<p><strong>ನವದೆಹಲಿ:</strong> ವಿಶ್ವದಾದ್ಯಂತ ಕೋವಿಡ್-19 ಸೋಂಕು ವ್ಯಾಪಿಸುತ್ತಲೇ ಇದ್ದು, 3 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿಪಡೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು, ಜನರು ಒಂದೆಡೆ ಒಟ್ಟಾಗಿ ಸೇರುವುದನ್ನು ತಪ್ಪಿಸಿ ಎಂದು ಶುಕ್ರವಾರ ಸೂಚಿಸಿದೆ. </p>.<p>ಈ ಕುರಿತು ಟ್ವೀಟ್ ಮಾಡಿದ್ದು, ಕೋವಿಡ್-19 ಸೋಂಕು ಹರಡುವಿಕೆಯು ನಿಯಂತ್ರಣಕ್ಕೆ ಬರುವವರೆಗೂ ಸಾಮೂಹಿಕ ಕೂಟಗಳನ್ನು ತಪ್ಪಿಸಬಹುದು ಅಥವಾ ಮುಂದೂಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.</p>.<p>ಒಂದು ವೇಳೆ ಜನರು ಸಾಮೂಹಿಕವಾಗಿ ಒಂದೆಡೆ ಸೇರುವಂತ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇ ಆದರೆ ರಾಜ್ಯ ಸರ್ಕಾರಗಳು ಆಯೋಜಕರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದೆ.</p>.<p>ಕೋವಿಡ್-19 ಸೋಂಕು ಹರಡುವಿಕೆಯು ಅಂತರರಾಷ್ಟ್ರೀಯ ಡ್ರಿಲ್ ಅಲ್ಲ ಮತ್ತು ಏಕಾ ಏಕಿ ಹರಡುತ್ತಿರುವ ಸೋಂಕನ್ನು ತಡೆಯಬೇಕಾದರೆ ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕರು ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ವಿಶ್ವದಾದ್ಯಂತ ಕೋವಿಡ್-19 ಸೋಂಕಿಗೆ ಒಳಗಾಗಿರುವವರ ಸಂಖ್ಯೆಯು ಸುಮಾರು 10 ಸಾವಿರದ ಗಡಿ ತಲುಪಿದೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಶ್ವದಾದ್ಯಂತ ಕೋವಿಡ್-19 ಸೋಂಕು ವ್ಯಾಪಿಸುತ್ತಲೇ ಇದ್ದು, 3 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿಪಡೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು, ಜನರು ಒಂದೆಡೆ ಒಟ್ಟಾಗಿ ಸೇರುವುದನ್ನು ತಪ್ಪಿಸಿ ಎಂದು ಶುಕ್ರವಾರ ಸೂಚಿಸಿದೆ. </p>.<p>ಈ ಕುರಿತು ಟ್ವೀಟ್ ಮಾಡಿದ್ದು, ಕೋವಿಡ್-19 ಸೋಂಕು ಹರಡುವಿಕೆಯು ನಿಯಂತ್ರಣಕ್ಕೆ ಬರುವವರೆಗೂ ಸಾಮೂಹಿಕ ಕೂಟಗಳನ್ನು ತಪ್ಪಿಸಬಹುದು ಅಥವಾ ಮುಂದೂಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.</p>.<p>ಒಂದು ವೇಳೆ ಜನರು ಸಾಮೂಹಿಕವಾಗಿ ಒಂದೆಡೆ ಸೇರುವಂತ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇ ಆದರೆ ರಾಜ್ಯ ಸರ್ಕಾರಗಳು ಆಯೋಜಕರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದೆ.</p>.<p>ಕೋವಿಡ್-19 ಸೋಂಕು ಹರಡುವಿಕೆಯು ಅಂತರರಾಷ್ಟ್ರೀಯ ಡ್ರಿಲ್ ಅಲ್ಲ ಮತ್ತು ಏಕಾ ಏಕಿ ಹರಡುತ್ತಿರುವ ಸೋಂಕನ್ನು ತಡೆಯಬೇಕಾದರೆ ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕರು ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ವಿಶ್ವದಾದ್ಯಂತ ಕೋವಿಡ್-19 ಸೋಂಕಿಗೆ ಒಳಗಾಗಿರುವವರ ಸಂಖ್ಯೆಯು ಸುಮಾರು 10 ಸಾವಿರದ ಗಡಿ ತಲುಪಿದೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>