<p><strong>ಬೆಂಗಳೂರು</strong>: ವೈದ್ಯಕೀಯ ಉಪಕರಣ ಮತ್ತು ಸಾಧನಗಳ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿ ಆಗಲೇಬೇಕಾದ ಅನಿವಾರ್ಯತೆ ಇದೆ ಎಂದು ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್ ಹೇಳಿದ್ದಾರೆ.</p>.<p>ದೇಶದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕು ತಡೆ ಹಾಗೂ ಚಿಕಿತ್ಸೆ ಕಾರ್ಯಕ್ಕೆ ವೈದ್ಯಕೀಯ ಉಪಕರಣ, ಸಾಧನಗಳ ಕೊರತೆಯಾಗಿದೆ.</p>.<p>ಆ ಹಿನ್ನೆಲೆಯಲ್ಲಿ ಶುಕ್ರವಾರ ಮಾತನಾಡಿರುವ ಕಸ್ತೂರಿ ರಂಗನ್, 'ವೈದ್ಯಕೀಯ ಉಪಕರಣ ಮತ್ತು ಸಾಧನಗಳ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಬೇಕಿದೆ. ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯನೀತಿಯನ್ನು ತರುವುದು ಮುಖ್ಯ' ಎಂದು ಪ್ರತಿಪಾದಿಸಿದ್ದಾರೆ.</p>.<p>ಇಂತಹ ಬಿಕ್ಕಟ್ಟಿನಲ್ಲಿ ಅವಶ್ಯಕತೆ ಇರುವ ಸಾಧನಗಳಲ್ಲಿ ಶೇ.10 ಪ್ರಮಾಣದ ಸಾಧನಗಳನ್ನೂ ಸಹ ದೇಶವು ಉತ್ಪಾದಿಸಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>'ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಬೇಕಾದ ತಂತ್ರಜ್ಞಾನ ಅಷ್ಟೇನೂ ಕಷ್ಟದಾಯಕವಲ್ಲ. ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ ನಂತರ ವೈದ್ಯಕೀಯ ಉಪಕರಣ ಮತ್ತು ಸಾಧನಗಳು ಎಷ್ಟು ಅವಶ್ಯಕ ಎಂದು ಸರ್ಕಾರಕ್ಕೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ದೇಶವು ಸ್ವಾವಲಂಬಿಯಾಗುವಂತಹ ಕಾರ್ಯಸೂಚಿಗಳನ್ನು ಸರ್ಕಾರ ತರಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂಬ ನಂಬಿಕೆ ನನಗಿದೆ' ಎಂದು ಕಸ್ತೂರಿ ರಂಗನ್ ಹೇಳಿದ್ದಾರೆ.</p>.<p>ದೇಶದಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 228ಕ್ಕೆ ಏರಿದ್ದು, 6,771 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೈದ್ಯಕೀಯ ಉಪಕರಣ ಮತ್ತು ಸಾಧನಗಳ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿ ಆಗಲೇಬೇಕಾದ ಅನಿವಾರ್ಯತೆ ಇದೆ ಎಂದು ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್ ಹೇಳಿದ್ದಾರೆ.</p>.<p>ದೇಶದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕು ತಡೆ ಹಾಗೂ ಚಿಕಿತ್ಸೆ ಕಾರ್ಯಕ್ಕೆ ವೈದ್ಯಕೀಯ ಉಪಕರಣ, ಸಾಧನಗಳ ಕೊರತೆಯಾಗಿದೆ.</p>.<p>ಆ ಹಿನ್ನೆಲೆಯಲ್ಲಿ ಶುಕ್ರವಾರ ಮಾತನಾಡಿರುವ ಕಸ್ತೂರಿ ರಂಗನ್, 'ವೈದ್ಯಕೀಯ ಉಪಕರಣ ಮತ್ತು ಸಾಧನಗಳ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಬೇಕಿದೆ. ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯನೀತಿಯನ್ನು ತರುವುದು ಮುಖ್ಯ' ಎಂದು ಪ್ರತಿಪಾದಿಸಿದ್ದಾರೆ.</p>.<p>ಇಂತಹ ಬಿಕ್ಕಟ್ಟಿನಲ್ಲಿ ಅವಶ್ಯಕತೆ ಇರುವ ಸಾಧನಗಳಲ್ಲಿ ಶೇ.10 ಪ್ರಮಾಣದ ಸಾಧನಗಳನ್ನೂ ಸಹ ದೇಶವು ಉತ್ಪಾದಿಸಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>'ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಬೇಕಾದ ತಂತ್ರಜ್ಞಾನ ಅಷ್ಟೇನೂ ಕಷ್ಟದಾಯಕವಲ್ಲ. ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ ನಂತರ ವೈದ್ಯಕೀಯ ಉಪಕರಣ ಮತ್ತು ಸಾಧನಗಳು ಎಷ್ಟು ಅವಶ್ಯಕ ಎಂದು ಸರ್ಕಾರಕ್ಕೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ದೇಶವು ಸ್ವಾವಲಂಬಿಯಾಗುವಂತಹ ಕಾರ್ಯಸೂಚಿಗಳನ್ನು ಸರ್ಕಾರ ತರಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂಬ ನಂಬಿಕೆ ನನಗಿದೆ' ಎಂದು ಕಸ್ತೂರಿ ರಂಗನ್ ಹೇಳಿದ್ದಾರೆ.</p>.<p>ದೇಶದಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 228ಕ್ಕೆ ಏರಿದ್ದು, 6,771 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>