‘ಕೇಂದ್ರಾಡಳಿತ ಪ್ರದೇಶಗಳು ಸಾಮಾನ್ಯವಾಗಿ ಭೌಗೋಳಿಕವಾಗಿ ಚಿಕ್ಕದಾಗಿರುತ್ತವೆ. ಅಥವಾ ಅಪರೂಪದ ಕಾರಣಗಳಿಗಾಗಿ ಅವುಗಳ ರಚನೆ ಆಗಬಹುದು. ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸುವುದರ ಪರಿಣಾಮವಾಗಿ, ಪ್ರಜೆಗಳಿಗೆ ತಮ್ಮದಾದ ರಾಜ್ಯ ಇಲ್ಲವಾಗುತ್ತದೆ, ಚುನಾಯಿತ ಸರ್ಕಾರವನ್ನು ನಿರಾಕರಿಸಿದಂತೆ ಆಗುತ್ತದೆ ಹಾಗೂ ಒಕ್ಕೂಟ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರುತ್ತದೆ’ ಎಂದು ಅವರು ತೀರ್ಪಿನಲ್ಲಿ ಹೇಳಿದ್ದಾರೆ.