<p>ಜೈಪುರ:ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಅನ್ನು₹ 500ಕ್ಕೆ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಜನತೆಗೆ ಭರವಸೆ ನೀಡಿದ್ದಾರೆ.</p>.<p>ಅಲ್ವಾರ್ನಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವರ್ಷಕ್ಕೆ ಇಂತಹ 12<br />ಸಿಲಿಂಡರ್ಗಳನ್ನು ನೀಡಲಾಗುವುದು ಎಂದರು.</p>.<p>₹ 1050ಕ್ಕೆ ದೊರೆಯುವ ಗ್ಯಾಸ್ ಸಿಲಿಂಡರ್ ಅನ್ನು ಕೇವಲ ₹500ಕ್ಕೆ ನೀಡಲಿದ್ದೇವೆ. ಈ ಯೋಜನೆ ಏಪ್ರಿಲ್ ತಿಂಗಳಿಂದ ಜಾರಿಗೆ ಬರಲಿದೆ ಎಂದುಹೇಳಿದರು.</p>.<p>ಮುಂದಿನ ತಿಂಗಳು ಮಂಡಿಸುವ ಬಜೆಟ್ನಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ ಕಿಚನ್ ಕಿಟ್ ವಿತರಿಸುವ ಯೋಜನೆಯನ್ನು ಘೋಷಣೆ ಮಾಡಿ, ಏಪ್ರಿಲ್ನಿಂದಜಾರಿಗೆ ತರಲಾಗುವುದು ಎಂದರು.</p>.<p>ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ – ರಾಹುಲ್: ‘ಭಾರತ ಜೋಡೊ ಯಾತ್ರೆ ಮೂಲಕ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದರು.</p>.<p>ರ್ಯಾಲಿಯಲ್ಲಿ ಮಾತನಾಡಿದ ಅವರು,‘ಬಿಜೆಪಿಗರಲ್ಲಿ ಕೆಲವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆ ಹೊರಟಿರುವುದೇಕೆ ಎಂದು ಕೇಳುತ್ತಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ ಎಂಬುದೇ ನನ್ನ ಉತ್ತರ’ ಎಂದು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೈಪುರ:ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಅನ್ನು₹ 500ಕ್ಕೆ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಜನತೆಗೆ ಭರವಸೆ ನೀಡಿದ್ದಾರೆ.</p>.<p>ಅಲ್ವಾರ್ನಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವರ್ಷಕ್ಕೆ ಇಂತಹ 12<br />ಸಿಲಿಂಡರ್ಗಳನ್ನು ನೀಡಲಾಗುವುದು ಎಂದರು.</p>.<p>₹ 1050ಕ್ಕೆ ದೊರೆಯುವ ಗ್ಯಾಸ್ ಸಿಲಿಂಡರ್ ಅನ್ನು ಕೇವಲ ₹500ಕ್ಕೆ ನೀಡಲಿದ್ದೇವೆ. ಈ ಯೋಜನೆ ಏಪ್ರಿಲ್ ತಿಂಗಳಿಂದ ಜಾರಿಗೆ ಬರಲಿದೆ ಎಂದುಹೇಳಿದರು.</p>.<p>ಮುಂದಿನ ತಿಂಗಳು ಮಂಡಿಸುವ ಬಜೆಟ್ನಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ ಕಿಚನ್ ಕಿಟ್ ವಿತರಿಸುವ ಯೋಜನೆಯನ್ನು ಘೋಷಣೆ ಮಾಡಿ, ಏಪ್ರಿಲ್ನಿಂದಜಾರಿಗೆ ತರಲಾಗುವುದು ಎಂದರು.</p>.<p>ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ – ರಾಹುಲ್: ‘ಭಾರತ ಜೋಡೊ ಯಾತ್ರೆ ಮೂಲಕ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದರು.</p>.<p>ರ್ಯಾಲಿಯಲ್ಲಿ ಮಾತನಾಡಿದ ಅವರು,‘ಬಿಜೆಪಿಗರಲ್ಲಿ ಕೆಲವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆ ಹೊರಟಿರುವುದೇಕೆ ಎಂದು ಕೇಳುತ್ತಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ ಎಂಬುದೇ ನನ್ನ ಉತ್ತರ’ ಎಂದು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>