<p><strong>ಮುಂಬೈ:</strong> ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಏಪ್ರಿಲ್ 14ರ ವರೆಗೂ ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿದ್ದು, ಏಪ್ರಿಲ್ 30ರ ವರೆಗೂ ನಿರ್ಬಂಧ ಮುಂದುವರಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.</p>.<p>ಒಡಿಶಾ, ಪಂಜಾಬ್ ನಂತರ ಮಹಾರಾಷ್ಟ್ರ ಲಾಕ್ಡೌನ್ ವಿಸ್ತರಣೆ ಘೋಷಿಸಿದೆ. 'ಮಹಾರಾಷ್ಟ್ರದಲ್ಲಿ ಮೊದಲ ಕೋವಿಡ್–19 ಪ್ರಕರಣ ವರದಿಯಾಗಿ ಮುಂದಿನ ಸೋಮವಾರಕ್ಕೆ 5 ವಾರಗಳಾಗಲಿವೆ. ಈವರೆಗೂ ಸೋಂಕು ಪ್ರಕರಣಗಳು ದುಪ್ಪಟ್ಟಾಗದಂತೆ ನಡೆಯುವಲ್ಲಿ ಸ್ವಲ್ಪ ಮಟ್ಟಿನ ಯಶಸ್ಸು ಸಾಧಿಸಿದ್ದೇವೆ. ಏಪ್ರಿಲ್ 30ರ ವರೆಗೂ ಲಾಕ್ಡೌನ್ ವಿಸ್ತರಣೆಯಾಗಲಿದೆ' ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>.<p>'ಕೆಲವು ಭಾಗಗಳಲ್ಲಿ ಸಡಿಲಿಕೆ ನೀಡಬಹುದಾಗಿದೆ. ಆ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಅದೆಲ್ಲವೂ ಲಾಕ್ಡೌನ್ ವೇಳೆ ಜನರು ಹೇಗೆ ವರ್ತಿಸುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ದಿನಸಿ ಖರೀದಿಸುವಾಗ ಗುಂಪುಗೂಡಬೇಡಿ ಹಾಗೂ ಯಾರಿಗೆಲ್ಲ ಸಾಧ್ಯವೋ ಅವರೆಲ್ಲರೂ ಮನೆಯಿಂದಲೇ ಕಾರ್ಯನಿರ್ವಹಿಸಿ' ಎಂದು ಸಲಹೆ ನೀಡಿದ್ದಾರೆ.</p>.<p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಲಾಕ್ಡೌನ್ ವಿಸ್ತರಣೆ ಕುರಿತು ಮಾಹಿತಿ ನೀಡಿದ್ದಾರೆ.</p>.<p>'ಆರು ಹೊಸ ಪ್ರಕರಣಗಳು ಸೇರಿದಂತೆ ಪಶ್ಚಿಮ ಬಂಗಾಳದಲ್ಲಿ 95 ಕೊರೊನಾ ವೈರಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಕರಿಗಳು ತೆರೆಯಲು ಅವಕಾಶ ನೀಡಲಾಗುತ್ತಿದ್ದು, ನಿಯಮಗಳ ಉಲ್ಲಂಘನೆಯಾಗದಂತೆ ಪಾಲಿಸಬೇಕಾಗುತ್ತದೆ. ಜೂನ್ 10ರ ವರೆಗೂ ಶಾಲೆಗಳು ತೆರೆಯುವುದಿಲ್ಲ' ಎಂದು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಏಪ್ರಿಲ್ 14ರ ವರೆಗೂ ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿದ್ದು, ಏಪ್ರಿಲ್ 30ರ ವರೆಗೂ ನಿರ್ಬಂಧ ಮುಂದುವರಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.</p>.<p>ಒಡಿಶಾ, ಪಂಜಾಬ್ ನಂತರ ಮಹಾರಾಷ್ಟ್ರ ಲಾಕ್ಡೌನ್ ವಿಸ್ತರಣೆ ಘೋಷಿಸಿದೆ. 'ಮಹಾರಾಷ್ಟ್ರದಲ್ಲಿ ಮೊದಲ ಕೋವಿಡ್–19 ಪ್ರಕರಣ ವರದಿಯಾಗಿ ಮುಂದಿನ ಸೋಮವಾರಕ್ಕೆ 5 ವಾರಗಳಾಗಲಿವೆ. ಈವರೆಗೂ ಸೋಂಕು ಪ್ರಕರಣಗಳು ದುಪ್ಪಟ್ಟಾಗದಂತೆ ನಡೆಯುವಲ್ಲಿ ಸ್ವಲ್ಪ ಮಟ್ಟಿನ ಯಶಸ್ಸು ಸಾಧಿಸಿದ್ದೇವೆ. ಏಪ್ರಿಲ್ 30ರ ವರೆಗೂ ಲಾಕ್ಡೌನ್ ವಿಸ್ತರಣೆಯಾಗಲಿದೆ' ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>.<p>'ಕೆಲವು ಭಾಗಗಳಲ್ಲಿ ಸಡಿಲಿಕೆ ನೀಡಬಹುದಾಗಿದೆ. ಆ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಅದೆಲ್ಲವೂ ಲಾಕ್ಡೌನ್ ವೇಳೆ ಜನರು ಹೇಗೆ ವರ್ತಿಸುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ದಿನಸಿ ಖರೀದಿಸುವಾಗ ಗುಂಪುಗೂಡಬೇಡಿ ಹಾಗೂ ಯಾರಿಗೆಲ್ಲ ಸಾಧ್ಯವೋ ಅವರೆಲ್ಲರೂ ಮನೆಯಿಂದಲೇ ಕಾರ್ಯನಿರ್ವಹಿಸಿ' ಎಂದು ಸಲಹೆ ನೀಡಿದ್ದಾರೆ.</p>.<p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಲಾಕ್ಡೌನ್ ವಿಸ್ತರಣೆ ಕುರಿತು ಮಾಹಿತಿ ನೀಡಿದ್ದಾರೆ.</p>.<p>'ಆರು ಹೊಸ ಪ್ರಕರಣಗಳು ಸೇರಿದಂತೆ ಪಶ್ಚಿಮ ಬಂಗಾಳದಲ್ಲಿ 95 ಕೊರೊನಾ ವೈರಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಕರಿಗಳು ತೆರೆಯಲು ಅವಕಾಶ ನೀಡಲಾಗುತ್ತಿದ್ದು, ನಿಯಮಗಳ ಉಲ್ಲಂಘನೆಯಾಗದಂತೆ ಪಾಲಿಸಬೇಕಾಗುತ್ತದೆ. ಜೂನ್ 10ರ ವರೆಗೂ ಶಾಲೆಗಳು ತೆರೆಯುವುದಿಲ್ಲ' ಎಂದು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>