<p><strong>ಪ್ರಯಾಗರಾಜ</strong>: ವಿಚಾರಣೆ ಸಂಬಂಧ ಪೊಲೀಸ್ ಠಾಣೆಗೆ ಕರೆಯಿಸಿ ದಲಿತ ವ್ಯಕ್ತಿಗೆ ಥಳಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಮಶಂಕರ್ ತ್ರಿಪಾಠಿ ಎಂಬುವವರು ತನ್ನ 18 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಸೊರನ್ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 19ರಂದು ದೂರು ದಾಖಲಿಸಿದ್ದರು. ಇದರ ತನಿಖೆಯನ್ನು ಸಬ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ನಡೆಸುತ್ತಿದ್ದರು’ ಎಂದು ಸಹಾಯಕ ಪೊಲೀಸ್ ಆಯುಕ್ತ (ಸೊರಾನ್) ಶೈಲೇಂದ್ರ ತಿಳಿಸಿದ್ದಾರೆ.</p><p>‘ವಿಚಾರಣೆ ವೇಳೆ ಹುಡುಗಿಯ ಕರೆ ವಿವರಗಳ ದಾಖಲೆಗಳನ್ನು ಪರಿಶೀಲಿಸಿದ ಸುನೀಲ್ ಕುಮಾರ್, ಶನಿವಾರ ಧರ್ಮೇಂದ್ರ ಕುಮಾರ್ ಎಂಬಾತನನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಿದ್ದರು. ಇದಾದ ಮರುದಿನ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು’ ಎಂದರು.</p><p>‘ವೈದ್ಯಕೀಯ ಪರೀಕ್ಷೆ ವೇಳೆ ಧರ್ಮೇಂದ್ರ ಅವರ ಮೇಲೆ ಸುತ್ತಿಗೆ, ಲಾಟಿ ಅಂತಹ ಹರಿತವಿಲ್ಲದ ಯಾವುದೋ ಒಂದು ವಸ್ತುವಿನಿಂದ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಅವರ ಆರೋಗ್ಯ ಸುಧಾರಿಸುತ್ತಿದೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ</strong>: ವಿಚಾರಣೆ ಸಂಬಂಧ ಪೊಲೀಸ್ ಠಾಣೆಗೆ ಕರೆಯಿಸಿ ದಲಿತ ವ್ಯಕ್ತಿಗೆ ಥಳಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಮಶಂಕರ್ ತ್ರಿಪಾಠಿ ಎಂಬುವವರು ತನ್ನ 18 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಸೊರನ್ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 19ರಂದು ದೂರು ದಾಖಲಿಸಿದ್ದರು. ಇದರ ತನಿಖೆಯನ್ನು ಸಬ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ನಡೆಸುತ್ತಿದ್ದರು’ ಎಂದು ಸಹಾಯಕ ಪೊಲೀಸ್ ಆಯುಕ್ತ (ಸೊರಾನ್) ಶೈಲೇಂದ್ರ ತಿಳಿಸಿದ್ದಾರೆ.</p><p>‘ವಿಚಾರಣೆ ವೇಳೆ ಹುಡುಗಿಯ ಕರೆ ವಿವರಗಳ ದಾಖಲೆಗಳನ್ನು ಪರಿಶೀಲಿಸಿದ ಸುನೀಲ್ ಕುಮಾರ್, ಶನಿವಾರ ಧರ್ಮೇಂದ್ರ ಕುಮಾರ್ ಎಂಬಾತನನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಿದ್ದರು. ಇದಾದ ಮರುದಿನ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು’ ಎಂದರು.</p><p>‘ವೈದ್ಯಕೀಯ ಪರೀಕ್ಷೆ ವೇಳೆ ಧರ್ಮೇಂದ್ರ ಅವರ ಮೇಲೆ ಸುತ್ತಿಗೆ, ಲಾಟಿ ಅಂತಹ ಹರಿತವಿಲ್ಲದ ಯಾವುದೋ ಒಂದು ವಸ್ತುವಿನಿಂದ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಅವರ ಆರೋಗ್ಯ ಸುಧಾರಿಸುತ್ತಿದೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>