<p><strong>ರಾಯಪುರ(ಪಿಟಿಐ):</strong> ‘ಅಮ್ಮಾ ಐ ಲವ್ ಯು. ನಾನು ಈ ದಾಳಿಯಲ್ಲಿ ಸಾಯಬಹುದು’ ಇದು ದಾಂತೇವಾಡದಲ್ಲಿ ನಕ್ಸಲರು ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ದೂರದರ್ಶನ ವಾಹಿನಿ ಸಿಬ್ಬಂದಿ ಮೊರ್ಮುಕುಟ್ ಶರ್ಮಾ ತನ್ನ ತಾಯಿಗೆ ಕಳುಹಿಸಿರುವ ಸಂದೇಶ.</p>.<p>‘ವಿಧಾನಸಭಾ ಚುನಾವಣೆಯ ವರದಿಗಾರಿಕೆಗೆ ಪೊಲೀಸ್ ಬೆಂಗಾವಲಿನಲ್ಲಿ ತೆರಳುತ್ತಿದ್ದಾಗ ನಮ್ಮ ಮೇಲೆ ದಾಳಿ ನಡೆದಿದೆ’ ಎಂದು ಶರ್ಮಾ ಅವರು ನೆಲದಲ್ಲಿ ಮಲಗಿಕೊಂಡು ಚಿತ್ರೀಕರಿಸಿರುವ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.</p>.<p>ದೂರದರ್ಶನ ಸುದ್ದಿ ವಾಹಿನಿಯಲ್ಲಿ ಲೈಟಿಂಗ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವ ಮೊರ್ಮುಕುಟ್ ಹಾಗೂ ಪತ್ರಕರ್ತ ಧೀರಜ್ ಕುಮಾರ್ ಈ ದಾಳಿಯಿಂದ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ ಕ್ಯಾಮೆರಾಮನ್ ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ.</p>.<p>ಚುನಾವಣಾ ವರದಿಗಾರಿಕೆಗಾಗಿ ಇವರು ದೆಹಲಿಯಿಂದ ಛತ್ತೀಸಗಡಕ್ಕೆ ತೆರಳಿದ್ದರು.</p>.<p><strong>ಛತ್ತೀಸಗಡದಲ್ಲಿ ನಕ್ಸಲ್ ದಾಳಿ: ಗಾಯಾಳು ಪೊಲೀಸ್ ಸಾವು</strong></p>.<p>ರಾಯಪುರ, ಛತ್ತೀಸಗಡ (ಪಿಟಿಐ): ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸರೊಬ್ಬರು ಬುಧವಾರ ಮೃತಪಟ್ಟಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ.</p>.<p>ಅರಾನ್ಪುರ ಪೊಲೀಸ್ ಠಾಣೆಯ ಸಹಾಯಕ ಕಾನ್ಸ್ಟೆಬಲ್ ರಾಕೇಶ್ ಕೌಶಲ್ (35) ಮೃತಪಟ್ಟವರು.</p>.<p>ನಿಲ್ವಾಯ ಗ್ರಾಮದಲ್ಲಿ ನಕ್ಸಲರು ಮಂಗಳವಾರ ನಡೆಸಿದ ದಾಳಿಗೆ ಸಬ್ ಇನ್ಸ್ಪೆಕ್ಟರ್ ರುದ್ರ ಪ್ರತಾಪ್ ಸಿಂಗ್, ಸಹಾಯಕ ಕಾನ್ಸ್ಟೆಬಲ್ ಮಾಂಗ್ಲು ಮತ್ತು ದೂರದರ್ಶನ ವಾಹಿನಿಯ ಕ್ಯಾಮೆರಾಮನ್ ಅಚ್ಯುತಾನಂದ್ ಸಾಹು ಬಲಿಯಾಗಿದ್ದರು.</p>.