ಮುಂಬೈ: ಮಹಾರಾಷ್ಟ್ರದಲ್ಲಿ ಕೆಂಪು ವಲಯಗಳಲ್ಲಿರುವ ವಿಮಾನ ನಿಲ್ದಾಣಗಳು ಕಾರ್ಯಾಚರಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ. ದೇಶೀಯ ವಿಮಾನ ಸಂಚಾರ ಸೋಮವಾರದಿಂದ ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸ್ಪಷ್ಟನೆ ನೀಡಿದೆ.
ಕೆಂಪು ವಲಯಗಳಲ್ಲಿ ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಮಾಡಬೇಕು ಎಂದು ಸಲಹೆ ನೀಡುವುದು ಸಾಧುವಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಪುಣೆ, ನಾಗ್ಪುರದಲ್ಲಿರುವ ವಿಮಾನ ನಿಲ್ದಾಣಗಳು ಕೆಂಪು ವಲಯಗಳಲ್ಲಿ ಬರುತ್ತವೆ.