್ತಪಡಿಸಿದ್ದಾರೆ. </p><p>‘ಈ ವಿಷಯದಲ್ಲಿ ವೈದ್ಯಕೀಯ ಹಾಗೂ ಕಾನೂನಿನ ವಿಚಾರಗಳ ಕುರಿತು ಪರಿಶೀಲನೆ ನಡೆಸಲಾಗುವುದು’ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p><p>‘ತೆಲುಗುದೇಶಂ ನೇತೃತ್ವದ ಮೈತ್ರಿ ಸರ್ಕಾರದ ಆಡಳಿತದಲ್ಲಿಯೂ ಸುನ್ನತಿ ಪ್ರಕ್ರಿಯೆಗಳು ಹೆಚ್ಚುತ್ತಿರುವ ಬೆಳವಣಿಗೆಯು ತೀವ್ರ ಕಳವಳ ಉಂಟುಮಾಡಿದೆ’ ಎಂದು ಆಂಧ್ರ ಪ್ರದೇಶದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಸತ್ಯ ಕುಮಾರ್ ಯಾದವ್ ಅವರಿಗೆ ಪತ್ರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p><p>‘ಸುನ್ನತಿ ಮಾಡುವುದರಿಂದ ವೈದ್ಯಕೀಯವಾಗಿ ಲಾಭವಿದೆ ಎಂದು ಭಾವಿಸಿರುವ ಹಲವು ವೈದ್ಯರು ಮುಸಲ್ಮಾನರೇತರ ಬಾಲಕರಿಗೂ ಈ ರೀತಿ ಮಾಡುವಂತೆ ಸಲಹೆ ನೀಡಿ, ಶಸ್ತ್ರಚಿಕಿತ್ಸೆ ನಡೆಸುತ್ತಿರುವುದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ಶಿಕ್ಷಣ ಹಾಗೂ ತರಬೇತಿಯ ಹೆಸರಿನಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದ್ದು, ವಿಜ್ಞಾನದ ಆಚರಣೆ ಹೆಸರಿನಲ್ಲಿ ನಿರ್ದಿಷ್ಟ ಧರ್ಮದ ಕಾರ್ಯಸೂಚಿಯನ್ನು ಜಾರಿಗೊಳಿಸುವ ಸಂಘಟಿತ ಪ್ರಯತ್ನವಾಗಿದೆ’ ಎಂದು ಪತ್ರದಲ್ಲಿ ದೂರಿದ್ದಾರೆ.</p><p>ಮಧ್ಯಪ್ರವೇಶಕ್ಕೆ ಆಗ್ರಹ: ‘ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಈ ಪದ್ಧತಿಯ ಕುರಿತಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಂವಿಧಾನಿಕ ಸಮಿತಿ ರಚಿಸಬೇಕು’ ಎಂದು ನಾಗೇಶ್ವರರಾವ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p><p>‘ಅಗತ್ಯ ಬಿದ್ದರೆ ಅಧಿಕಾರಿಗಳು 10 ವರ್ಷ ಅಥವಾ ಅದಕ್ಕಿಂತ ಹಿಂದಿನ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಬೇಕು. ವೈದ್ಯಕೀಯ ಪಠ್ಯಕ್ರಮಗಳಲ್ಲಿಯೂ ಇದನ್ನು ಅಳವಡಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.</p><p>ಪತ್ರದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತ್ಯ ಕುಮಾರ್ ಯಾದವ್, ‘ಸಿಬಿಐನ ಮಾಜಿ ಮುಖ್ಯಸ್ಥರು ಸಮಸ್ಯೆ ಕುರಿತು ಸರ್ಕಾರದ ಗಮನಸೆಳೆದಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಸರ್ಕಾರವು ಆಧುನಿಕ ವೈದ್ಯಕೀಯ ಪದ್ಧತಿ, ನೈತಿಕ ಮಾನದಂಡ ಹಾಗೂ ಕೋಮು ಸಾಮರಸ್ಯ ಕಾಪಾಡಲು ಬದ್ಧವಾಗಿದೆ. ಆರೋಗ್ಯ ಇಲಾಖೆಯು ಈ ವಿಚಾರದ ಕುರಿತಂತೆ ವೈದ್ಯಕೀಯ ನಿಯಮಾವಳಿಗಳು ಹಾಗೂ ಕಾನೂನಿನ ಅವಕಾಶಗಳ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಬಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>