<p><strong>ಶ್ರೀನಗರ:</strong> ಕಾಶ್ಮೀರದಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದ್ದು, ಕಣಿವೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಆರಕ್ಕೆ ಏರಿದೆ.<br /><br />ಸೌದಿ ಅರೇಬಿಯಾದಿಂದ ಹಿಂದಿರುಗಿದ್ದ ಒಬ್ಬ ಮಹಿಳೆ ಹಾಗೂ ದೆಹಲಿಯಿಂದ ಬಂದ ಒಬ್ಬ ವ್ಯಕ್ತಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ದೆಹಲಿಯಿಂದ ಬಂದ ವ್ಯಕ್ತಿ ವಿದೇಶಿ ಪ್ರವಾಸದ ವಿವರವನ್ನು ಕಲೆಹಾಕಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್ ಕನ್ಸಲ್ ತಿಳಿಸಿದ್ದಾರೆ.</p>.<p>ಮಂಗಳವಾರ ಸೋಂಕು ದೃಢಪಟ್ಟ ಇಲ್ಲಿನ ನಾತಿಪೋರಾ ಪ್ರದೇಶದ ಮಹಿಳೆ ಹಾಗೂ ಮಾರ್ಚ್ 19ರಂದು ದೃಢಪಟ್ಟ ಮೊದಲ ಸೋಂಕಿತ ಮಹಿಳೆಯು ಮಾರ್ಚ್ 16ರಂದು ಸೌದಿ ಅರೇಬಿಯಾದಿಂದ ಒಂದೇ ವಿಮಾನದಲ್ಲಿ ಶ್ರೀನಗರಕ್ಕೆ ಬಂದಿಳಿದಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಕಾಶ್ಮೀರದಲ್ಲಿ ಮೊದಲ ಬಾರಿಗೆ ಕೋವಿಡ್ –19 ಸೋಂಕು ದೃಢಪಟ್ಟು ಇಲ್ಲಿನ ಎಸ್ಕೆಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ಮಂಗಳವಾರ ಗುಣಮುಖರಾಗಿದ್ದಾರೆ ಎಂದು ಶ್ರೀನಗರದ ಜಿಲ್ಲಾಧಿಕಾರಿ ಶಾಹೀದ್ ಇಕ್ಬಾಲ್ ಚೌಧರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಾಶ್ಮೀರದಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದ್ದು, ಕಣಿವೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಆರಕ್ಕೆ ಏರಿದೆ.<br /><br />ಸೌದಿ ಅರೇಬಿಯಾದಿಂದ ಹಿಂದಿರುಗಿದ್ದ ಒಬ್ಬ ಮಹಿಳೆ ಹಾಗೂ ದೆಹಲಿಯಿಂದ ಬಂದ ಒಬ್ಬ ವ್ಯಕ್ತಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ದೆಹಲಿಯಿಂದ ಬಂದ ವ್ಯಕ್ತಿ ವಿದೇಶಿ ಪ್ರವಾಸದ ವಿವರವನ್ನು ಕಲೆಹಾಕಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್ ಕನ್ಸಲ್ ತಿಳಿಸಿದ್ದಾರೆ.</p>.<p>ಮಂಗಳವಾರ ಸೋಂಕು ದೃಢಪಟ್ಟ ಇಲ್ಲಿನ ನಾತಿಪೋರಾ ಪ್ರದೇಶದ ಮಹಿಳೆ ಹಾಗೂ ಮಾರ್ಚ್ 19ರಂದು ದೃಢಪಟ್ಟ ಮೊದಲ ಸೋಂಕಿತ ಮಹಿಳೆಯು ಮಾರ್ಚ್ 16ರಂದು ಸೌದಿ ಅರೇಬಿಯಾದಿಂದ ಒಂದೇ ವಿಮಾನದಲ್ಲಿ ಶ್ರೀನಗರಕ್ಕೆ ಬಂದಿಳಿದಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಕಾಶ್ಮೀರದಲ್ಲಿ ಮೊದಲ ಬಾರಿಗೆ ಕೋವಿಡ್ –19 ಸೋಂಕು ದೃಢಪಟ್ಟು ಇಲ್ಲಿನ ಎಸ್ಕೆಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ಮಂಗಳವಾರ ಗುಣಮುಖರಾಗಿದ್ದಾರೆ ಎಂದು ಶ್ರೀನಗರದ ಜಿಲ್ಲಾಧಿಕಾರಿ ಶಾಹೀದ್ ಇಕ್ಬಾಲ್ ಚೌಧರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>