<p><strong>ನವದೆಹಲಿ: </strong>ದೇಶದಲ್ಲಿ<strong></strong>ಕೊರೊನಾ ವೈರಸ್ ಸೋಂಕು (ಕೋವಿಡ್–19) ತಗುಲಿರುವವರ ಸಂಖ್ಯೆಶನಿವಾರ ಬೆಳಿಗ್ಗೆ 871 ತಲುಪಿದ್ದು, ಅಮೆರಿಕದಲ್ಲಿ 1 ಲಕ್ಷ ದಾಟಿದೆ.</p>.<p>ಭಾರತದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅಮೆರಿಕದಲ್ಲಿ ಸೋಂಕಿನಿಂದ1,704 ಮಂದಿ ಮೃತಪಟ್ಟಿದ್ದು,ನ್ಯೂಯಾರ್ಕ್ನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<p>ಮಹಾರಾಷ್ಟ್ರ, ಗುಜರಾತ್, ಶ್ರೀನಗರ ಮತ್ತು ಕರ್ನಾಟಕಗಳಲ್ಲಿ ಸೋಂಕಿನಿಂದ ಸಾವುಗಳು ಸಂಭವಿಸಿವೆ. ಗುಜರಾತ್ನಲ್ಲಿ ಶನಿವಾರ ಆರು ಹೊಸ ಪ್ರಕರಣ, ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಐದುಹೊಸ ಪ್ರಕರಣ ದೃಢಪಟ್ಟಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/covid-19-cases-confirmed-in-chikkaballapura-715624.html" target="_blank">ಚಿಕ್ಕಬಳ್ಳಾಪುರದಲ್ಲಿ ಮತ್ತೆ 5 ಜನರಲ್ಲಿ ಕೋವಿಡ್-19 ದೃಢ, ಬಾಧಿತರ ಸಂಖ್ಯೆ 9ಕ್ಕೆ</a></p>.<p>ಗುಜರಾತ್ನಲ್ಲಿ ಮೂರು ಕೋವಿಡ್–19 ಪ್ರಕರಣಗಳು ಶುಕ್ರವಾರದೃಢಪಟ್ಟಿದ್ದು, ಆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿತ್ತು. ಹೊಸ ಪ್ರಕರಣಗಳೆಲ್ಲ ರಾಜ್ಕೋಟ್ನಲ್ಲಿ ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಜಯಂತಿ ರವಿ ತಿಳಿಸಿದ್ದರು.</p>.<p>ತಮಿಳುನಾಡಿನ 9 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.</p>.<p>ಪಶ್ಚಿಮ ಬಂಗಾಳದಲ್ಲಿ ಅನೇಕ ವಲಸೆ ಕಾರ್ಮಿಕರು ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮರಳುತ್ತಿರುವುದು ಮತ್ತು ಹೋಂ ಕ್ವಾರಂಟೈನ್ ಉಲ್ಲಂಘಿಸುತ್ತಿರುವುದು ಸೋಂಕು ಹರಡುವಿಕೆ ಭೀತಿ ಹೆಚ್ಚಲು ಕಾರಣವಾಗಿದೆ.</p>.<p><strong>ಶುಕ್ರವಾರ ಒಂದೇ ದಿನ 140ಕ್ಕೂ ಹೆಚ್ಚು ಪ್ರಕರಣ</strong></p>.<p>ಶುಕ್ರವಾರ ಒಂದೇ ದಿನ ದೇಶದಲ್ಲಿ 140ಕ್ಕೂ ಹೆಚ್ಚು ಕೋವಿಡ್–19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆದರೆ, ಸರ್ಕಾರದ ಮಾಹಿತಿ ಪ್ರಕಾರ, ಶನಿವಾರ ಮುಂಜಾವ 3 ಗಂಟೆವರೆಗೆ 75 ಹೊಸ ಪ್ರಕರಣಗಳಷ್ಟೇ ದೃಢಪಟ್ಟಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/corona-death-toll-rises-to-3-in-the-state-715606.html" itemprop="url" target="_blank">ಕೊರೊನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ</a></p>.