<p><strong>ನವದೆಹಲಿ:</strong> ಸಂಸತ್ತಿನ ಈ ಮುಂಗಾರ ಅಧಿವೇಶನದಲ್ಲಿ ನಾವು ಕೋವಿಡ್ ಕುರಿತಂತೆ ಆರೋಗ್ಯಕರ ಮತ್ತು ಫಲಪ್ರದ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಸೋಮವಾರ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆನರೇಂದ್ರ ಮೋದಿ ಅವರು ಮಾತನಾಡಿದರು.</p>.<p>ಕೋವಿಡ್ ಲಸಿಕೆಯನ್ನು ನಮ್ಮ ಬಾಹು(ತೋಳು)ಗಳಿಗೆ ನೀಡಲಾಗಿದೆ. ಆದ್ದರಿಂದ ಲಸಿಕೆ ಪಡೆದುಕೊಂಡವರು ಈಗ ಬಾಹುಬಲಿಗಳಾಗಿದ್ದಾರೆ. ದೇಶದಲ್ಲಿ ಒಟ್ಟು 40 ಕೋಟಿ ಜನರು ಬಾಹುಬಲಿಗಳಾಗಿದ್ದಾರೆ. ಇದರಿಂದಾಗಿ ಲಸಿಕೆ ಪಡೆದವರು ಸೋಂಕಿನ ವಿರುದ್ಧ ಹೋರಾಡಲು ಸನ್ನದ್ದರಾಗಿದ್ದಾರೆ ಎಂದು ಮೋದಿ ಹೇಳಿದರು.</p>.<p>ಕೋವಿಡ್ ಸೋಂಕು ಇಡೀ ಜಗತ್ತಿಗೆ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಈ ಅಧಿವೇಶನದಲ್ಲಿ ಕೋವಿಡ್ ಕುರಿತಂತೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು ಹಾಗೇ ಸರ್ಕಾರಕ್ಕೆ ಉತ್ತರ ನೀಡಲು ಅವಕಾಶ ಮಾಡಿಕೊಡಬೇಕು ಎಂದರು.</p>.<p>ವಿವಿಧ ವಿಷಯಗಳ ಕುರಿತು ಆರೋಗ್ಯಕರ ಮತ್ತು ಫಲಪ್ರದ ಚರ್ಚೆಗಳಿಗೆ ತಮ್ಮ ಸರ್ಕಾರ ಸಿದ್ಧವಿದೆ.ಈ ಮೂಲಕ ಸಂಸತ್ತಿನಲ್ಲಿ ಶಿಸ್ತುಬದ್ಧ ವಾತಾವರಣ ಕಾಪಾಡಿಕೊಳ್ಳಬೇಕಿದೆ. ಆಗಾಗಿ ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ತಿನ ಈ ಮುಂಗಾರ ಅಧಿವೇಶನದಲ್ಲಿ ನಾವು ಕೋವಿಡ್ ಕುರಿತಂತೆ ಆರೋಗ್ಯಕರ ಮತ್ತು ಫಲಪ್ರದ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಸೋಮವಾರ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆನರೇಂದ್ರ ಮೋದಿ ಅವರು ಮಾತನಾಡಿದರು.</p>.<p>ಕೋವಿಡ್ ಲಸಿಕೆಯನ್ನು ನಮ್ಮ ಬಾಹು(ತೋಳು)ಗಳಿಗೆ ನೀಡಲಾಗಿದೆ. ಆದ್ದರಿಂದ ಲಸಿಕೆ ಪಡೆದುಕೊಂಡವರು ಈಗ ಬಾಹುಬಲಿಗಳಾಗಿದ್ದಾರೆ. ದೇಶದಲ್ಲಿ ಒಟ್ಟು 40 ಕೋಟಿ ಜನರು ಬಾಹುಬಲಿಗಳಾಗಿದ್ದಾರೆ. ಇದರಿಂದಾಗಿ ಲಸಿಕೆ ಪಡೆದವರು ಸೋಂಕಿನ ವಿರುದ್ಧ ಹೋರಾಡಲು ಸನ್ನದ್ದರಾಗಿದ್ದಾರೆ ಎಂದು ಮೋದಿ ಹೇಳಿದರು.</p>.<p>ಕೋವಿಡ್ ಸೋಂಕು ಇಡೀ ಜಗತ್ತಿಗೆ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಈ ಅಧಿವೇಶನದಲ್ಲಿ ಕೋವಿಡ್ ಕುರಿತಂತೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು ಹಾಗೇ ಸರ್ಕಾರಕ್ಕೆ ಉತ್ತರ ನೀಡಲು ಅವಕಾಶ ಮಾಡಿಕೊಡಬೇಕು ಎಂದರು.</p>.<p>ವಿವಿಧ ವಿಷಯಗಳ ಕುರಿತು ಆರೋಗ್ಯಕರ ಮತ್ತು ಫಲಪ್ರದ ಚರ್ಚೆಗಳಿಗೆ ತಮ್ಮ ಸರ್ಕಾರ ಸಿದ್ಧವಿದೆ.ಈ ಮೂಲಕ ಸಂಸತ್ತಿನಲ್ಲಿ ಶಿಸ್ತುಬದ್ಧ ವಾತಾವರಣ ಕಾಪಾಡಿಕೊಳ್ಳಬೇಕಿದೆ. ಆಗಾಗಿ ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>