<p>ರಾಕೇಶ್ ಸೇರಿದಂತೆ ಗಾಯಗೊಂಡಿದ್ದ ಇಬ್ಬರು ಪೊಲೀಸರನ್ನು ಹೆಲಿಕಾಪ್ಟರ್ ಮೂಲಕ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ(ಪಿಟಿಐ):</strong> ‘ಅಮ್ಮಾ ಐ ಲವ್ ಯು. ನಾನು ಈ ದಾಳಿಯಲ್ಲಿ ಸಾಯಬಹುದು’ ಇದು ದಾಂತೇವಾಡದಲ್ಲಿ ನಕ್ಸಲರು ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ದೂರದರ್ಶನ ವಾಹಿನಿ ಸಿಬ್ಬಂದಿ ಮೊರ್ಮುಕುಟ್ ಶರ್ಮಾ ತನ್ನ ತಾಯಿಗೆ ಕಳುಹಿಸಿರುವ ಸಂದೇಶ.</p>.<p>‘ವಿಧಾನಸಭಾ ಚುನಾವಣೆಯ ವರದಿಗಾರಿಕೆಗೆ ಪೊಲೀಸ್ ಬೆಂಗಾವಲಿನಲ್ಲಿ ತೆರಳುತ್ತಿದ್ದಾಗ ನಮ್ಮ ಮೇಲೆ ದಾಳಿ ನಡೆದಿದೆ’ ಎಂದು ಶರ್ಮಾ ಅವರು ನೆಲದಲ್ಲಿ ಮಲಗಿಕೊಂಡು ಚಿತ್ರೀಕರಿಸಿರುವ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.</p>.<p>ದೂರದರ್ಶನ ಸುದ್ದಿ ವಾಹಿನಿಯಲ್ಲಿ ಲೈಟಿಂಗ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವ ಮೊರ್ಮುಕುಟ್ ಹಾಗೂ ಪತ್ರಕರ್ತ ಧೀರಜ್ ಕುಮಾರ್ ಈ ದಾಳಿಯಿಂದ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ ಕ್ಯಾಮೆರಾಮನ್ ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ.</p>.<p>ಚುನಾವಣಾ ವರದಿಗಾರಿಕೆಗಾಗಿ ಇವರು ದೆಹಲಿಯಿಂದ ಛತ್ತೀಸಗಡಕ್ಕೆ ತೆರಳಿದ್ದರು.</p>.<p><strong>ಛತ್ತೀಸಗಡದಲ್ಲಿ ನಕ್ಸಲ್ ದಾಳಿ: ಗಾಯಾಳು ಪೊಲೀಸ್ ಸಾವು</strong></p>.<p>ರಾಯಪುರ, ಛತ್ತೀಸಗಡ (ಪಿಟಿಐ): ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸರೊಬ್ಬರು ಬುಧವಾರ ಮೃತಪಟ್ಟಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ.</p>.<p>ಅರಾನ್ಪುರ ಪೊಲೀಸ್ ಠಾಣೆಯ ಸಹಾಯಕ ಕಾನ್ಸ್ಟೆಬಲ್ ರಾಕೇಶ್ ಕೌಶಲ್ (35) ಮೃತಪಟ್ಟವರು.</p>.<p>ನಿಲ್ವಾಯ ಗ್ರಾಮದಲ್ಲಿ ನಕ್ಸಲರು ಮಂಗಳವಾರ ನಡೆಸಿದ ದಾಳಿಗೆ ಸಬ್ ಇನ್ಸ್ಪೆಕ್ಟರ್ ರುದ್ರ ಪ್ರತಾಪ್ ಸಿಂಗ್, ಸಹಾಯಕ ಕಾನ್ಸ್ಟೆಬಲ್ ಮಾಂಗ್ಲು ಮತ್ತು ದೂರದರ್ಶನ ವಾಹಿನಿಯ ಕ್ಯಾಮೆರಾಮನ್ ಅಚ್ಯುತಾನಂದ್ ಸಾಹು ಬಲಿಯಾಗಿದ್ದರು.</p>.<p>ರಾಕೇಶ್ ಸೇರಿದಂತೆ ಗಾಯಗೊಂಡಿದ್ದ ಇಬ್ಬರು ಪೊಲೀಸರನ್ನು ಹೆಲಿಕಾಪ್ಟರ್ ಮೂಲಕ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>