<p>ಒಟ್ಟಾರೆಯಾಗಿ ಶನಿವಾರದ ವೇಳೆಗೆ 66 ಜನ ಗುಣಮುಖರಾಗಿ ಮನೆಗೆ ಮರಳಿದ್ದು, 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಲ್ಲಿ<strong></strong>ಕೊರೊನಾ ವೈರಸ್ ಸೋಂಕು (ಕೋವಿಡ್–19) ತಗುಲಿರುವವರ ಸಂಖ್ಯೆಶನಿವಾರ ಬೆಳಿಗ್ಗೆ 871 ತಲುಪಿದ್ದು, ಅಮೆರಿಕದಲ್ಲಿ 1 ಲಕ್ಷ ದಾಟಿದೆ.</p>.<p>ಭಾರತದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅಮೆರಿಕದಲ್ಲಿ ಸೋಂಕಿನಿಂದ1,704 ಮಂದಿ ಮೃತಪಟ್ಟಿದ್ದು,ನ್ಯೂಯಾರ್ಕ್ನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<p>ಮಹಾರಾಷ್ಟ್ರ, ಗುಜರಾತ್, ಶ್ರೀನಗರ ಮತ್ತು ಕರ್ನಾಟಕಗಳಲ್ಲಿ ಸೋಂಕಿನಿಂದ ಸಾವುಗಳು ಸಂಭವಿಸಿವೆ. ಗುಜರಾತ್ನಲ್ಲಿ ಶನಿವಾರ ಆರು ಹೊಸ ಪ್ರಕರಣ, ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಐದುಹೊಸ ಪ್ರಕರಣ ದೃಢಪಟ್ಟಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/covid-19-cases-confirmed-in-chikkaballapura-715624.html" target="_blank">ಚಿಕ್ಕಬಳ್ಳಾಪುರದಲ್ಲಿ ಮತ್ತೆ 5 ಜನರಲ್ಲಿ ಕೋವಿಡ್-19 ದೃಢ, ಬಾಧಿತರ ಸಂಖ್ಯೆ 9ಕ್ಕೆ</a></p>.<p>ಗುಜರಾತ್ನಲ್ಲಿ ಮೂರು ಕೋವಿಡ್–19 ಪ್ರಕರಣಗಳು ಶುಕ್ರವಾರದೃಢಪಟ್ಟಿದ್ದು, ಆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿತ್ತು. ಹೊಸ ಪ್ರಕರಣಗಳೆಲ್ಲ ರಾಜ್ಕೋಟ್ನಲ್ಲಿ ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಜಯಂತಿ ರವಿ ತಿಳಿಸಿದ್ದರು.</p>.<p>ತಮಿಳುನಾಡಿನ 9 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.</p>.<p>ಪಶ್ಚಿಮ ಬಂಗಾಳದಲ್ಲಿ ಅನೇಕ ವಲಸೆ ಕಾರ್ಮಿಕರು ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮರಳುತ್ತಿರುವುದು ಮತ್ತು ಹೋಂ ಕ್ವಾರಂಟೈನ್ ಉಲ್ಲಂಘಿಸುತ್ತಿರುವುದು ಸೋಂಕು ಹರಡುವಿಕೆ ಭೀತಿ ಹೆಚ್ಚಲು ಕಾರಣವಾಗಿದೆ.</p>.<p><strong>ಶುಕ್ರವಾರ ಒಂದೇ ದಿನ 140ಕ್ಕೂ ಹೆಚ್ಚು ಪ್ರಕರಣ</strong></p>.<p>ಶುಕ್ರವಾರ ಒಂದೇ ದಿನ ದೇಶದಲ್ಲಿ 140ಕ್ಕೂ ಹೆಚ್ಚು ಕೋವಿಡ್–19 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆದರೆ, ಸರ್ಕಾರದ ಮಾಹಿತಿ ಪ್ರಕಾರ, ಶನಿವಾರ ಮುಂಜಾವ 3 ಗಂಟೆವರೆಗೆ 75 ಹೊಸ ಪ್ರಕರಣಗಳಷ್ಟೇ ದೃಢಪಟ್ಟಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/corona-death-toll-rises-to-3-in-the-state-715606.html" itemprop="url" target="_blank">ಕೊರೊನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ</a></p>.<p>ಒಟ್ಟಾರೆಯಾಗಿ ಶನಿವಾರದ ವೇಳೆಗೆ 66 ಜನ ಗುಣಮುಖರಾಗಿ ಮನೆಗೆ ಮರಳಿದ್ದು, 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>