<p><strong>ಹೈದರಬಾದ್ :</strong> ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅರೋಪದಡಿ ಪೋಕ್ಸೊ ನ್ಯಾಯಾಲಯವು ಆರೋಪಿಗೆ ಮರಣದಂಡನೆಯನ್ನು ವಿಧಿಸಿ ಆದೇಶವನ್ನು ನೀಡಿದೆ. </p><p>ತೆಲಂಗಾಣದ ವಿಶೇಷ ಪೋಕ್ಸೊ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಆಪರಾಧಿ ಎಂದು ಪರಿಗಣಿಸಿದೆ. ಅಪರಾಧಿಗೆ ₹10 ಲಕ್ಷ ದಂಡ ಹಾಗೂ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ನಲ್ಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರತ್ ಚಂದ್ರ ಪವಾರ್ ಹೇಳಿದ್ದಾರೆ. </p><p>ಬಾಲಕಿಯ ಕುಟುಂಬ ವಾಸವಾಗಿದ್ದ ಕಾಲೋನಿಯಲ್ಲೇ ಅಪರಾಧಿಯು ವಾಸವಾಗಿದ್ದನು. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮೇಲೆ ಕತ್ತು ಹಿಸುಕಿ ಈತ ಕೊಂದೊದ್ದ. ನಂತರ ದೇಹವನ್ನು ಒಳಚರಂಡಿಗೆ ಎಸೆದಿದ್ದಾನೆ ಎಂದು ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. </p><p>ವಿಚಾರಣೆಯ ಸಂದರ್ಭದಲ್ಲಿ ಅಪರಾಧಿಗೆ ಕಿವಿ ಕೇಳದ ಹಾಗೂ ಮಾತು ಬಾರದ ಕಾರಣ ಭಾಷಾಂತರಕಾರರನ್ನು ನ್ಯಾಯಾಲಯವು ನೇಮಿಸಿತ್ತು. </p><p>ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ಅಧಿಕೃತವಾಗಿ ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಬಾದ್ :</strong> ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅರೋಪದಡಿ ಪೋಕ್ಸೊ ನ್ಯಾಯಾಲಯವು ಆರೋಪಿಗೆ ಮರಣದಂಡನೆಯನ್ನು ವಿಧಿಸಿ ಆದೇಶವನ್ನು ನೀಡಿದೆ. </p><p>ತೆಲಂಗಾಣದ ವಿಶೇಷ ಪೋಕ್ಸೊ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಆಪರಾಧಿ ಎಂದು ಪರಿಗಣಿಸಿದೆ. ಅಪರಾಧಿಗೆ ₹10 ಲಕ್ಷ ದಂಡ ಹಾಗೂ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ನಲ್ಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರತ್ ಚಂದ್ರ ಪವಾರ್ ಹೇಳಿದ್ದಾರೆ. </p><p>ಬಾಲಕಿಯ ಕುಟುಂಬ ವಾಸವಾಗಿದ್ದ ಕಾಲೋನಿಯಲ್ಲೇ ಅಪರಾಧಿಯು ವಾಸವಾಗಿದ್ದನು. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮೇಲೆ ಕತ್ತು ಹಿಸುಕಿ ಈತ ಕೊಂದೊದ್ದ. ನಂತರ ದೇಹವನ್ನು ಒಳಚರಂಡಿಗೆ ಎಸೆದಿದ್ದಾನೆ ಎಂದು ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. </p><p>ವಿಚಾರಣೆಯ ಸಂದರ್ಭದಲ್ಲಿ ಅಪರಾಧಿಗೆ ಕಿವಿ ಕೇಳದ ಹಾಗೂ ಮಾತು ಬಾರದ ಕಾರಣ ಭಾಷಾಂತರಕಾರರನ್ನು ನ್ಯಾಯಾಲಯವು ನೇಮಿಸಿತ್ತು. </p><p>ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ಅಧಿಕೃತವಾಗಿ ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>