ಮಹಾರಾಜ್ಗಂಜ್: ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರವು ಗರಿಷ್ಠ ಮಟ್ಟದಲ್ಲಿದ್ದು, ಸರ್ಕಾರಿ ಕೆಲಸಗಳಿಗೆ ಶೇ 28ರಿಂದ ಶೇ 40ರವರೆಗೆ ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.
ನೌತಾನ್ವದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ಮೋದಿ ಸರ್ಕಾರವು 9 ವರ್ಷಗಳಲ್ಲಿ ₹150 ಲಕ್ಷ ಕೋಟಿ ಸಾಲ ಪಡೆದಿದೆ. ಅದು 1947–2014ರ ನಡುವೆ ಮಾಡಿದ ಸಾಲಕ್ಕಿಂತ ಮೂರು ಪಟ್ಟು ಹೆಚ್ಚು’ ಎಂದು ತಿಳಿಸಿದರು.
‘ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸಲಿದ್ದು, ಅದಕ್ಕಾಗಿಯೇ ಅವರು 400 ಸ್ಥಾನ ಬಯಸುತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟರು.